ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಹಿಂದೆ ಇದೇ ಸ್ಥಳದಲ್ಲಿ ರ್ಯಾಲಿ ನಡೆಸಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ‘ಅಡ್ಡಿಪಡಿಸುವಿಕೆ ಮನಸ್ಥಿತಿ’ಯಿಂದಾಗಿ ಪಶ್ಚಿಮ ಬಂಗಾಳವು ಕೈಗಾರಿಕೆಗಳು ಮತ್ತು ಉದ್ಯೋಗದಿಂದ ವಂಚಿತವಾಗಿದೆ ಎಂದು ಮೋದಿ ಆರೋಪಿಸಿದ್ದರು. ರಾಜ್ಯದಲ್ಲಿ ಕೈಗಾರಿಕೆಗಳು ಕುಗ್ಗುತ್ತಿವೆ ಮತ್ತು ಉದ್ಯೋಗ ನಷ್ಟವಾಗುತ್ತಿದೆ ಎಂಬ ಆರೋಪವನ್ನು ಮಮತಾ ವಿರುದ್ಧ ಬಿಜೆಪಿ ಬಳಸುತ್ತಿದೆ.