<p><strong>ಶ್ರೀನಗರ:</strong> ಭಯೋತ್ಪಾದನೆಯನ್ನು ಮೋದಿ ಸರ್ಕಾರ ಸಹಿಸುವುದೇ ಇಲ್ಲ. ಜಮ್ಮು–ಕಾಶ್ಮೀರದಲ್ಲಿ ಈಗ ಸ್ವಲ್ಪ ಪರಿಸ್ಥಿತಿ ಸುಧಾರಿಸಿದೆ. ಆದರೆ ಸಂಪೂರ್ಣ ಶಾಂತಿ ನೆಲೆಸುವವರೆಗೂ ನಮಗೆ ತೃಪ್ತಿಯಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಅವರು ಪುಲ್ವಾಮಾದ ಲೆಥ್ಪೊರಾ ಪ್ರದೇಶದಲ್ಲಿ ಸಿಆರ್ಪಿಎಫ್ ಶಿಬಿರದಲ್ಲಿ ಸೋಮವಾರ ರಾತ್ರಿ ಕಳೆದರು. 2019ರ ಫೆಬ್ರುವರಿಯಲ್ಲಿ ಇದೇ ಪ್ರದೇಶದಲ್ಲಿ ಉಗ್ರರು ನಡೆಸಿದ್ದ ಕಾರ್ ಬಾಂಬ್ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.</p>.<p><strong>ಓದಿ:</strong><a href="https://www.prajavani.net/india-news/would-rather-talk-to-jammu-and-kashmir-youth-for-development-amit-shah-on-nc-chief-seeking-talks-878489.html" itemprop="url">ಪಾಕ್ ಜತೆಗೆ ಮಾತುಕತೆಗೆ ಸಲಹೆ: ಫಾರೂಕ್ ಅಬ್ದುಲ್ಲಾ ವಿರುದ್ಧ ಅಮಿತ್ ಶಾ ವಾಗ್ದಾಳಿ</a></p>.<p>‘ನಿಮ್ಮ ಸಮಸ್ಯೆಗಳನ್ನು ಅರಿತುಕೊಳ್ಳುವುದಕ್ಕಾಗಿ ನಿಮ್ಮ ಜತೆ ಒಂದು ರಾತ್ರಿ ಕಳೆಯಲು ಬಂದಿದ್ದೇನೆ. ಜಮ್ಮು–ಕಾಶ್ಮೀರ ಭೇಟಿಯಲ್ಲಿ ಇದುವೇ ನನಗೆ ಬಹು ಮುಖ್ಯವಾದ ಅಂಶ’ ಎಂದು ಭದ್ರತಾ ಸಿಬ್ಬಂದಿಯನ್ನು ಉದ್ದೇಶಿಸಿ ಶಾ ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರದಲ್ಲಿ ಈಗ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಜೀವಿತಾವಧಿಯಲ್ಲಿ ನಾವು ಶಾಂತಿಯುತ ಜಮ್ಮು–ಕಾಶ್ಮೀರವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>‘ಕಲ್ಲುತೂರಾಟ ಘಟನೆಗಳು ಈಗ ಅತಿ ವಿರಳವಾಗಿವೆ. ಕೆಲವು ಸಮಯ ಹಿಂದೆ ಕಾಶ್ಮೀರದಲ್ಲಿ ಕಲ್ಲುತೂರಾಟ ಸಾಮಾನ್ಯವಾಗಿತ್ತು. ಇಂಥ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿವೆ. ಆದರೆ ಇದರಿಂದ ನಾವು ತೃಪ್ತಿಪಟ್ಟುಕೊಳ್ಳುವಂತಿಲ್ಲ’ ಎಂದು ಶಾ ಹೇಳಿದ್ದಾರೆ.</p>.<p>‘ಭಯೋತ್ಪಾದನೆ ವಿರುದ್ಧ ಮೋದಿ ಸರ್ಕಾರ ಶೂನ್ಯ ಸಹನೆ ಹೊಂದಿದೆ. ನಾವದನ್ನು ಸಹಿಸಲಾರೆವು. ಅದು ಮಾನವೀಯತೆಗೆ ವಿರುದ್ಧವಾದದ್ದು. ಮಾನವೀಯತೆಯ ವಿರೋಧಿಗಳು ಹಾಗೂ ಕ್ರೌರ್ಯ ಎಸಗುವವರಿಂದ ಕಾಶ್ಮೀರದ ಜನರನ್ನು ರಕ್ಷಿವುಸುವುದು ನಮ್ಮ ಆದ್ಯತೆ’ ಎಂದು ಶಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/gujarat-ats-arrests-bsf-man-from-bhuj-headquarters-for-spying-for-pakistan-878622.html" itemprop="url">ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ: ಬಿಎಸ್ಎಫ್ ಕಾನ್ಸ್ಟೆಬಲ್ ಬಂಧನ</a></p>.<p>370ನೇ ವಿಧಿಯ ರದ್ದತಿ ಬಳಿಕ ಜಮ್ಮು–ಕಾಶ್ಮೀರದಲ್ಲಿ ರಕ್ತಪಾತವಾಗದಂತೆ ನೋಡಿಕೊಂಡದ್ದಕ್ಕಾಗಿ ಸಿಆರ್ಪಿಎಫ್ ಹಾಗೂ ಇತರ ಭದ್ರತಾ ಸಿಬ್ಬಂದಿಗೆ ಅಮಿತ್ ಶಾ ಕೃತಜ್ಞತೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಭಯೋತ್ಪಾದನೆಯನ್ನು ಮೋದಿ ಸರ್ಕಾರ ಸಹಿಸುವುದೇ ಇಲ್ಲ. ಜಮ್ಮು–ಕಾಶ್ಮೀರದಲ್ಲಿ ಈಗ ಸ್ವಲ್ಪ ಪರಿಸ್ಥಿತಿ ಸುಧಾರಿಸಿದೆ. ಆದರೆ ಸಂಪೂರ್ಣ ಶಾಂತಿ ನೆಲೆಸುವವರೆಗೂ ನಮಗೆ ತೃಪ್ತಿಯಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರ ಪ್ರವಾಸದಲ್ಲಿರುವ ಅವರು ಪುಲ್ವಾಮಾದ ಲೆಥ್ಪೊರಾ ಪ್ರದೇಶದಲ್ಲಿ ಸಿಆರ್ಪಿಎಫ್ ಶಿಬಿರದಲ್ಲಿ ಸೋಮವಾರ ರಾತ್ರಿ ಕಳೆದರು. 2019ರ ಫೆಬ್ರುವರಿಯಲ್ಲಿ ಇದೇ ಪ್ರದೇಶದಲ್ಲಿ ಉಗ್ರರು ನಡೆಸಿದ್ದ ಕಾರ್ ಬಾಂಬ್ ದಾಳಿಯಲ್ಲಿ 40 ಮಂದಿ ಸಿಆರ್ಪಿಎಫ್ ಯೋಧರು ಹುತಾತ್ಮರಾಗಿದ್ದರು.</p>.<p><strong>ಓದಿ:</strong><a href="https://www.prajavani.net/india-news/would-rather-talk-to-jammu-and-kashmir-youth-for-development-amit-shah-on-nc-chief-seeking-talks-878489.html" itemprop="url">ಪಾಕ್ ಜತೆಗೆ ಮಾತುಕತೆಗೆ ಸಲಹೆ: ಫಾರೂಕ್ ಅಬ್ದುಲ್ಲಾ ವಿರುದ್ಧ ಅಮಿತ್ ಶಾ ವಾಗ್ದಾಳಿ</a></p>.<p>‘ನಿಮ್ಮ ಸಮಸ್ಯೆಗಳನ್ನು ಅರಿತುಕೊಳ್ಳುವುದಕ್ಕಾಗಿ ನಿಮ್ಮ ಜತೆ ಒಂದು ರಾತ್ರಿ ಕಳೆಯಲು ಬಂದಿದ್ದೇನೆ. ಜಮ್ಮು–ಕಾಶ್ಮೀರ ಭೇಟಿಯಲ್ಲಿ ಇದುವೇ ನನಗೆ ಬಹು ಮುಖ್ಯವಾದ ಅಂಶ’ ಎಂದು ಭದ್ರತಾ ಸಿಬ್ಬಂದಿಯನ್ನು ಉದ್ದೇಶಿಸಿ ಶಾ ಹೇಳಿದ್ದಾರೆ.</p>.<p>ಜಮ್ಮು–ಕಾಶ್ಮೀರದಲ್ಲಿ ಈಗ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಜೀವಿತಾವಧಿಯಲ್ಲಿ ನಾವು ಶಾಂತಿಯುತ ಜಮ್ಮು–ಕಾಶ್ಮೀರವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.</p>.<p>‘ಕಲ್ಲುತೂರಾಟ ಘಟನೆಗಳು ಈಗ ಅತಿ ವಿರಳವಾಗಿವೆ. ಕೆಲವು ಸಮಯ ಹಿಂದೆ ಕಾಶ್ಮೀರದಲ್ಲಿ ಕಲ್ಲುತೂರಾಟ ಸಾಮಾನ್ಯವಾಗಿತ್ತು. ಇಂಥ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿವೆ. ಆದರೆ ಇದರಿಂದ ನಾವು ತೃಪ್ತಿಪಟ್ಟುಕೊಳ್ಳುವಂತಿಲ್ಲ’ ಎಂದು ಶಾ ಹೇಳಿದ್ದಾರೆ.</p>.<p>‘ಭಯೋತ್ಪಾದನೆ ವಿರುದ್ಧ ಮೋದಿ ಸರ್ಕಾರ ಶೂನ್ಯ ಸಹನೆ ಹೊಂದಿದೆ. ನಾವದನ್ನು ಸಹಿಸಲಾರೆವು. ಅದು ಮಾನವೀಯತೆಗೆ ವಿರುದ್ಧವಾದದ್ದು. ಮಾನವೀಯತೆಯ ವಿರೋಧಿಗಳು ಹಾಗೂ ಕ್ರೌರ್ಯ ಎಸಗುವವರಿಂದ ಕಾಶ್ಮೀರದ ಜನರನ್ನು ರಕ್ಷಿವುಸುವುದು ನಮ್ಮ ಆದ್ಯತೆ’ ಎಂದು ಶಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/gujarat-ats-arrests-bsf-man-from-bhuj-headquarters-for-spying-for-pakistan-878622.html" itemprop="url">ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ: ಬಿಎಸ್ಎಫ್ ಕಾನ್ಸ್ಟೆಬಲ್ ಬಂಧನ</a></p>.<p>370ನೇ ವಿಧಿಯ ರದ್ದತಿ ಬಳಿಕ ಜಮ್ಮು–ಕಾಶ್ಮೀರದಲ್ಲಿ ರಕ್ತಪಾತವಾಗದಂತೆ ನೋಡಿಕೊಂಡದ್ದಕ್ಕಾಗಿ ಸಿಆರ್ಪಿಎಫ್ ಹಾಗೂ ಇತರ ಭದ್ರತಾ ಸಿಬ್ಬಂದಿಗೆ ಅಮಿತ್ ಶಾ ಕೃತಜ್ಞತೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>