<p><strong>ನವದೆಹಲಿ:</strong> ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯು ವಿವಾದಕ್ಕೆ ಗ್ರಾಸವಾಗಿದೆ. </p><p>'ಅಪಘಾತಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ' ಎಂದು ಅಮಿತ್ ಶಾ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. </p><p>'ಈ ಸಮಯದಲ್ಲಿ ಕೇಂದ್ರ ಗೃಹ ಸಚಿವರು ನೀಡಬೇಕಾದ ಹೇಳಿಕೆ ಇದೇನಾ? ಅತ್ಯಂತ ಸಂವೇದನಾ ರಹಿತ ಹೇಳಿಕೆ ಇದಾಗಿದೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾರೆ. </p>. <p>ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಸಹ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿದ್ದಾರೆ. 'ವಿಮಾನ ಅಪಘಾತದಲ್ಲಿ ಜನರು ಮೃತಪಟ್ಟಾಗ, ಈ ತರಹನೇ ಉಪನ್ಯಾಸ ನೀಡುವ ಬದಲು ಗೃಹ ಸಚಿವರು ಕನಿಷ್ಠ ಹೊಣೆಗಾರಿಕೆಯ ಮಾತುಗಳನ್ನು ಆಡಬೇಕಿತ್ತು' ಎಂದು ಹೇಳಿದ್ದಾರೆ. </p><p>'ಅಪಘಾತಗಳನ್ನು ತಡೆಯಲು ಸಾಧ್ಯವಾಗದಿದ್ದರೆ ನಮಗೆ ಸಚಿವಾಲಯಗಳು ಏಕೆ ಬೇಕು' ಎಂದು ಅವರು ಪ್ರಶ್ನಿಸಿದ್ದಾರೆ. </p><p>'ವಿಮಾನ ಅಪಘಾತಗಳು ದೇವರ ಕ್ರಿಯೆಯಲ್ಲ. ಅವುಗಳನ್ನು ತಡೆಯಬಹುದು. ಅದಕ್ಕಾಗಿಯೇ ನಮ್ಮಲ್ಲಿ ವಾಯುಯಾನ ನಿಯಂತ್ರಣ, ಸುರಕ್ಷತಾ ಮಾರ್ಗಸೂಚಿ ಹಾಗೂ ಬಿಕ್ಕಟ್ಟು ನಿಯಂತ್ರಣ ವ್ಯವಸ್ಥೆಗಳಿವೆ' ಎಂದು ಉಲ್ಲೇಖಿಸಿದ್ದಾರೆ. </p><p>'ಆದರೆ ಅದನ್ನು ವಿಧಿಗೆ ಬಿಟ್ಟುಬಿಡಿ ಎಂಬ ಗೃಹ ಸಚಿವರ ಹೇಳಿಕೆಯು ನಾವು ಮೂಲಸೌಕರ್ಯ, ಭದ್ರತೆ ಅಥವಾ ಬಿಕ್ಕಟ್ಟು ನಿಯಂತ್ರಿಸುವುದರ ಮೇಲಿನ ಹೂಡಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೇ' ಎಂದು ಕೇಳಿದ್ದಾರೆ. </p> .Ahmedabad Plane Crash: ವಿಮಾನ ದುರಂತದಲ್ಲಿ ಪಾರಾದ ಬ್ರಿಟನ್ ಪ್ರಜೆ ವಿಶ್ವಾಸ್.Ahmedabad Plane Crash | ಟೇಕಾಫ್ ಆದ 25 ಸೆಕೆಂಡುಗಳಲ್ಲಿ ಪತನಗೊಂಡ ಏರ್ ಇಂಡಿಯಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಯು ವಿವಾದಕ್ಕೆ ಗ್ರಾಸವಾಗಿದೆ. </p><p>'ಅಪಘಾತಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ' ಎಂದು ಅಮಿತ್ ಶಾ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. </p><p>'ಈ ಸಮಯದಲ್ಲಿ ಕೇಂದ್ರ ಗೃಹ ಸಚಿವರು ನೀಡಬೇಕಾದ ಹೇಳಿಕೆ ಇದೇನಾ? ಅತ್ಯಂತ ಸಂವೇದನಾ ರಹಿತ ಹೇಳಿಕೆ ಇದಾಗಿದೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾರೆ. </p>. <p>ಎಐಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪವನ್ ಖೇರಾ ಸಹ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿದ್ದಾರೆ. 'ವಿಮಾನ ಅಪಘಾತದಲ್ಲಿ ಜನರು ಮೃತಪಟ್ಟಾಗ, ಈ ತರಹನೇ ಉಪನ್ಯಾಸ ನೀಡುವ ಬದಲು ಗೃಹ ಸಚಿವರು ಕನಿಷ್ಠ ಹೊಣೆಗಾರಿಕೆಯ ಮಾತುಗಳನ್ನು ಆಡಬೇಕಿತ್ತು' ಎಂದು ಹೇಳಿದ್ದಾರೆ. </p><p>'ಅಪಘಾತಗಳನ್ನು ತಡೆಯಲು ಸಾಧ್ಯವಾಗದಿದ್ದರೆ ನಮಗೆ ಸಚಿವಾಲಯಗಳು ಏಕೆ ಬೇಕು' ಎಂದು ಅವರು ಪ್ರಶ್ನಿಸಿದ್ದಾರೆ. </p><p>'ವಿಮಾನ ಅಪಘಾತಗಳು ದೇವರ ಕ್ರಿಯೆಯಲ್ಲ. ಅವುಗಳನ್ನು ತಡೆಯಬಹುದು. ಅದಕ್ಕಾಗಿಯೇ ನಮ್ಮಲ್ಲಿ ವಾಯುಯಾನ ನಿಯಂತ್ರಣ, ಸುರಕ್ಷತಾ ಮಾರ್ಗಸೂಚಿ ಹಾಗೂ ಬಿಕ್ಕಟ್ಟು ನಿಯಂತ್ರಣ ವ್ಯವಸ್ಥೆಗಳಿವೆ' ಎಂದು ಉಲ್ಲೇಖಿಸಿದ್ದಾರೆ. </p><p>'ಆದರೆ ಅದನ್ನು ವಿಧಿಗೆ ಬಿಟ್ಟುಬಿಡಿ ಎಂಬ ಗೃಹ ಸಚಿವರ ಹೇಳಿಕೆಯು ನಾವು ಮೂಲಸೌಕರ್ಯ, ಭದ್ರತೆ ಅಥವಾ ಬಿಕ್ಕಟ್ಟು ನಿಯಂತ್ರಿಸುವುದರ ಮೇಲಿನ ಹೂಡಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕೇ' ಎಂದು ಕೇಳಿದ್ದಾರೆ. </p> .Ahmedabad Plane Crash: ವಿಮಾನ ದುರಂತದಲ್ಲಿ ಪಾರಾದ ಬ್ರಿಟನ್ ಪ್ರಜೆ ವಿಶ್ವಾಸ್.Ahmedabad Plane Crash | ಟೇಕಾಫ್ ಆದ 25 ಸೆಕೆಂಡುಗಳಲ್ಲಿ ಪತನಗೊಂಡ ಏರ್ ಇಂಡಿಯಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>