ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಯೋಜಿಸಿದ್ದ ಇಫ್ತಾರ್ ಕೂಟದ ಬಗ್ಗೆ ಕೇಂದ್ರ ಸಚಿವಗಿರಿರಾಜ್ ಅವರಟ್ವೀಟ್ ವಿವಾದ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ರೀತಿಯ ಹೇಳಿಕೆಗಳಿಂದ ದೂರವಿರಿ ಎಂದು ಹೇಳಿದ್ದಾರೆ.
ಅಮಿತ್ ಶಾ ಅವರು ಗಿರಿರಾಜ್ ಸಿಂಗ್ ಅವರಿಗೆ ಫೋನ್ ಮಾಡಿ ಈ ರೀತಿಯ ಹೇಳಿಕೆ ನೀಡಬೇಡಿ ಎಂದು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಮಾಧ್ಯಮಗಳು ಸುದ್ದಿ ಮಾಡಲಿ ಎಂಬ ಕಾರಣಕ್ಕಾಗಿ ಗಿರಿರಾಜ್ ಸಿಂಗ್ ಇದೆಲ್ಲಾ ಮಾಡುತ್ತಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ನೇತಾರ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದರು.ನಿತೀಶ್ ಕುಮಾರ್ ಪ್ರತಿಕ್ರಿಯೆ ಬೆನ್ನಲ್ಲೇ ಅಮಿತ್ ಶಾ ಅವರು ಗಿರಿರಾಜ್ ಸಿಂಗ್ಗೆ ತಾಕೀತು ನೀಡಿದ್ದಾರೆ.