ಅನಿಲ ಸೋರಿಕೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ವಿರೋಧ ಪಕ್ಷಗಳು ಗೊತ್ತುವಳಿ ಮಂಡಿಸಿದ ಹಿನ್ನೆಲೆ ಮಾಹಿತಿ ನೀಡಿದ ಸಚಿವರು, ‘7 ಜನರ ತಾಂತ್ರಿಕ ಸಮಿತಿಯು ವರದಿ ಸಲ್ಲಿಸಿದ ಬಳಿಕ, ಟಿಎನ್ಪಿಸಿಬಿಯು ಫೆಬ್ರವರಿ 2ರಂದು ಸಿಐಎಲ್ ಕಂಪನಿಗೆ ನೋಟಿಸ್ ಜಾರಿ ಮಾಡಿತ್ತು. ಕಂಪನಿಯು ಪರಿಹಾರವನ್ನು ನೀಡಲು ಒಪ್ಪಿಕೊಂಡಿದೆ’ ಎಂದು ತಿಳಿಸಿದರು.