<p><strong>ಚಂಡೀಗಢ:</strong> ಅಮೃತಸರದ ಠಾಕೂರ್ ದ್ವಾರ ದೇಗುಲದ ಸಮೀಪ ಮಾರ್ಚ್ 15ರಂದು ನಡೆದ ಸ್ಫೋಟ ಪ್ರರಣದ ಶಂಕಿತ ಆರೋಪಿ ಗುಂಡಿನ ಚಕಮಕಿಯಲ್ಲಿ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p><p>ಮತ್ತೊಬ್ಬ ಶಂಕಿತ ತಪ್ಪಿಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ಅಮೃತಸರದ ಠಾಕುರ್ ದ್ವಾರ್ ದೇಗುಲದ ಎದುರು ಸ್ಫೋಟ: ಭಯಭೀತರಾದ ಜನ.<p>ಮಾರ್ಚ್ 15 ರಂದು ಠಾಕೂರ್ ದ್ವಾರ ದೇವಾಲಯದ ಹೊರಗೆ ಸ್ಫೋಟ ಸಂಭವಿಸಿತ್ತು. ವ್ಯಕ್ತಿಯೊಬ್ಬ ಸ್ಫೋಟಕ ಸಾಧನ ಎಸೆದ ಪರಿಣಾಮ, ದೇವಾಲಯದ ಗೋಡೆಯ ಒಂದು ಭಾಗಕ್ಕೆ ಹಾನಿಯಾಗಿ, ಕಿಟಕಿ ಗಾಜುಗಳು ಪುಡಿಯಾಗಿದ್ದವು.</p><p>ಗುಪ್ತಚರ ಮಾಹಿತಿ ಮೇರೆಗೆ ಅಮೃತಸರ ಪೊಲೀಸರು ದಾಳಿಗೆ ಕಾರಣರಾದವರನ್ನು ರಾಜಾಸನ್ಸಿ ಎಂಬಲ್ಲಿ ಪತ್ತೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ನಡೆಸಿದ ಗುಂಡಿನ ದಾಳಿಯಿಂದಾಗಿ ಪೊಲೀಸ್ ಸಿಬ್ಬಂದಿ ಗುರುಪ್ರೀತ್ ಸಿಂಗ್ ಗಾಯಗೊಂಡಿದ್ದಾರೆ. ಇನ್ಸ್ಪೆಕ್ಟರ್ ಅಮೊಲಕ್ ಸಿಂಗ್ ಅವರ ಪೇಟಕ್ಕೆ ಗುಂಡು ತಗುಲಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಮಾಹಿತಿ ನೀಡಿದ್ದಾರೆ.</p>.ಪೆಶಾವರ: ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ; ನಾಲ್ವರಿಗೆ ಗಾಯ. <p>ಸ್ವಯಂ ರಕ್ಷಣೆಗೆ ಪೊಲೀಸರು ಮರುದಾಳಿ ನಡೆಸಿದ್ದು, ಆರೋಪಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.</p><p>ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ನಲ್ಲಿ ದೇವಸ್ಥಾನಕ್ಕೆ ಬರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕೆಲವು ಸೆಕೆಂಡು ಕಾದು, ಅವರಲ್ಲಿ ಒಬ್ಬರು ಸ್ಫೋಟಕವನ್ನು ದೇವಾಲಯದ ಕಡೆಗೆ ಎಸೆದು, ಪರಾರಿಯಾಗುವ ದೃಶ್ಯ ದಾಖಲಾಗಿದೆ.</p><p>ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲವಾದರೂ, ಸ್ಫೋಟವು ಅಮೃತಸರದ ಖಂಡ್ವಾಲಾ ಪ್ರದೇಶದ ನಿವಾಸಿಗಳಲ್ಲಿ ಭೀತಿ ಉಂಟುಮಾಡಿತ್ತು.</p>.ಸಿಲಿಂಡರ್ ಸ್ಫೋಟ: 5 ಕುರಿಗಳ ಸಜೀವ ದಹನ, ಚಿನ್ನಾಭರಣ, ನಗದು ಭಸ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಅಮೃತಸರದ ಠಾಕೂರ್ ದ್ವಾರ ದೇಗುಲದ ಸಮೀಪ ಮಾರ್ಚ್ 15ರಂದು ನಡೆದ ಸ್ಫೋಟ ಪ್ರರಣದ ಶಂಕಿತ ಆರೋಪಿ ಗುಂಡಿನ ಚಕಮಕಿಯಲ್ಲಿ ಸಾವಿಗೀಡಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.</p><p>ಮತ್ತೊಬ್ಬ ಶಂಕಿತ ತಪ್ಪಿಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.ಅಮೃತಸರದ ಠಾಕುರ್ ದ್ವಾರ್ ದೇಗುಲದ ಎದುರು ಸ್ಫೋಟ: ಭಯಭೀತರಾದ ಜನ.<p>ಮಾರ್ಚ್ 15 ರಂದು ಠಾಕೂರ್ ದ್ವಾರ ದೇವಾಲಯದ ಹೊರಗೆ ಸ್ಫೋಟ ಸಂಭವಿಸಿತ್ತು. ವ್ಯಕ್ತಿಯೊಬ್ಬ ಸ್ಫೋಟಕ ಸಾಧನ ಎಸೆದ ಪರಿಣಾಮ, ದೇವಾಲಯದ ಗೋಡೆಯ ಒಂದು ಭಾಗಕ್ಕೆ ಹಾನಿಯಾಗಿ, ಕಿಟಕಿ ಗಾಜುಗಳು ಪುಡಿಯಾಗಿದ್ದವು.</p><p>ಗುಪ್ತಚರ ಮಾಹಿತಿ ಮೇರೆಗೆ ಅಮೃತಸರ ಪೊಲೀಸರು ದಾಳಿಗೆ ಕಾರಣರಾದವರನ್ನು ರಾಜಾಸನ್ಸಿ ಎಂಬಲ್ಲಿ ಪತ್ತೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ನಡೆಸಿದ ಗುಂಡಿನ ದಾಳಿಯಿಂದಾಗಿ ಪೊಲೀಸ್ ಸಿಬ್ಬಂದಿ ಗುರುಪ್ರೀತ್ ಸಿಂಗ್ ಗಾಯಗೊಂಡಿದ್ದಾರೆ. ಇನ್ಸ್ಪೆಕ್ಟರ್ ಅಮೊಲಕ್ ಸಿಂಗ್ ಅವರ ಪೇಟಕ್ಕೆ ಗುಂಡು ತಗುಲಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಮಾಹಿತಿ ನೀಡಿದ್ದಾರೆ.</p>.ಪೆಶಾವರ: ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ; ನಾಲ್ವರಿಗೆ ಗಾಯ. <p>ಸ್ವಯಂ ರಕ್ಷಣೆಗೆ ಪೊಲೀಸರು ಮರುದಾಳಿ ನಡೆಸಿದ್ದು, ಆರೋಪಿ ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಪರಾರಿಯಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.</p><p>ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ನಲ್ಲಿ ದೇವಸ್ಥಾನಕ್ಕೆ ಬರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಕೆಲವು ಸೆಕೆಂಡು ಕಾದು, ಅವರಲ್ಲಿ ಒಬ್ಬರು ಸ್ಫೋಟಕವನ್ನು ದೇವಾಲಯದ ಕಡೆಗೆ ಎಸೆದು, ಪರಾರಿಯಾಗುವ ದೃಶ್ಯ ದಾಖಲಾಗಿದೆ.</p><p>ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲವಾದರೂ, ಸ್ಫೋಟವು ಅಮೃತಸರದ ಖಂಡ್ವಾಲಾ ಪ್ರದೇಶದ ನಿವಾಸಿಗಳಲ್ಲಿ ಭೀತಿ ಉಂಟುಮಾಡಿತ್ತು.</p>.ಸಿಲಿಂಡರ್ ಸ್ಫೋಟ: 5 ಕುರಿಗಳ ಸಜೀವ ದಹನ, ಚಿನ್ನಾಭರಣ, ನಗದು ಭಸ್ಮ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>