<p><strong>ನಾರಾಯಣಪುರ:</strong> ಗಣಿ ಪ್ರದೇಶದಲ್ಲಿ ನಕ್ಸಲರು ಹುದುಗಿಸಿದ್ದ ಕಚ್ಚಾ ಬಾಂಬ್ ಸ್ಫೋಟಿಸಿ ಕಾರ್ಮಿಕನೋರ್ವ ಗಾಯಗೊಂಡ ಘಟನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಛತ್ತೀಸ್ಗಢ: ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ ನಕ್ಸಲರು.<p>ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಮ್ದಾಯಿ ಘಾಟಿ ಕಬ್ಬಿನದ ಅದಿರು ಗಣಿಗಾರಿಕೆ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಈ ಸ್ಥಳ ರಾಜಧಾನಿ ರಾಯಪುರದಿಂದ 350 ಕಿ.ಮೀ ದೂರದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಗಾಯಗೊಂಡ ಕಾರ್ಮಿಕನನ್ನು ಛೋಟೆ ಡೊಂಗರ್ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.</p><p>ಘಟನೆ ನಡೆದ ಪ್ರದೇಶದವನ್ನು ಜಯಸ್ವಾಲ್ ನೆಕೊ ಇಂಡಸ್ಟ್ರೀಸ್ ಲಿಮಿಟೆಡ್ಗೆ ಗಣಿಗಾರಿಗೆ ನಡೆಸಲು ನೀಡಲಾಗಿತ್ತು. ಈ ಯೋಜನೆಯನ್ನು ನಕ್ಸಲರು ಹಲವು ವರ್ಷಗಳಿಂದ ವಿರೋಧಿಸುತ್ತಿದ್ದರು.</p>.ಮಹಾರಾಷ್ಟ್ರ: ಪೊಲೀಸ್ ಮಾಹಿತಿದಾರನೆಂದು ಆರೋಪಿಸಿ ವ್ಯಕ್ತಿಯ ಕೊಂದ ನಕ್ಸಲರು.<p>2023ರ ನವೆಂಬರ್ನಲ್ಲಿ ಇದೇ ಗಣಿಯಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು.</p> .ಛತ್ತೀಸಗಢ: ತಲೆಗೆ ₹ 32 ಲಕ್ಷ ಬಹುಮಾನವಿದ್ದ 7 ನಕ್ಸಲರು ಶರಣು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾರಾಯಣಪುರ:</strong> ಗಣಿ ಪ್ರದೇಶದಲ್ಲಿ ನಕ್ಸಲರು ಹುದುಗಿಸಿದ್ದ ಕಚ್ಚಾ ಬಾಂಬ್ ಸ್ಫೋಟಿಸಿ ಕಾರ್ಮಿಕನೋರ್ವ ಗಾಯಗೊಂಡ ಘಟನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಛತ್ತೀಸ್ಗಢ: ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ ನಕ್ಸಲರು.<p>ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಮ್ದಾಯಿ ಘಾಟಿ ಕಬ್ಬಿನದ ಅದಿರು ಗಣಿಗಾರಿಕೆ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಈ ಸ್ಥಳ ರಾಜಧಾನಿ ರಾಯಪುರದಿಂದ 350 ಕಿ.ಮೀ ದೂರದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.</p><p>ಗಾಯಗೊಂಡ ಕಾರ್ಮಿಕನನ್ನು ಛೋಟೆ ಡೊಂಗರ್ನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿದೆ.</p><p>ಘಟನೆ ನಡೆದ ಪ್ರದೇಶದವನ್ನು ಜಯಸ್ವಾಲ್ ನೆಕೊ ಇಂಡಸ್ಟ್ರೀಸ್ ಲಿಮಿಟೆಡ್ಗೆ ಗಣಿಗಾರಿಗೆ ನಡೆಸಲು ನೀಡಲಾಗಿತ್ತು. ಈ ಯೋಜನೆಯನ್ನು ನಕ್ಸಲರು ಹಲವು ವರ್ಷಗಳಿಂದ ವಿರೋಧಿಸುತ್ತಿದ್ದರು.</p>.ಮಹಾರಾಷ್ಟ್ರ: ಪೊಲೀಸ್ ಮಾಹಿತಿದಾರನೆಂದು ಆರೋಪಿಸಿ ವ್ಯಕ್ತಿಯ ಕೊಂದ ನಕ್ಸಲರು.<p>2023ರ ನವೆಂಬರ್ನಲ್ಲಿ ಇದೇ ಗಣಿಯಲ್ಲಿ ನಕ್ಸಲರು ಇಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು.</p> .ಛತ್ತೀಸಗಢ: ತಲೆಗೆ ₹ 32 ಲಕ್ಷ ಬಹುಮಾನವಿದ್ದ 7 ನಕ್ಸಲರು ಶರಣು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>