<p><strong>ತಿರುವನಂತಪುರ:</strong> ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ವಿಜಯನ್ ಅವರು ಸಂಪ್ರದಾಯ ಮುರಿದಿದ್ದಾರೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ದೂರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವರು ಪತ್ರ ಬರೆದಿದ್ದಾರೆ.</p>.<p>ವಿಜಯನ್ ಅವರು ಕಳೆದ ತಿಂಗಳು ಯುರೋಪ್ ಪ್ರವಾಸಕ್ಕೆ ಹೋಗಿದ್ದರು. ಆದರೆ, ಅಧಿಕೃತವಾಗಿ ನನಗೆ ತಿಳಿಸಿರಲೇ ಇಲ್ಲ. ಪ್ರವಾಸದಿಂದ ಹಿಂದಿರುಗಿದ ನಂತರವೂ ಅವರು ನನ್ನನ್ನು ಸಂಪರ್ಕಿಸಲಿಲ್ಲ ಎಂದು ಖಾನ್ ದೂರಿದ್ದಾರೆ.</p>.<p>ಆದರೆ, ಸಿಪಿಐ-ಎಂ ಪಾಲಿಟ್ಬ್ಯೂರೋ ಸದಸ್ಯ ಕೊಡಿಯೇರಿ ಬಾಲಕೃಷ್ಣನ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ವೇಳೆ ವಿಜಯನ್ ಅವರು ಪ್ರವಾಸದ ವಿಚಾರವನ್ನು ರಾಜ್ಯಪಾಲ ಖಾನ್ ಅವರಿಗೆ ಮೌಖಿಕವಾಗಿ ತಿಳಿಸಿದ್ದರು ಎನ್ನಲಾಗಿದೆ.</p>.<p>ನಂತರ, ವಿಜಯನ್ ನಾರ್ವೆಗೆ ಪ್ರಯಾಣ ಬೆಳೆಸಿದ್ದರು. 10 ದಿನಗಳ ನಂತರ ಹಿಂತಿರುಗಿದ್ದರು.</p>.<p>ವಿಜಯನ್ ಅವರ ವಿರುದ್ಧ ಗುರುವಾರವೂ ಹರಿಹಾಯ್ದಿರುವ ಖಾನ್, ಮುಖ್ಯಮಂತ್ರಿಗಳ ಕಚೇರಿ ಚಿನ್ನದ ಕಳ್ಳಸಾಗಣೆಯಲ್ಲಿ ತೊಡಗಿದ್ದರೆ ಮಧ್ಯಪ್ರವೇಶಿಸುವುದಾಗಿ ಎಚ್ಚರಿಸಿದ್ದಾರೆ. ಕಾನೂನು ಪಾಲಿಸುವುದು ನನ್ನ ಕರ್ತವ್ಯ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವಿನ ಸಂಘರ್ಷ ಮತ್ತೊಂದು ಹಂತ ತಲುಪಿದೆ. ವಿಜಯನ್ ಅವರು ಸಂಪ್ರದಾಯ ಮುರಿದಿದ್ದಾರೆ, ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ದೂರಿ ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅವರು ಪತ್ರ ಬರೆದಿದ್ದಾರೆ.</p>.<p>ವಿಜಯನ್ ಅವರು ಕಳೆದ ತಿಂಗಳು ಯುರೋಪ್ ಪ್ರವಾಸಕ್ಕೆ ಹೋಗಿದ್ದರು. ಆದರೆ, ಅಧಿಕೃತವಾಗಿ ನನಗೆ ತಿಳಿಸಿರಲೇ ಇಲ್ಲ. ಪ್ರವಾಸದಿಂದ ಹಿಂದಿರುಗಿದ ನಂತರವೂ ಅವರು ನನ್ನನ್ನು ಸಂಪರ್ಕಿಸಲಿಲ್ಲ ಎಂದು ಖಾನ್ ದೂರಿದ್ದಾರೆ.</p>.<p>ಆದರೆ, ಸಿಪಿಐ-ಎಂ ಪಾಲಿಟ್ಬ್ಯೂರೋ ಸದಸ್ಯ ಕೊಡಿಯೇರಿ ಬಾಲಕೃಷ್ಣನ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ವೇಳೆ ವಿಜಯನ್ ಅವರು ಪ್ರವಾಸದ ವಿಚಾರವನ್ನು ರಾಜ್ಯಪಾಲ ಖಾನ್ ಅವರಿಗೆ ಮೌಖಿಕವಾಗಿ ತಿಳಿಸಿದ್ದರು ಎನ್ನಲಾಗಿದೆ.</p>.<p>ನಂತರ, ವಿಜಯನ್ ನಾರ್ವೆಗೆ ಪ್ರಯಾಣ ಬೆಳೆಸಿದ್ದರು. 10 ದಿನಗಳ ನಂತರ ಹಿಂತಿರುಗಿದ್ದರು.</p>.<p>ವಿಜಯನ್ ಅವರ ವಿರುದ್ಧ ಗುರುವಾರವೂ ಹರಿಹಾಯ್ದಿರುವ ಖಾನ್, ಮುಖ್ಯಮಂತ್ರಿಗಳ ಕಚೇರಿ ಚಿನ್ನದ ಕಳ್ಳಸಾಗಣೆಯಲ್ಲಿ ತೊಡಗಿದ್ದರೆ ಮಧ್ಯಪ್ರವೇಶಿಸುವುದಾಗಿ ಎಚ್ಚರಿಸಿದ್ದಾರೆ. ಕಾನೂನು ಪಾಲಿಸುವುದು ನನ್ನ ಕರ್ತವ್ಯ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>