<p><strong>ಶ್ರೀ ವಿಜಯ ಪುರಂ:</strong> ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹೊರಟಿದ್ದ ಪವನ್ ಹಂಸ್ ಸಂಸ್ಥೆಯ ಹೆಲಿಕಾಪ್ಟರ್ವೊಂದು ಮಂಗಳವಾರ ಸಮುದ್ರದಲ್ಲಿ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿದ್ದ 7 ಮಂದಿಯನ್ನು ರಕ್ಷಿಸಲಾಗಿದೆ.</p><p>ಮಾಯಾಬಂದರ್ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು. ಅದಕ್ಕೂ ಮುನ್ನ ಬೆಳಿಗ್ಗೆ 9.30ರ ಸುಮಾರಿಗೆ ಸಮುದ್ರದ ಮಧ್ಯೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು.</p><p>ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಸಿಬ್ಬಂದಿ ಮತ್ತು ಐವರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.</p><p>‘ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಉಂಟಾಗಿರಬಹುದು ಮತ್ತು ಪೈಲಟ್ ಸಮುದ್ರದ ಮೇಲೆ ಕ್ರಾಶ್ ಲ್ಯಾಂಡಿಂಗ್ ಮಾಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಹೇಳಿದರು.</p><p>‘ಕರಾವಳಿ ಗಸ್ತು ಪಡೆಯ ಕ್ಷಿಪ್ರ ಪ್ರತಿಕ್ರಿಯೆಯಿಂದಾಗಿ ಎಲ್ಲಾ ಪ್ರಯಾಣಿಕರು ಮತ್ತು ಪೈಲಟ್ಗಳನ್ನು ರಕ್ಷಿಸಲು ಸಾಧ್ಯವಾಗಿದೆ’ ಎಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಡಿಜಿಪಿ ಹರಗೋವಿಂದರ್ ಸಿಂಗ್ ಧಾಲೀವಾಲ್ ತಿಳಿಸಿದರು.</p>.ಎವರೆಸ್ಟ್ ಏರಬಲ್ಲ ಹೆಲಿಕಾಪ್ಟರ್ ಕಾರ್ಖಾನೆ ಬೆಂಗಳೂರಲ್ಲಿ; ಚಾಲನೆ ನೀಡಲಿರುವ ಸಿಂಗ್.ಹೆಲಿಕಾಪ್ಟರ್ನಲ್ಲಿ ಚಾಲುಕ್ಯರ ಸ್ಮಾರಕಗಳ ವೀಕ್ಷಣೆಗೆ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀ ವಿಜಯ ಪುರಂ:</strong> ಉತ್ತರ ಹಾಗೂ ಮಧ್ಯ ಅಂಡಮಾನ್ ಜಿಲ್ಲೆಯ ರಂಗತ್ನಿಂದ ಹೊರಟಿದ್ದ ಪವನ್ ಹಂಸ್ ಸಂಸ್ಥೆಯ ಹೆಲಿಕಾಪ್ಟರ್ವೊಂದು ಮಂಗಳವಾರ ಸಮುದ್ರದಲ್ಲಿ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿದ್ದ 7 ಮಂದಿಯನ್ನು ರಕ್ಷಿಸಲಾಗಿದೆ.</p><p>ಮಾಯಾಬಂದರ್ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು. ಅದಕ್ಕೂ ಮುನ್ನ ಬೆಳಿಗ್ಗೆ 9.30ರ ಸುಮಾರಿಗೆ ಸಮುದ್ರದ ಮಧ್ಯೆ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು.</p><p>ಹೆಲಿಕಾಪ್ಟರ್ನಲ್ಲಿದ್ದ ಇಬ್ಬರು ಸಿಬ್ಬಂದಿ ಮತ್ತು ಐವರು ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.</p><p>‘ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಉಂಟಾಗಿರಬಹುದು ಮತ್ತು ಪೈಲಟ್ ಸಮುದ್ರದ ಮೇಲೆ ಕ್ರಾಶ್ ಲ್ಯಾಂಡಿಂಗ್ ಮಾಡಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಹೇಳಿದರು.</p><p>‘ಕರಾವಳಿ ಗಸ್ತು ಪಡೆಯ ಕ್ಷಿಪ್ರ ಪ್ರತಿಕ್ರಿಯೆಯಿಂದಾಗಿ ಎಲ್ಲಾ ಪ್ರಯಾಣಿಕರು ಮತ್ತು ಪೈಲಟ್ಗಳನ್ನು ರಕ್ಷಿಸಲು ಸಾಧ್ಯವಾಗಿದೆ’ ಎಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಡಿಜಿಪಿ ಹರಗೋವಿಂದರ್ ಸಿಂಗ್ ಧಾಲೀವಾಲ್ ತಿಳಿಸಿದರು.</p>.ಎವರೆಸ್ಟ್ ಏರಬಲ್ಲ ಹೆಲಿಕಾಪ್ಟರ್ ಕಾರ್ಖಾನೆ ಬೆಂಗಳೂರಲ್ಲಿ; ಚಾಲನೆ ನೀಡಲಿರುವ ಸಿಂಗ್.ಹೆಲಿಕಾಪ್ಟರ್ನಲ್ಲಿ ಚಾಲುಕ್ಯರ ಸ್ಮಾರಕಗಳ ವೀಕ್ಷಣೆಗೆ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>