<p><strong>ಹೈದರಾಬಾದ್:</strong> ತೆಲಂಗಾಣದ ರಾಜ್ಯಗೀತೆ ಗೀತೆ 'ಜಯ ಜಯ ಹೇ ತೆಲಂಗಾಣ'ದ ರಚನೆಕಾರ, ಖ್ಯಾತ ಕವಿ ಅಂದೇ ಶ್ರೀ (64) ಇಂದು (ಸೋಮವಾರ) ನಿಧನರಾಗಿದ್ದಾರೆ. </p>.<p>ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿಯೇ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೃದಯಾಘಾತವೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಅಂದೇ ಶ್ರೀ ನಿಜವಾದ ಹೆಸರು ಅಂದೇ ಯೆಲ್ಲಯ್ಯ. ತೆಲಂಗಾಣ ರಾಜ್ಯ ರಚನೆ ಆಂದೋಲನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. </p>.<p>2023ರ ಡಿಸೆಂಬರ್ನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಂದೇ ಶ್ರೀ ಅವರ 'ಜಯ ಜಯ ಹೇ ತೆಲಂಗಾಣ' ಗೀತೆಯನ್ನು ರಾಜ್ಯ ಗೀತೆ ಎಂದು ಘೋಷಿಸಿತ್ತು.</p>.<p>ಇವರ ನಿಧನಕ್ಕೆ ಮುಖ್ಯಮಂತ್ರಿ ಎ .ರೇವಂತ್ ರೆಡ್ಡಿ, ಕೇಂದ್ರ ಕಲ್ಲಿದ್ದಲು ಸಚಿವ ಜಿ. ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್, ಬಿಆರ್ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಸೇತಿದಂತೆ ಇತರ ನಾಯಕರು ಸಂತಾಪ ಸೂಚಿಸಿದ್ದಾರೆ.</p>.<p>ಅಂದೇ ಶ್ರೀ ಅವರ ನಿಧನದಿಂದ ತೆಲಂಗಾಣ ಸಾಹಿತ್ಯ ಲೋಕಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಅಧಿಕೃತ ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.ತೆಲಂಗಾಣಕ್ಕೆ ಹೊಸ ರಾಜ್ಯ ಗೀತೆ: ಜೂ.2ಕ್ಕೆ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ತೆಲಂಗಾಣದ ರಾಜ್ಯಗೀತೆ ಗೀತೆ 'ಜಯ ಜಯ ಹೇ ತೆಲಂಗಾಣ'ದ ರಚನೆಕಾರ, ಖ್ಯಾತ ಕವಿ ಅಂದೇ ಶ್ರೀ (64) ಇಂದು (ಸೋಮವಾರ) ನಿಧನರಾಗಿದ್ದಾರೆ. </p>.<p>ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿಯೇ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೃದಯಾಘಾತವೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ. ಅಂದೇ ಶ್ರೀ ನಿಜವಾದ ಹೆಸರು ಅಂದೇ ಯೆಲ್ಲಯ್ಯ. ತೆಲಂಗಾಣ ರಾಜ್ಯ ರಚನೆ ಆಂದೋಲನದಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. </p>.<p>2023ರ ಡಿಸೆಂಬರ್ನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಂದೇ ಶ್ರೀ ಅವರ 'ಜಯ ಜಯ ಹೇ ತೆಲಂಗಾಣ' ಗೀತೆಯನ್ನು ರಾಜ್ಯ ಗೀತೆ ಎಂದು ಘೋಷಿಸಿತ್ತು.</p>.<p>ಇವರ ನಿಧನಕ್ಕೆ ಮುಖ್ಯಮಂತ್ರಿ ಎ .ರೇವಂತ್ ರೆಡ್ಡಿ, ಕೇಂದ್ರ ಕಲ್ಲಿದ್ದಲು ಸಚಿವ ಜಿ. ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್, ಬಿಆರ್ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಸೇತಿದಂತೆ ಇತರ ನಾಯಕರು ಸಂತಾಪ ಸೂಚಿಸಿದ್ದಾರೆ.</p>.<p>ಅಂದೇ ಶ್ರೀ ಅವರ ನಿಧನದಿಂದ ತೆಲಂಗಾಣ ಸಾಹಿತ್ಯ ಲೋಕಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಅಧಿಕೃತ ಸರ್ಕಾರಿ ಗೌರವಗಳೊಂದಿಗೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.</p>.ತೆಲಂಗಾಣಕ್ಕೆ ಹೊಸ ರಾಜ್ಯ ಗೀತೆ: ಜೂ.2ಕ್ಕೆ ಬಿಡುಗಡೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>