<p><strong>ಅಮರಾವತಿ:</strong> ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು, ಗುರುವಾರ ಟಿಡಿಪಿಯ ಇಬ್ಬರು, ವೈಎಸ್ಆರ್ ಕಾಂಗ್ರೆಸ್ನ ಒಬ್ಬ ಸದಸ್ಯ ಸೇರಿ ಮೂವರನ್ನು ಈ ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಿದ್ದಾರೆ. </p>.<p>ಅಲ್ಲದೆ, ಅನುಚಿತ ವರ್ತನೆಗಾಗಿ ಟಿಡಿಪಿಯ ಇತರ ಸದಸ್ಯರನ್ನು ದಿನದ ಮಟ್ಟಿಗೆ ಅಮಾನತು ಮಾಡಿದರು. </p>.<p>ಕಲಾಪದ ವೇಳೆ ಮೀಸೆ ತಿರುವಿ, ತೊಡೆ ತಟ್ಟಿದ ಹಿಂದೂಪುರ ಶಾಸಕ ಹಾಗೂ ನಟ ಬಾಲಕೃಷ್ಣ ಅವರಿಗೆ ಮುಂದಿನ ದಿನಗಳಲ್ಲಿ ಇಂಥ ಅನುಚಿತ ವರ್ತನೆ ತೋರದಂತೆ ಎಚ್ಚರಿಕೆ ನೀಡಿದರು.</p>.<p>ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಟಿಡಿಪಿ ಶಾಸಕರು, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಈ ವೇಳೆ ಸ್ಪೀಕರ್ ಪೀಠದತ್ತ ನುಗ್ಗಿ ಅವರ ಆಸನವನ್ನು ಸುತ್ತುವರಿದರು. ಈ ವೇಳೆ ಸ್ಪೀಕರ್ ಅವರು, ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಲ್ಲಿ ಕುಳಿತು, ಪ್ರಶ್ನೋತ್ತರ ಕಲಾಪ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆಯನ್ನು ಮುಂದುವರಿಸಿದರು. </p>.<p>ಟಿಡಿಪಿ ಸದಸ್ಯರ ಅಮಾನತು ಗೊತ್ತುವಳಿ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಬಿ.ರಾಜೇಂದ್ರನಾಥ್ ರೆಡ್ಡಿ ಅವರು, ಟಿಡಿಪಿ ಶಾಸಕರು ಪ್ರಸ್ತಾಪಿಸುವ ಯಾವುದೇ ವಿಚಾರದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಸ್ಪೀಕರ್ ಪೀಠದತ್ತ ನುಗ್ಗಿ, ಅವರ ಮೇಜಿನ ಮೇಲಿನ ಗಾಜು ಒಡೆಯುವುದು ಅಪರಾಧ ಎಂದರು. ಈ ಮಧ್ಯೆ ಪರಸ್ಪರ ಆರೋಪ–ಪ್ರತ್ಯಾರೋಪ ಮುಂದುವರಿದ ಕಾರಣ ಸದನವನ್ನು ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು, ಗುರುವಾರ ಟಿಡಿಪಿಯ ಇಬ್ಬರು, ವೈಎಸ್ಆರ್ ಕಾಂಗ್ರೆಸ್ನ ಒಬ್ಬ ಸದಸ್ಯ ಸೇರಿ ಮೂವರನ್ನು ಈ ಅಧಿವೇಶನದ ಉಳಿದ ಅವಧಿಯವರೆಗೆ ಅಮಾನತು ಮಾಡಿದ್ದಾರೆ. </p>.<p>ಅಲ್ಲದೆ, ಅನುಚಿತ ವರ್ತನೆಗಾಗಿ ಟಿಡಿಪಿಯ ಇತರ ಸದಸ್ಯರನ್ನು ದಿನದ ಮಟ್ಟಿಗೆ ಅಮಾನತು ಮಾಡಿದರು. </p>.<p>ಕಲಾಪದ ವೇಳೆ ಮೀಸೆ ತಿರುವಿ, ತೊಡೆ ತಟ್ಟಿದ ಹಿಂದೂಪುರ ಶಾಸಕ ಹಾಗೂ ನಟ ಬಾಲಕೃಷ್ಣ ಅವರಿಗೆ ಮುಂದಿನ ದಿನಗಳಲ್ಲಿ ಇಂಥ ಅನುಚಿತ ವರ್ತನೆ ತೋರದಂತೆ ಎಚ್ಚರಿಕೆ ನೀಡಿದರು.</p>.<p>ಗುರುವಾರ ಕಲಾಪ ಆರಂಭವಾಗುತ್ತಿದ್ದಂತೆಯೇ ಟಿಡಿಪಿ ಶಾಸಕರು, ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.</p>.<p>ಈ ವೇಳೆ ಸ್ಪೀಕರ್ ಪೀಠದತ್ತ ನುಗ್ಗಿ ಅವರ ಆಸನವನ್ನು ಸುತ್ತುವರಿದರು. ಈ ವೇಳೆ ಸ್ಪೀಕರ್ ಅವರು, ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಲ್ಲಿ ಕುಳಿತು, ಪ್ರಶ್ನೋತ್ತರ ಕಲಾಪ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆಯನ್ನು ಮುಂದುವರಿಸಿದರು. </p>.<p>ಟಿಡಿಪಿ ಸದಸ್ಯರ ಅಮಾನತು ಗೊತ್ತುವಳಿ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಬಿ.ರಾಜೇಂದ್ರನಾಥ್ ರೆಡ್ಡಿ ಅವರು, ಟಿಡಿಪಿ ಶಾಸಕರು ಪ್ರಸ್ತಾಪಿಸುವ ಯಾವುದೇ ವಿಚಾರದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಸ್ಪೀಕರ್ ಪೀಠದತ್ತ ನುಗ್ಗಿ, ಅವರ ಮೇಜಿನ ಮೇಲಿನ ಗಾಜು ಒಡೆಯುವುದು ಅಪರಾಧ ಎಂದರು. ಈ ಮಧ್ಯೆ ಪರಸ್ಪರ ಆರೋಪ–ಪ್ರತ್ಯಾರೋಪ ಮುಂದುವರಿದ ಕಾರಣ ಸದನವನ್ನು ಮುಂದೂಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>