<p><strong>ಚಿಂತೂರು(ಆಂಧ್ರಪ್ರದೇಶ):</strong> ಕರ್ನೂಲ್ ಬಸ್ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದ್ದು, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬಸ್ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.</p><p>ಚಿಂತೂರಿನಿಂದ ನೆರೆಯ ತೆಲಂಗಾಣಕ್ಕೆ ತೆರಳುತ್ತಿದ್ದ ಈ ಬಸ್ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಸಮೀಪ ಬೆಳಿಗ್ಗೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.</p><p>‘ಘಟನೆಯಲ್ಲಿ 9 ಜನರು ಮೃತಪಟ್ಟು, 22 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ತಿರುವು ಕಾಣಿಸದೇ ಅಪಘಾತ ಸಂಭವಿಸಿರಬಹುದು ಎಂದು ಊಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಬಸ್ಸಿನಲ್ಲಿದ್ದ ಪ್ರಯಾಣಿಕರು ಚಿಂತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀ ರಾಮ ದೇವಸ್ಥಾನಕ್ಕೆ ಹೊರಟಿದ್ದರು ಎಂದು ಬರ್ದಾರ್ ತಿಳಿಸಿದ್ದಾರೆ.</p><p>ಎರಡು ತಿಂಗಳ ಹಿಂದೆ ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸ್ಲೀಪರ್ ಬಸ್ವೊಂದು ಕರ್ನೂಲ್ ಸಮೀಪ ಹೊತ್ತಿ ಉರಿದಿದ್ದು, 20 ಮಂದಿ ಸಜೀವ ದಹನವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತೂರು(ಆಂಧ್ರಪ್ರದೇಶ):</strong> ಕರ್ನೂಲ್ ಬಸ್ ದುರಂತ ಮಾಸುವ ಮುನ್ನವೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಬಸ್ ಅಪಘಾತ ಸಂಭವಿಸಿದ್ದು, ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಬಸ್ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.</p><p>ಚಿಂತೂರಿನಿಂದ ನೆರೆಯ ತೆಲಂಗಾಣಕ್ಕೆ ತೆರಳುತ್ತಿದ್ದ ಈ ಬಸ್ನಲ್ಲಿ ಚಾಲಕ ಮತ್ತು ಕ್ಲೀನರ್ ಸೇರಿದಂತೆ 37 ಜನರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ದುರ್ಗಾ ದೇವಸ್ಥಾನದ ಸಮೀಪ ಬೆಳಿಗ್ಗೆ 4:30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ.</p><p>‘ಘಟನೆಯಲ್ಲಿ 9 ಜನರು ಮೃತಪಟ್ಟು, 22 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ದಟ್ಟ ಮಂಜು ಆವರಿಸಿದ್ದರಿಂದ ಚಾಲಕನಿಗೆ ತಿರುವು ಕಾಣಿಸದೇ ಅಪಘಾತ ಸಂಭವಿಸಿರಬಹುದು ಎಂದು ಊಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p><p>ಬಸ್ಸಿನಲ್ಲಿದ್ದ ಪ್ರಯಾಣಿಕರು ಚಿಂತೂರಿನಿಂದ ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀ ರಾಮ ದೇವಸ್ಥಾನಕ್ಕೆ ಹೊರಟಿದ್ದರು ಎಂದು ಬರ್ದಾರ್ ತಿಳಿಸಿದ್ದಾರೆ.</p><p>ಎರಡು ತಿಂಗಳ ಹಿಂದೆ ಹೈದರಾಬಾದ್ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸ್ಲೀಪರ್ ಬಸ್ವೊಂದು ಕರ್ನೂಲ್ ಸಮೀಪ ಹೊತ್ತಿ ಉರಿದಿದ್ದು, 20 ಮಂದಿ ಸಜೀವ ದಹನವಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>