<p><strong>ಚಿಂತೂರು/ಆಂಧ್ರಪ್ರದೇಶ</strong>: ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು–ಮಾರೇಡುಮಿಲ್ಲಿ ಘಾಟಿಯಲ್ಲಿ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಬಸ್ ಕಣಿವೆಗೆ ಉರುಳಿ 9 ಪ್ರಯಾಣಿಕರು ಮೃತಪಟ್ಟು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಬಸ್ ತೆಲಂಗಾಣದಿಂದ ಚಿಂತೂರಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ದಟ್ಟವಾದ ಮಂಜು ಆವರಿಸಿದ್ದರಿಂದ ತಿರುವಿನಲ್ಲಿ ಚಾಲಕನಿಗೆ ರಸ್ತೆ ಕಾಣಿಸದೆ ಕಂದಕಕ್ಕೆ ಉರುಳಿದೆ.</p><p>ಚಾಲಕ, ನಿರ್ವಾಹಕ ಸೇರಿ ಒಟ್ಟು 37 ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರು, ಗಾಯಾಳುಗಳನ್ನು ಹೊರತುಪಡಿಸಿ ಆರು ಮಂದಿ ಸುರಕ್ಷಿತರಾಗಿದ್ದಾರೆ ಎಂದು ಎಸ್ಪಿ ಅಮಿತ್ ಬರ್ದಾರ್ ಸುದ್ದಿಗಾರರಿಗೆ ತಿಳಿಸಿದರು.</p><p>ಚಿಂತೂರು–ಮಾರೇಡುಮಿಲ್ಲಿ ಘಾಟಿಯ ದುರ್ಗಾ ದೇವಸ್ಥಾನದ ಸಮೀಪದ ತಿರುವಿನಲ್ಲಿ ಬಸ್ ಆಳವಾದ ಕಣಿವೆಗೆ ಉರುಳಿದ್ದು ಮಧ್ಯದಲ್ಲಿ ಸಿಲುಕಿಕೊಂಡಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಹೇಳಿದರು.</p><p>ಪ್ರಯಾಣಿಕರಲ್ಲಿ ಹೆಚ್ಚಿನವರು ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀರಾಮ ಕ್ಷೇತ್ರ ದರ್ಶನಕ್ಕಾಗಿ ಹೊರಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತೂರು/ಆಂಧ್ರಪ್ರದೇಶ</strong>: ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಚಿಂತೂರು–ಮಾರೇಡುಮಿಲ್ಲಿ ಘಾಟಿಯಲ್ಲಿ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ಬಸ್ ಕಣಿವೆಗೆ ಉರುಳಿ 9 ಪ್ರಯಾಣಿಕರು ಮೃತಪಟ್ಟು, 22ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಬಸ್ ತೆಲಂಗಾಣದಿಂದ ಚಿಂತೂರಿಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ದಟ್ಟವಾದ ಮಂಜು ಆವರಿಸಿದ್ದರಿಂದ ತಿರುವಿನಲ್ಲಿ ಚಾಲಕನಿಗೆ ರಸ್ತೆ ಕಾಣಿಸದೆ ಕಂದಕಕ್ಕೆ ಉರುಳಿದೆ.</p><p>ಚಾಲಕ, ನಿರ್ವಾಹಕ ಸೇರಿ ಒಟ್ಟು 37 ಮಂದಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರು, ಗಾಯಾಳುಗಳನ್ನು ಹೊರತುಪಡಿಸಿ ಆರು ಮಂದಿ ಸುರಕ್ಷಿತರಾಗಿದ್ದಾರೆ ಎಂದು ಎಸ್ಪಿ ಅಮಿತ್ ಬರ್ದಾರ್ ಸುದ್ದಿಗಾರರಿಗೆ ತಿಳಿಸಿದರು.</p><p>ಚಿಂತೂರು–ಮಾರೇಡುಮಿಲ್ಲಿ ಘಾಟಿಯ ದುರ್ಗಾ ದೇವಸ್ಥಾನದ ಸಮೀಪದ ತಿರುವಿನಲ್ಲಿ ಬಸ್ ಆಳವಾದ ಕಣಿವೆಗೆ ಉರುಳಿದ್ದು ಮಧ್ಯದಲ್ಲಿ ಸಿಲುಕಿಕೊಂಡಿದೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಹೇಳಿದರು.</p><p>ಪ್ರಯಾಣಿಕರಲ್ಲಿ ಹೆಚ್ಚಿನವರು ತೆಲಂಗಾಣದ ಭದ್ರಾಚಲಂನಲ್ಲಿರುವ ಶ್ರೀರಾಮ ಕ್ಷೇತ್ರ ದರ್ಶನಕ್ಕಾಗಿ ಹೊರಟಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>