<p><strong>ನರಸನ್ನಪೇಟೆ (ಆಂಧ್ರಪ್ರದೇಶ):</strong> ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಘೋಷಿಸಿದ್ದಾರೆ.</p><p>ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಒಂದು ತಿಂಗಳೊಳಗೆ ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. .</p><p>‘ರಾಜ್ಯದಲ್ಲಿ ಜನಸಂಖ್ಯೆ ಇಳಿಯುತ್ತಿರುವುದನ್ನು ತಡೆಯಲು ನಾವು ಒಂದು ನಿರ್ಧಾರ ಮಾಡಿದ್ದೇವೆ. ಮೂರನೇ ಮಗು ಪಡೆದ ದಂಪತಿಗೆ ಕೂಡಲೇ ₹30,000, ನಾಲ್ಕನೇ ನಗುವಿಗೆ ₹40,000 ಪ್ರೋತ್ಸಾಹ ಧನ ನೀಡಲಿದ್ದೇವೆ’ ಎಂದು ಸ್ವರ್ಣ ಆಂಧ್ರ –ಸ್ವಚ್ಛ ಆಂಧ್ರ ಅಭಿಯಾನದ ಸಂದರ್ಭ ಹೇಳಿದ್ದಾರೆ.</p><p>ಒಂದೊಮ್ಮೆ, ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪ್ರತಿಪಾದಿಸಿದ್ದ ಅವರು, ಜನನ ಪ್ರಮಾಣವನ್ನು ಹೆಚ್ಚಿಸಲು ಸಮಾಜವು ಒಟ್ಟಾಗಿ ಕೆಲಸ ಮಾಡುವ ಸಮಯ ಈಗ ಬಂದಿದೆ ಎಂದು ಹೇಳಿದ್ದಾರೆ.</p><p>ಎರಡನೇ ಮಗುವಿನ ಜನನಕ್ಕೆ ₹25,000 ಪ್ರೋತ್ಸಾಹ ಧನ ನೀಡುವ ನಾಯ್ಡು ಅವರ ಹಿಂದಿನ ಘೋಷಣೆಯ ಮುಂದುವರಿದ ಭಾಗ ಇದಾಗಿದೆ.</p><p>ಎರಡನೇ ಮಗುವನ್ನು ಹೊಂದುವ ದಂಪತಿಗೆ ₹25,000 ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಿಎಂ ನಾಯ್ಡು ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು.</p><p>ಬಳಿಕ, ಮಾತನಾಡಿದ್ದ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್, ಸರ್ಕಾರವು ಮೂರನೇ ಮಗು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನ ಹೊಂದುವ ದಂಪತಿಗೂ ಪ್ರೋತ್ಸಾಹ ಧನ ವಿಸ್ತರಿಸಲು ನಿರ್ಧರಿಸಿದೆ ಎಂದಿದ್ದರು.</p><p>ಕೆಲ ದಂಪತಿ ಒಂದೇ ಒಂದು ಮಗುವನ್ನು ಪಡೆಯುತ್ತಿದ್ದಾರೆ. ಮತ್ತೆ ಕೆಲವರು ಮೊದಲನೇ ಮಗು ಗಂಡಾಗದಿದ್ದರೆ ಮಾತ್ರ ಎರಡನೇ ಮಗುವಿಗೆ ಚಿಂತಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸನ್ನಪೇಟೆ (ಆಂಧ್ರಪ್ರದೇಶ):</strong> ರಾಜ್ಯದಲ್ಲಿ ಜನಸಂಖ್ಯೆ ಕುಸಿತವನ್ನು ತಡೆಯುವ ಪ್ರಯತ್ನದ ಭಾಗವಾಗಿ, ಮೂರನೇ ಮಗುವಿನ ಜನನಕ್ಕೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹ ಧನ ನೀಡುವುದಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಘೋಷಿಸಿದ್ದಾರೆ.</p><p>ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು, ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದು, ಒಂದು ತಿಂಗಳೊಳಗೆ ಹೆಚ್ಚಿನ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. .</p><p>‘ರಾಜ್ಯದಲ್ಲಿ ಜನಸಂಖ್ಯೆ ಇಳಿಯುತ್ತಿರುವುದನ್ನು ತಡೆಯಲು ನಾವು ಒಂದು ನಿರ್ಧಾರ ಮಾಡಿದ್ದೇವೆ. ಮೂರನೇ ಮಗು ಪಡೆದ ದಂಪತಿಗೆ ಕೂಡಲೇ ₹30,000, ನಾಲ್ಕನೇ ನಗುವಿಗೆ ₹40,000 ಪ್ರೋತ್ಸಾಹ ಧನ ನೀಡಲಿದ್ದೇವೆ’ ಎಂದು ಸ್ವರ್ಣ ಆಂಧ್ರ –ಸ್ವಚ್ಛ ಆಂಧ್ರ ಅಭಿಯಾನದ ಸಂದರ್ಭ ಹೇಳಿದ್ದಾರೆ.</p><p>ಒಂದೊಮ್ಮೆ, ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪ್ರತಿಪಾದಿಸಿದ್ದ ಅವರು, ಜನನ ಪ್ರಮಾಣವನ್ನು ಹೆಚ್ಚಿಸಲು ಸಮಾಜವು ಒಟ್ಟಾಗಿ ಕೆಲಸ ಮಾಡುವ ಸಮಯ ಈಗ ಬಂದಿದೆ ಎಂದು ಹೇಳಿದ್ದಾರೆ.</p><p>ಎರಡನೇ ಮಗುವಿನ ಜನನಕ್ಕೆ ₹25,000 ಪ್ರೋತ್ಸಾಹ ಧನ ನೀಡುವ ನಾಯ್ಡು ಅವರ ಹಿಂದಿನ ಘೋಷಣೆಯ ಮುಂದುವರಿದ ಭಾಗ ಇದಾಗಿದೆ.</p><p>ಎರಡನೇ ಮಗುವನ್ನು ಹೊಂದುವ ದಂಪತಿಗೆ ₹25,000 ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಸಿಎಂ ನಾಯ್ಡು ಮಾರ್ಚ್ 5 ರಂದು ವಿಧಾನಸಭೆಯಲ್ಲಿ ಘೋಷಿಸಿದ್ದರು.</p><p>ಬಳಿಕ, ಮಾತನಾಡಿದ್ದ ಆರೋಗ್ಯ ಸಚಿವ ಸತ್ಯ ಕುಮಾರ್ ಯಾದವ್, ಸರ್ಕಾರವು ಮೂರನೇ ಮಗು ಮತ್ತು ಅದಕ್ಕಿಂತ ಹೆಚ್ಚಿನ ಮಕ್ಕಳನ್ನ ಹೊಂದುವ ದಂಪತಿಗೂ ಪ್ರೋತ್ಸಾಹ ಧನ ವಿಸ್ತರಿಸಲು ನಿರ್ಧರಿಸಿದೆ ಎಂದಿದ್ದರು.</p><p>ಕೆಲ ದಂಪತಿ ಒಂದೇ ಒಂದು ಮಗುವನ್ನು ಪಡೆಯುತ್ತಿದ್ದಾರೆ. ಮತ್ತೆ ಕೆಲವರು ಮೊದಲನೇ ಮಗು ಗಂಡಾಗದಿದ್ದರೆ ಮಾತ್ರ ಎರಡನೇ ಮಗುವಿಗೆ ಚಿಂತಿಸುತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>