<p><strong>ಅಮರಾವತಿ</strong>: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸರ್ಕಾರ ರೈತರಿಗೆ ಬೆಂಬಲ ಒದಗಿಸುವ 'ರೈತ ಭರವಸೆ' ಯೋಜನೆಯನ್ನು ರದ್ದುಗೊಳಿಸಿದೆ. ಈ ಮೂಲಕ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನೂ ಈಡೇರಿಸದೆ ರೈತರಿಗೆ ದ್ರೋಹ ಬಗೆದಿದೆ ಎಂದು ವೈಎಸ್ಆರ್ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.</p><p>ಚುನಾವಣೆಗೆ ಮುನ್ನ ನಾಯ್ಡು ಘೋಷಿಸಿದ ಭರವಸೆಗಳನ್ನು ಈಡೇರಿಸದೆ, ಕಲ್ಯಾಣ ಯೋಜನೆಗಳನ್ನು ರದ್ದುಪಡಿಸುವ ಮೂಲಕ ರೈತರಿಗೆ ದ್ರೋಹ ಬಗೆದಿದೆ ಎಂದು ಎಕ್ಸ್ ಪೋಸ್ಟ್ನಲ್ಲಿ ರೆಡ್ಡಿ ಕಿಡಿಕಾರಿದ್ದಾರೆ.</p>.ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 307 ರಸ್ತೆಗಳು ಬಂದ್, ‘ಆರೆಂಜ್ ಅಲರ್ಟ್’ ಘೋಷಣೆ.ನಾನಾಗಿದ್ದರೆ ಆಕಾಶ್ ದೀಪ್ಗೆ ಗುದ್ದುತ್ತಿದ್ದೆ: ಪಾಂಟಿಂಗ್ ಹೀಗೆ ಹೇಳಿದ್ದೇಕೆ?. <p>ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೂ ಮೀರಿ ಪ್ರತಿ ರೈತನಿಗೆ ವಾರ್ಷಿಕವಾಗಿ ₹13,500 ನೀಡಿತ್ತು. ಖಜಾನೆಯಲ್ಲಿ ಹಣ ಇಲ್ಲದಿದ್ದ ವೇಳೆಯೂ ₹34,288 ಕೋಟಿ ರೈತರಿಗೆ ನಮ್ಮ ಸರ್ಕಾರ ಬೆಂಬಲ ಒದಗಿಸಿತ್ತು ಎಂದು ರೆಡ್ಡಿ ಹೇಳಿದ್ದಾರೆ.</p><p> ಚುನಾವಣೆ ವೇಳೆ ಈಗಿನ ನಾಯ್ಡು ಸರ್ಕಾರ ಅನ್ನದಾತ ಸುಖೀಭವ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ವಾರ್ಷಿಕವಾಗಿ ₹20,000 ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಕೇಂದ್ರದ ₹6,000 ಹೊರತುಪಡಿಸಿ ಎರಡು ವರ್ಷಗಳಲ್ಲಿ ಇದುವರೆಗೆ ₹5,000 ಮಾತ್ರ ರೈತರಿಗೆ ನೀಡಿದೆ ಎಂದು ರೆಡ್ಡಿ ಹೇಳಿದ್ದಾರೆ.</p><p>ಸರ್ಕಾರ ಸೂಕ್ತ ಬೆಂಬಲ ಒದಗಿಸದ ಕಾರಣ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನೂ ನೀಡಿಲ್ಲ. ಇದು ಇಂದಿನ ಸರ್ಕಾರದ ಅಮಾನವೀಯತೆ ಮತ್ತು ಸಹಾನುಭೂತಿಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.</p>.ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.ಸೇನಾಧಿಕಾರಿಯಿಂದ ದಾಳಿ: ಸ್ಪೈಸ್ಜೆಟ್ ಸಿಬ್ಬಂದಿಗೆ ದವಡೆ, ಬೆನ್ನುಮೂಳೆ ಮುರಿತ.River Rafting : ಬರಪೊಳೆಯಲ್ಲಿ ಭರಪೂರ ಜಲಸಾಹಸ... .ರಷ್ಯಾದಲ್ಲಿ ಮತ್ತೆ 7.0 ತೀವ್ರತೆಯ ಭೂಕಂಪ; ಜ್ವಾಲಾಮುಖಿ ಸ್ಫೋಟ, ಸುನಾಮಿ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸರ್ಕಾರ ರೈತರಿಗೆ ಬೆಂಬಲ ಒದಗಿಸುವ 'ರೈತ ಭರವಸೆ' ಯೋಜನೆಯನ್ನು ರದ್ದುಗೊಳಿಸಿದೆ. ಈ ಮೂಲಕ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನೂ ಈಡೇರಿಸದೆ ರೈತರಿಗೆ ದ್ರೋಹ ಬಗೆದಿದೆ ಎಂದು ವೈಎಸ್ಆರ್ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.</p><p>ಚುನಾವಣೆಗೆ ಮುನ್ನ ನಾಯ್ಡು ಘೋಷಿಸಿದ ಭರವಸೆಗಳನ್ನು ಈಡೇರಿಸದೆ, ಕಲ್ಯಾಣ ಯೋಜನೆಗಳನ್ನು ರದ್ದುಪಡಿಸುವ ಮೂಲಕ ರೈತರಿಗೆ ದ್ರೋಹ ಬಗೆದಿದೆ ಎಂದು ಎಕ್ಸ್ ಪೋಸ್ಟ್ನಲ್ಲಿ ರೆಡ್ಡಿ ಕಿಡಿಕಾರಿದ್ದಾರೆ.</p>.ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ: 307 ರಸ್ತೆಗಳು ಬಂದ್, ‘ಆರೆಂಜ್ ಅಲರ್ಟ್’ ಘೋಷಣೆ.ನಾನಾಗಿದ್ದರೆ ಆಕಾಶ್ ದೀಪ್ಗೆ ಗುದ್ದುತ್ತಿದ್ದೆ: ಪಾಂಟಿಂಗ್ ಹೀಗೆ ಹೇಳಿದ್ದೇಕೆ?. <p>ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನೂ ಮೀರಿ ಪ್ರತಿ ರೈತನಿಗೆ ವಾರ್ಷಿಕವಾಗಿ ₹13,500 ನೀಡಿತ್ತು. ಖಜಾನೆಯಲ್ಲಿ ಹಣ ಇಲ್ಲದಿದ್ದ ವೇಳೆಯೂ ₹34,288 ಕೋಟಿ ರೈತರಿಗೆ ನಮ್ಮ ಸರ್ಕಾರ ಬೆಂಬಲ ಒದಗಿಸಿತ್ತು ಎಂದು ರೆಡ್ಡಿ ಹೇಳಿದ್ದಾರೆ.</p><p> ಚುನಾವಣೆ ವೇಳೆ ಈಗಿನ ನಾಯ್ಡು ಸರ್ಕಾರ ಅನ್ನದಾತ ಸುಖೀಭವ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ವಾರ್ಷಿಕವಾಗಿ ₹20,000 ನೀಡುವುದಾಗಿ ಭರವಸೆ ನೀಡಿತ್ತು, ಆದರೆ ಕೇಂದ್ರದ ₹6,000 ಹೊರತುಪಡಿಸಿ ಎರಡು ವರ್ಷಗಳಲ್ಲಿ ಇದುವರೆಗೆ ₹5,000 ಮಾತ್ರ ರೈತರಿಗೆ ನೀಡಿದೆ ಎಂದು ರೆಡ್ಡಿ ಹೇಳಿದ್ದಾರೆ.</p><p>ಸರ್ಕಾರ ಸೂಕ್ತ ಬೆಂಬಲ ಒದಗಿಸದ ಕಾರಣ 250ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಪರಿಹಾರವನ್ನೂ ನೀಡಿಲ್ಲ. ಇದು ಇಂದಿನ ಸರ್ಕಾರದ ಅಮಾನವೀಯತೆ ಮತ್ತು ಸಹಾನುಭೂತಿಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.</p>.ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ.ಸೇನಾಧಿಕಾರಿಯಿಂದ ದಾಳಿ: ಸ್ಪೈಸ್ಜೆಟ್ ಸಿಬ್ಬಂದಿಗೆ ದವಡೆ, ಬೆನ್ನುಮೂಳೆ ಮುರಿತ.River Rafting : ಬರಪೊಳೆಯಲ್ಲಿ ಭರಪೂರ ಜಲಸಾಹಸ... .ರಷ್ಯಾದಲ್ಲಿ ಮತ್ತೆ 7.0 ತೀವ್ರತೆಯ ಭೂಕಂಪ; ಜ್ವಾಲಾಮುಖಿ ಸ್ಫೋಟ, ಸುನಾಮಿ ಸಾಧ್ಯತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>