<p><strong>ತಿರುಪತಿ</strong>: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡಕ್ಕೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೈಎಸ್ಆರ್ಸಿಪಿ ನಾಯಕ, ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಬಿ.ಕರುಣಾಕರ್ ರೆಡ್ಡಿ ಹೇಳಿದ್ದಾರೆ.</p><p>ಘಟನೆಗೆ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೆಡ್ಡಿ ಆಗ್ರಹಿಸಿದ್ದಾರೆ.</p><p>ಮೃತರ ಕುಟುಂಬಕ್ಕೆ ₹1 ಕೋಟಿ ಮತ್ತು ಗಾಯಗೊಂಡವರಿಗೆ ₹20 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಹೇಳಿದ್ದಾರೆ.</p>.Tirupati Stampede | ಬದುಕುಳಿದವರಿಂದ ಘೋರ ಅನುಭವದ ವಿವರಣೆ.ತಿರುಪತಿ ಕಾಲ್ತುಳಿತ ದುರಂತ:ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ.<p>ವೆಂಕಟೇಶ್ವರನ ಸೇವೆಗಿಂತ ಚಂದ್ರಬಾಬು ನಾಯ್ಡು ಅವರ ಸೇವೆಯಲ್ಲಿ ಹೆಚ್ಚು ಒಲವು ಹೊಂದಿರುವ ಟಿಟಿಡಿ ಆಡಳಿತದ ಅಸಮರ್ಥತೆಯಿಂದ ಈ ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ತಕ್ಷಣ ತನಿಖೆ ನಡೆಸಬೇಕೆಂದು ಎಂದು ರೆಡ್ಡಿ ಒತ್ತಾಯಿಸಿದ್ದಾರೆ.</p><p>ತಿರುಪತಿಯಲ್ಲಿ ಬುಧವಾರ ರಾತ್ರಿ 'ವೈಕುಂಠ ದ್ವಾರ ದರ್ಶನ'ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದರು. ಹಲವು ಮಂದಿ ಗಾಯಗೊಂಡಿದ್ದಾರೆ. ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ.</p>.ತಿರುಪತಿ ದುರಂತ: ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ</strong>: ಆಂಧ್ರಪ್ರದೇಶದ ತಿರುಪತಿಯ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಸಂಭವಿಸಿರುವ ಕಾಲ್ತುಳಿತ ಅವಘಡಕ್ಕೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೈತಿಕ ಹೊಣೆ ಹೊರಬೇಕು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವೈಎಸ್ಆರ್ಸಿಪಿ ನಾಯಕ, ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ಬಿ.ಕರುಣಾಕರ್ ರೆಡ್ಡಿ ಹೇಳಿದ್ದಾರೆ.</p><p>ಘಟನೆಗೆ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ಅಧೀನ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಬೇಕು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ರೆಡ್ಡಿ ಆಗ್ರಹಿಸಿದ್ದಾರೆ.</p><p>ಮೃತರ ಕುಟುಂಬಕ್ಕೆ ₹1 ಕೋಟಿ ಮತ್ತು ಗಾಯಗೊಂಡವರಿಗೆ ₹20 ಲಕ್ಷ ಪರಿಹಾರ ನೀಡಬೇಕು ಎಂದು ಅವರು ಹೇಳಿದ್ದಾರೆ.</p>.Tirupati Stampede | ಬದುಕುಳಿದವರಿಂದ ಘೋರ ಅನುಭವದ ವಿವರಣೆ.ತಿರುಪತಿ ಕಾಲ್ತುಳಿತ ದುರಂತ:ನೆರವು ನೀಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ.<p>ವೆಂಕಟೇಶ್ವರನ ಸೇವೆಗಿಂತ ಚಂದ್ರಬಾಬು ನಾಯ್ಡು ಅವರ ಸೇವೆಯಲ್ಲಿ ಹೆಚ್ಚು ಒಲವು ಹೊಂದಿರುವ ಟಿಟಿಡಿ ಆಡಳಿತದ ಅಸಮರ್ಥತೆಯಿಂದ ಈ ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ತಕ್ಷಣ ತನಿಖೆ ನಡೆಸಬೇಕೆಂದು ಎಂದು ರೆಡ್ಡಿ ಒತ್ತಾಯಿಸಿದ್ದಾರೆ.</p><p>ತಿರುಪತಿಯಲ್ಲಿ ಬುಧವಾರ ರಾತ್ರಿ 'ವೈಕುಂಠ ದ್ವಾರ ದರ್ಶನ'ದ ಟೋಕನ್ ಪಡೆದುಕೊಳ್ಳುವಾಗ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದರು. ಹಲವು ಮಂದಿ ಗಾಯಗೊಂಡಿದ್ದಾರೆ. ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ.</p>.ತಿರುಪತಿ ದುರಂತ: ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ.ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ! TTD ಅಧ್ಯಕ್ಷರು ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>