‘ನಮ್ಮ ರಾಜ್ಯದ (ಆಂಧ್ರ ಪ್ರದೇಶ) ನೆಲ್ಲೂರು ಜಿಲ್ಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಹುಟ್ಟೂರಾಗಿರುವುದು ನಮ್ಮ ಪುಣ್ಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ, ದೇಶಕ್ಕೆ ಮಾತ್ರ ನಷ್ಟವಾಗಿಲ್ಲ, ಬದಲಾಗಿ ಅಂತಾರಾಷ್ಟ್ರೀಯ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿಯಲ್ಲಿ ಅವರು 40 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದಾರೆ. ಆರು ಬಾರಿ ಅವರು ರಾಷ್ಟ್ರ ಪ್ರಶಸ್ತಿ ಗೆದ್ದು ಸಾಧನೆ ಮಾಡಿದ್ದಾರೆ. 25 ಬಾರಿ ಆಂಧ್ರ ಪ್ರದೇಶ ನಂದಿ ಪ್ರಶಸ್ತಿ ಗಳಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನ ಹಲವು ಪ್ರಶಸ್ತಿಗಳನ್ನೂ ಅವರು ಗಳಿಸಿದ್ದಾರೆ. ಅವರಿಗೆ ಈಗಾಗಲೇ ಪದ್ಮಶ್ರೀ, ಪದ್ಮಭೂಷಣ ಪ್ರದಾನವಾಗಿದೆ,’ ಎಂದು ಅವರು ತಿಳಿಸಿದ್ದಾರೆ.