<p><strong>ಅಮರಾವತಿ</strong>: ಹೂಡಿಕೆದಾರರನ್ನು ಆಕರ್ಷಿಸುವ ಉದ್ದೇಶದಿಂದ ದಿನದ ಗರಿಷ್ಠ ಕೆಲಸದ ಅವಧಿಯನ್ನು ಒಂದು ಗಂಟೆಯಷ್ಟು ಹೆಚ್ಚಳ ಮಾಡುವುದಕ್ಕೆ ಆಂಧ್ರಪ್ರದೇಶದ ಟಿಡಿಪಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.</p>.<p>‘ಸದ್ಯ ಕೆಲಸದ ಅವಧಿ ದಿನಕ್ಕೆ 9 ಗಂಟೆ ಇದೆ. ಇದನ್ನು ದಿನಕ್ಕೆ 10 ಗಂಟೆಗೆ ಹೆಚ್ಚಿಸಲಾಗುವುದು. ನೂತನ ವ್ಯವಸ್ಥೆಯನ್ನು ಹೂಡಿಕೆದಾರರು ಮತ್ತು ಕಾರ್ಮಿಕ ಸ್ನೇಹಿಯನ್ನಾಗಿ ಮಾಡುವ ಸಂಬಂಧ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುವುದು’ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಕೆ.ಪಾರ್ಥಸಾರಥಿ ಹೇಳಿದ್ದಾರೆ.</p>.<p>‘ಇಂತಹ ತಿದ್ದುಪಡಿಗಳಿಂದ, ಹೂಡಿಕೆದಾರರು ರಾಜ್ಯದತ್ತ ಮುಖ ಮಾಡುವರು. ನೂತನ ನಿಯಮಗಳು ಕೂಡ ಕಾರ್ಮಿಕ ಸ್ನೇಹಿಯಾಗರಲಿದ್ದು, ಹೂಡಿಕೆ ಹೆಚ್ಚಳಕ್ಕೆ ಅನುಕೂಲವಾಗಲಿವೆ. ಜಾಗತಿಕ ಮಟ್ಟದ ನಿಯಮಗಳಿಗೆ ಅನುಗುಣವಾಗಿಯೇ ಈ ತಿದ್ದುಪಡಿಗಳನ್ನು ತರಲಾಗುತ್ತಿದೆ’ ಎಂದು ಪಾರ್ಥಸಾರಥಿ ಹೇಳಿದ್ದಾರೆ.</p>.<p><strong>ಸಿಪಿಐ ಟೀಕೆ</strong> </p><p>ರಾಜ್ಯ ಸರ್ಕಾರದ ಉದ್ದೇಶಿತ ನಡೆಯನ್ನು ಸಿಪಿಐ ಟೀಕಿಸಿದೆ.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಕೆ.ರಾಮಕೃಷ್ಣ ಟೀಕಿಸಿದ್ದಾರೆ.</p>.<p>‘ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಎಲ್ಲ ಟ್ರೇಡ್ ಯೂನಿಯನ್ಗಳು ಜುಲೈ 9ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಿವೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಹೂಡಿಕೆದಾರರನ್ನು ಆಕರ್ಷಿಸುವ ಉದ್ದೇಶದಿಂದ ದಿನದ ಗರಿಷ್ಠ ಕೆಲಸದ ಅವಧಿಯನ್ನು ಒಂದು ಗಂಟೆಯಷ್ಟು ಹೆಚ್ಚಳ ಮಾಡುವುದಕ್ಕೆ ಆಂಧ್ರಪ್ರದೇಶದ ಟಿಡಿಪಿ ನೇತೃತ್ವದ ಸರ್ಕಾರ ನಿರ್ಧರಿಸಿದೆ.</p>.<p>‘ಸದ್ಯ ಕೆಲಸದ ಅವಧಿ ದಿನಕ್ಕೆ 9 ಗಂಟೆ ಇದೆ. ಇದನ್ನು ದಿನಕ್ಕೆ 10 ಗಂಟೆಗೆ ಹೆಚ್ಚಿಸಲಾಗುವುದು. ನೂತನ ವ್ಯವಸ್ಥೆಯನ್ನು ಹೂಡಿಕೆದಾರರು ಮತ್ತು ಕಾರ್ಮಿಕ ಸ್ನೇಹಿಯನ್ನಾಗಿ ಮಾಡುವ ಸಂಬಂಧ ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರಲಾಗುವುದು’ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಕೆ.ಪಾರ್ಥಸಾರಥಿ ಹೇಳಿದ್ದಾರೆ.</p>.<p>‘ಇಂತಹ ತಿದ್ದುಪಡಿಗಳಿಂದ, ಹೂಡಿಕೆದಾರರು ರಾಜ್ಯದತ್ತ ಮುಖ ಮಾಡುವರು. ನೂತನ ನಿಯಮಗಳು ಕೂಡ ಕಾರ್ಮಿಕ ಸ್ನೇಹಿಯಾಗರಲಿದ್ದು, ಹೂಡಿಕೆ ಹೆಚ್ಚಳಕ್ಕೆ ಅನುಕೂಲವಾಗಲಿವೆ. ಜಾಗತಿಕ ಮಟ್ಟದ ನಿಯಮಗಳಿಗೆ ಅನುಗುಣವಾಗಿಯೇ ಈ ತಿದ್ದುಪಡಿಗಳನ್ನು ತರಲಾಗುತ್ತಿದೆ’ ಎಂದು ಪಾರ್ಥಸಾರಥಿ ಹೇಳಿದ್ದಾರೆ.</p>.<p><strong>ಸಿಪಿಐ ಟೀಕೆ</strong> </p><p>ರಾಜ್ಯ ಸರ್ಕಾರದ ಉದ್ದೇಶಿತ ನಡೆಯನ್ನು ಸಿಪಿಐ ಟೀಕಿಸಿದೆ.</p>.<p>‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ’ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಕೆ.ರಾಮಕೃಷ್ಣ ಟೀಕಿಸಿದ್ದಾರೆ.</p>.<p>‘ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಎಲ್ಲ ಟ್ರೇಡ್ ಯೂನಿಯನ್ಗಳು ಜುಲೈ 9ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲಿವೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>