<p><strong>ಅಮರಾವತಿ:</strong> ಭಾರತಿ ಸಿಮೆಂಟ್ನ ಉನ್ನತ ಅಧಿಕಾರಿ ಬಾಲಾಜಿ ಗೋವಿಂದಪ್ಪ ಎಂಬುವವರನ್ನು ₹3,200 ಕೋಟಿಯ ಅಬಕಾರಿ ಹಗರಣದ ಆರೋಪದಲ್ಲಿ ಆಂಧ್ರಪ್ರದೇಶ ಎಸ್ಐಟಿ ಅಧಿಕಾರಿಗಳು ಮೈಸೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ.</p><p>ವೈಎಸ್ಆರ್ಸಿಪಿ ಪಕ್ಷವು ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಈ ಹಗರಣದಲ್ಲಿ ಬಾಲಾಜಿ ಅವರೂ ಪ್ರಮುಖ ಆರೋಪಿಯಾಗಿದ್ದಾರೆ. </p><p>ಬಾಲಾಜಿ ಅವರಿಗಾಗಿ ಕಳೆದ ಮೂರು ದಿನಗಳಿಂದ ಬಲೆ ಬೀಸಿದ್ದ ಎಸ್ಐಟಿ ಅಧಿಕಾರಿಗಳು ಅವರ ಹೈದರಾಬಾದ್ ನಿವಾಸದಲ್ಲಿ ಶೋಧ ನಡೆಸಿದ್ದರು. ನಂತರ ಖಚಿತ ಮಾಹಿತಿ ಆಧರಿಸಿ ಮೈಸೂರಿನಲ್ಲಿ ಇವರನ್ನು ಬಂಧಿಸಲಾಗಿದೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ. 2019ರಿಂದ 2024ರಲ್ಲಿ ನಡೆದಿದೆ ಎನ್ನಲಾದ ಅಬಕಾರಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಕೇಸಿರೆಡ್ಡಿ ರಾಜ ಶೇಖರ ರೆಡ್ಡಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು.</p><p>ವಾಸುದೇವ ರೆಡ್ಡಿ, ಸತ್ಯ ಪ್ರಸಾದ್, ರಾಜಂಪೇಟ್ ಸಂಸದ ಪಿ.ವಿ.ಮಿಥುನ್ ರೆಡ್ಡಿ, ವಿ.ವಿಜಯಸಾಯಿ ರೆಡ್ಡಿ, ಸಜ್ಜಲ ಶ್ರೀಧರ ರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಧನಂಜಯ ರೆಡ್ಡಿ, ಕೃಷ್ಣ ಮೋಹನ ರೆಡ್ಡಿ ಮತ್ತು ಗೋವಿಂದಪ್ಪ ಪ್ರಕರಣದ ಪ್ರಮುಖ ಆರೋಪಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಭಾರತಿ ಸಿಮೆಂಟ್ನ ಉನ್ನತ ಅಧಿಕಾರಿ ಬಾಲಾಜಿ ಗೋವಿಂದಪ್ಪ ಎಂಬುವವರನ್ನು ₹3,200 ಕೋಟಿಯ ಅಬಕಾರಿ ಹಗರಣದ ಆರೋಪದಲ್ಲಿ ಆಂಧ್ರಪ್ರದೇಶ ಎಸ್ಐಟಿ ಅಧಿಕಾರಿಗಳು ಮೈಸೂರಿನಲ್ಲಿ ಮಂಗಳವಾರ ಬಂಧಿಸಿದ್ದಾರೆ.</p><p>ವೈಎಸ್ಆರ್ಸಿಪಿ ಪಕ್ಷವು ಆಂಧ್ರಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಈ ಹಗರಣದಲ್ಲಿ ಬಾಲಾಜಿ ಅವರೂ ಪ್ರಮುಖ ಆರೋಪಿಯಾಗಿದ್ದಾರೆ. </p><p>ಬಾಲಾಜಿ ಅವರಿಗಾಗಿ ಕಳೆದ ಮೂರು ದಿನಗಳಿಂದ ಬಲೆ ಬೀಸಿದ್ದ ಎಸ್ಐಟಿ ಅಧಿಕಾರಿಗಳು ಅವರ ಹೈದರಾಬಾದ್ ನಿವಾಸದಲ್ಲಿ ಶೋಧ ನಡೆಸಿದ್ದರು. ನಂತರ ಖಚಿತ ಮಾಹಿತಿ ಆಧರಿಸಿ ಮೈಸೂರಿನಲ್ಲಿ ಇವರನ್ನು ಬಂಧಿಸಲಾಗಿದೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ. 2019ರಿಂದ 2024ರಲ್ಲಿ ನಡೆದಿದೆ ಎನ್ನಲಾದ ಅಬಕಾರಿ ಹಗರಣ ಪ್ರಕರಣದ ಪ್ರಮುಖ ಆರೋಪಿ ಕೇಸಿರೆಡ್ಡಿ ರಾಜ ಶೇಖರ ರೆಡ್ಡಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು.</p><p>ವಾಸುದೇವ ರೆಡ್ಡಿ, ಸತ್ಯ ಪ್ರಸಾದ್, ರಾಜಂಪೇಟ್ ಸಂಸದ ಪಿ.ವಿ.ಮಿಥುನ್ ರೆಡ್ಡಿ, ವಿ.ವಿಜಯಸಾಯಿ ರೆಡ್ಡಿ, ಸಜ್ಜಲ ಶ್ರೀಧರ ರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಧನಂಜಯ ರೆಡ್ಡಿ, ಕೃಷ್ಣ ಮೋಹನ ರೆಡ್ಡಿ ಮತ್ತು ಗೋವಿಂದಪ್ಪ ಪ್ರಕರಣದ ಪ್ರಮುಖ ಆರೋಪಿಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>