<p><strong>ಅಮರಾವತಿ</strong>: ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ನಡೆದ ₹3,500 ಕೋಟಿ ಮೊತ್ತದ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ಶನಿವಾರ 305 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರಾಜಶೇಖರ ರೆಡ್ಡಿಯೇ ಈ ಪ್ರಕರಣದ ಸೂತ್ರಧಾರ ಮತ್ತು ಸಹ ಸಂಚುಕೋರ ಎಂದು ಆರೋಪಿಸಲಾಗಿದೆ. </p>.<p>ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರೂ ಈ ಹಗರಣದ ಫಲಾನುಭವಿ ಆಗಿದ್ದು, ಪ್ರತಿ ತಿಂಗಳು ಸರಾಸರಿ ₹50 ಕೋಟಿಯಿಂದ ₹60 ಕೊಟಿಯಷ್ಟು ಲಂಚ ಪಡೆದಿದ್ದಾರೆ ಎಂದು ದೋಷಾರೋಪಣ ಪಟ್ಟಿಯಲ್ಲಿ ಆರೋಪಿಸಲಾಗಿದೆ. ಆದರೆ, ಅವರನ್ನು ಆರೋಪಿ ಎಂದು ಹೆಸರಿಸಿಲ್ಲ.</p>.<p>2019–24ರ ವೈಎಸ್ಆರ್ ಕಾಂಗ್ರೆಸ್ ಅವಧಿಯಲ್ಲಿ, ಅಬಕಾರಿ ನೀತಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪ್ರತಿ ತಿಂಗಳು ಸರಾಸರಿ ₹50 ರಿಂದ ₹60 ಕೋಟಿ ಹಣವನ್ನು ಸಂಗ್ರಹಿಸಲಾಗುತ್ತಿತ್ತು. ಡಿಜಿಟಲ್ ಪಾವತಿಗೆ ನಿರ್ಬಂಧ ಹೇರಿ, ನಗದು ಮೂಲಕವಷ್ಟೇ ವಹಿವಾಟು ನಡೆಸಲಾಗುತ್ತಿತ್ತು. ಅಕ್ರಮವಾಗಿ ಸಂಗ್ರಹಿಸಿದ ಮೊತ್ತವನ್ನು ಕೆಸಿರೆಡ್ಡಿ ರಾಜಶೇಖರ್ ರೆಡ್ಡಿ ಸಂಗ್ರಹಿಸಿ, ಅದನ್ನು ವಿಜಯ್ ಸಾಯಿ ರೆಡ್ಡಿ , ಮಿಥುನ್ ರೆಡ್ಡಿ, ಬಾಲಾಜಿ ಅವರಿಗೆ ಹಸ್ತಾಂತರಿಸಿದ್ದರು. ಈ ಆರೋಪಿಗಳು ಮಾಜಿ ಮುಖ್ಯಮಂತ್ರಿ ವೆ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ನಡೆದ ₹3,500 ಕೋಟಿ ಮೊತ್ತದ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ಶನಿವಾರ 305 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ರಾಜಶೇಖರ ರೆಡ್ಡಿಯೇ ಈ ಪ್ರಕರಣದ ಸೂತ್ರಧಾರ ಮತ್ತು ಸಹ ಸಂಚುಕೋರ ಎಂದು ಆರೋಪಿಸಲಾಗಿದೆ. </p>.<p>ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರೂ ಈ ಹಗರಣದ ಫಲಾನುಭವಿ ಆಗಿದ್ದು, ಪ್ರತಿ ತಿಂಗಳು ಸರಾಸರಿ ₹50 ಕೋಟಿಯಿಂದ ₹60 ಕೊಟಿಯಷ್ಟು ಲಂಚ ಪಡೆದಿದ್ದಾರೆ ಎಂದು ದೋಷಾರೋಪಣ ಪಟ್ಟಿಯಲ್ಲಿ ಆರೋಪಿಸಲಾಗಿದೆ. ಆದರೆ, ಅವರನ್ನು ಆರೋಪಿ ಎಂದು ಹೆಸರಿಸಿಲ್ಲ.</p>.<p>2019–24ರ ವೈಎಸ್ಆರ್ ಕಾಂಗ್ರೆಸ್ ಅವಧಿಯಲ್ಲಿ, ಅಬಕಾರಿ ನೀತಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪ್ರತಿ ತಿಂಗಳು ಸರಾಸರಿ ₹50 ರಿಂದ ₹60 ಕೋಟಿ ಹಣವನ್ನು ಸಂಗ್ರಹಿಸಲಾಗುತ್ತಿತ್ತು. ಡಿಜಿಟಲ್ ಪಾವತಿಗೆ ನಿರ್ಬಂಧ ಹೇರಿ, ನಗದು ಮೂಲಕವಷ್ಟೇ ವಹಿವಾಟು ನಡೆಸಲಾಗುತ್ತಿತ್ತು. ಅಕ್ರಮವಾಗಿ ಸಂಗ್ರಹಿಸಿದ ಮೊತ್ತವನ್ನು ಕೆಸಿರೆಡ್ಡಿ ರಾಜಶೇಖರ್ ರೆಡ್ಡಿ ಸಂಗ್ರಹಿಸಿ, ಅದನ್ನು ವಿಜಯ್ ಸಾಯಿ ರೆಡ್ಡಿ , ಮಿಥುನ್ ರೆಡ್ಡಿ, ಬಾಲಾಜಿ ಅವರಿಗೆ ಹಸ್ತಾಂತರಿಸಿದ್ದರು. ಈ ಆರೋಪಿಗಳು ಮಾಜಿ ಮುಖ್ಯಮಂತ್ರಿ ವೆ.ಎಸ್. ಜಗನ್ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>