<p><strong>ನವದೆಹಲಿ</strong>: ಆಂಧ್ರಪ್ರದೇಶದ ₹3,500 ಕೋಟಿ ಮೊತ್ತದ ಮದ್ಯ ಹಗರಣದ ಮೂವರು ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಶರಣಾಗುವುದರಿಂದ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ರಕ್ಷಣೆ ನೀಡಿದೆ.</p><p>ಆಂಧ್ರ ಪ್ರದೇಶ ಹೈಕೋರ್ಟ್ ಈ ಮೂವರ ಜಾಮೀನನ್ನು ರದ್ದು ಮಾಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ ಮಾಲ್ಯಾ ಬಾಗ್ಚಿ ಅವರ ಪೀಠ ತಡೆ ನೀಡಿದೆ.</p><p>ಪ್ರಕರಣ ಸಂಬಂಧ 10 ದಿನಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಪೀಠ ನೋಟಿಸ್ ನೀಡಿತು.</p><p>ನ.26ರಂದು ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಮತ್ತು ಅಲ್ಲಿಯೇ ಜಾಮೀನು ಅರ್ಜಿ ಸಲ್ಲಿಸುವಂತೆ ಆಂಧ್ರಪ್ರದೇಶದ ಹೈಕೋರ್ಟ್ ಈ ಮೂವರಿಗೆ ಸೂಚಿಸಿತ್ತು. ‘ಈ ಹಿಂದೆ ಸಲ್ಲಿಸಿದ್ದ ಆರೋಪಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು ರದ್ದು ಮಾಡಿತ್ತು. ಆದ್ದರಿಂದ ಮತ್ತೊಮ್ಮೆ ಆರೋಪಪಟ್ಟಿ ಸಲ್ಲಿಸುವ ಕೆಲಸ ನಡೆಯುತ್ತಿದೆ’ ಎಂದು ಆಂಧ್ರಪ್ರದೇಶ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರ ಹೇಳಿದರು.</p><p><strong>ಆರೋಪಿಗಳು ಯಾರು?</strong></p><ol><li><p><strong>ಧನಂಜಯ ರೆಡ್ಡಿ</strong>– ಇವರು ಮುಖ್ಯಮಂತ್ರಿ ಕಚೇರಿಯಲ್ಲಿ ಕಾರ್ಯದರ್ಶಿಯಾಗಿದ್ದರು.</p></li><li><p><strong>ಕೃಷ್ಣ ಮೋಹನ್ ರೆಡ್ಡಿ</strong>– ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇವರು ವಿಶೇಷ ಕರ್ತವ್ಯ ಅಧಿಕಾರಿಯಾಗಿದ್ದರು.</p></li><li><p><strong>ಬಾಲಾಜಿ ಗೋವಿಂದಪ್ಪ</strong>– ಇವರು ಭಾರ್ತಿ ಸಿಮೆಂಟ್ನ ನಿರ್ದೇಶಕರು</p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಂಧ್ರಪ್ರದೇಶದ ₹3,500 ಕೋಟಿ ಮೊತ್ತದ ಮದ್ಯ ಹಗರಣದ ಮೂವರು ಆರೋಪಿಗಳಿಗೆ ನ್ಯಾಯಾಲಯದ ಮುಂದೆ ಶರಣಾಗುವುದರಿಂದ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ರಕ್ಷಣೆ ನೀಡಿದೆ.</p><p>ಆಂಧ್ರ ಪ್ರದೇಶ ಹೈಕೋರ್ಟ್ ಈ ಮೂವರ ಜಾಮೀನನ್ನು ರದ್ದು ಮಾಡಿತ್ತು. ಈ ಆದೇಶಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ ಮಾಲ್ಯಾ ಬಾಗ್ಚಿ ಅವರ ಪೀಠ ತಡೆ ನೀಡಿದೆ.</p><p>ಪ್ರಕರಣ ಸಂಬಂಧ 10 ದಿನಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಪೀಠ ನೋಟಿಸ್ ನೀಡಿತು.</p><p>ನ.26ರಂದು ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಮತ್ತು ಅಲ್ಲಿಯೇ ಜಾಮೀನು ಅರ್ಜಿ ಸಲ್ಲಿಸುವಂತೆ ಆಂಧ್ರಪ್ರದೇಶದ ಹೈಕೋರ್ಟ್ ಈ ಮೂವರಿಗೆ ಸೂಚಿಸಿತ್ತು. ‘ಈ ಹಿಂದೆ ಸಲ್ಲಿಸಿದ್ದ ಆರೋಪಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು ರದ್ದು ಮಾಡಿತ್ತು. ಆದ್ದರಿಂದ ಮತ್ತೊಮ್ಮೆ ಆರೋಪಪಟ್ಟಿ ಸಲ್ಲಿಸುವ ಕೆಲಸ ನಡೆಯುತ್ತಿದೆ’ ಎಂದು ಆಂಧ್ರಪ್ರದೇಶ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರ ಹೇಳಿದರು.</p><p><strong>ಆರೋಪಿಗಳು ಯಾರು?</strong></p><ol><li><p><strong>ಧನಂಜಯ ರೆಡ್ಡಿ</strong>– ಇವರು ಮುಖ್ಯಮಂತ್ರಿ ಕಚೇರಿಯಲ್ಲಿ ಕಾರ್ಯದರ್ಶಿಯಾಗಿದ್ದರು.</p></li><li><p><strong>ಕೃಷ್ಣ ಮೋಹನ್ ರೆಡ್ಡಿ</strong>– ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇವರು ವಿಶೇಷ ಕರ್ತವ್ಯ ಅಧಿಕಾರಿಯಾಗಿದ್ದರು.</p></li><li><p><strong>ಬಾಲಾಜಿ ಗೋವಿಂದಪ್ಪ</strong>– ಇವರು ಭಾರ್ತಿ ಸಿಮೆಂಟ್ನ ನಿರ್ದೇಶಕರು</p></li></ol>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>