<p><strong>ಅಮರಾವತಿ/ ಹೈದರಾಬಾದ್:</strong> ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ನಡೆದ ಎನ್ನಲಾದ ₹3,500 ಕೋಟಿ ಮೊತ್ತದ ಅಬಕಾರಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ಹೈದರಾಬಾದ್ ಬಳಿಯ ತೋಟದ ಮನೆಯಿಂದ ₹11 ಕೋಟಿ ನಗದನ್ನು ಜಪ್ತಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಹಗರಣ ಪ್ರಕರಣದಲ್ಲಿ ಆರೋಪಿ 40 (ಎ-40) ಎಂದು ಪಟ್ಟಿ ಮಾಡಲಾದ ವರುಣ್ ಪುರುಷೋತ್ತಮ್ ಎನ್ನುವಾತ ತನ್ನ ಪಾತ್ರವನ್ನು ತಪ್ಪೊಪ್ಪಿಕೊಂಡಿದ್ದಾನೆ. ಜತಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಇದು ದಾಳಿಗೆ ಕಾರಣವಾಯಿತು. ಇದರಿಂದ ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಲಾಯಿತು ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.</p><p>ಈ ಹಗರಣವು ಸಾವಿರಾರು ಕೋಟಿ ರೂಪಾಯಿಗಳದ್ದಾಗಿದ್ದು, ನಕಲಿ ಕಂಪನಿಗಳು, ಲಂಚ ಮತ್ತು ರಾಜಕೀಯ ನಾಯಕರ ಜಾಲವನ್ನು ಜಾಲವನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಪ್ರಕರಣದಲ್ಲಿ ಸದ್ಯದಲ್ಲೇ ಕೆಲವರನ್ನು ಬಂಧಿಸುವ ಕೆಲಸ ಆಗಲಿದೆ. ಇತ್ತೀಚೆಗೆ ನಡೆಸಿದ ದಾಳಿಗಳಲ್ಲಿ ಬಹಿರಂಗಗೊಂಡ ಹಣಕಾಸಿನ ವಹಿವಾಟುಗಳು ಮತ್ತು ರಾಜಕೀಯ ಸಂಪರ್ಕಗಳನ್ನು ತಂಡವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದೂ ಮೂಲಗಳು ತಿಳಿಸಿವೆ. </p><p>2018 ಮತ್ತು 2024 ರ ನಡುವೆ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಹಗರಣ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ/ ಹೈದರಾಬಾದ್:</strong> ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ನಡೆದ ಎನ್ನಲಾದ ₹3,500 ಕೋಟಿ ಮೊತ್ತದ ಅಬಕಾರಿ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಬುಧವಾರ ಹೈದರಾಬಾದ್ ಬಳಿಯ ತೋಟದ ಮನೆಯಿಂದ ₹11 ಕೋಟಿ ನಗದನ್ನು ಜಪ್ತಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p><p>ಹಗರಣ ಪ್ರಕರಣದಲ್ಲಿ ಆರೋಪಿ 40 (ಎ-40) ಎಂದು ಪಟ್ಟಿ ಮಾಡಲಾದ ವರುಣ್ ಪುರುಷೋತ್ತಮ್ ಎನ್ನುವಾತ ತನ್ನ ಪಾತ್ರವನ್ನು ತಪ್ಪೊಪ್ಪಿಕೊಂಡಿದ್ದಾನೆ. ಜತಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಇದು ದಾಳಿಗೆ ಕಾರಣವಾಯಿತು. ಇದರಿಂದ ಅಪಾರ ಪ್ರಮಾಣದ ಹಣವನ್ನು ಪತ್ತೆ ಮಾಡಲಾಯಿತು ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ವರದಿ ತಿಳಿಸಿದೆ.</p><p>ಈ ಹಗರಣವು ಸಾವಿರಾರು ಕೋಟಿ ರೂಪಾಯಿಗಳದ್ದಾಗಿದ್ದು, ನಕಲಿ ಕಂಪನಿಗಳು, ಲಂಚ ಮತ್ತು ರಾಜಕೀಯ ನಾಯಕರ ಜಾಲವನ್ನು ಜಾಲವನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>ಈ ಪ್ರಕರಣದಲ್ಲಿ ಸದ್ಯದಲ್ಲೇ ಕೆಲವರನ್ನು ಬಂಧಿಸುವ ಕೆಲಸ ಆಗಲಿದೆ. ಇತ್ತೀಚೆಗೆ ನಡೆಸಿದ ದಾಳಿಗಳಲ್ಲಿ ಬಹಿರಂಗಗೊಂಡ ಹಣಕಾಸಿನ ವಹಿವಾಟುಗಳು ಮತ್ತು ರಾಜಕೀಯ ಸಂಪರ್ಕಗಳನ್ನು ತಂಡವು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದೂ ಮೂಲಗಳು ತಿಳಿಸಿವೆ. </p><p>2018 ಮತ್ತು 2024 ರ ನಡುವೆ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಹಗರಣ ನಡೆದಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>