ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್ನಾರ್‌ ಜಲ ವಿವಾದ: ಜುಲೈ 5ಕ್ಕೆ ವಿಚಾರಣೆ ಮುಂದೂಡಿಕೆ

Published 2 ಮೇ 2023, 15:32 IST
Last Updated 2 ಮೇ 2023, 15:32 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಣ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಜುಲೈ 5ಕ್ಕೆ ಮುಂದೂಡಿದೆ. 

ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು  ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿತು. ಈ ವೇಳೆ, ಕೇಂದ್ರ ಜಲ ಆಯೋಗದ ವಕೀಲರು, ‘ಸಚಿವ ಸಂಪುಟವು ಸಿದ್ದಪಡಿಸಿದ ನ್ಯಾಯಮಂಡಳಿ ಸ್ಥಾಪನೆಯ ಟಿಪ್ಪಣಿಗೆ ಕೇಂದ್ರ ಜಲಶಕ್ತಿ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಟಿಪ್ಪಣಿಗಳನ್ನು ಗೃಹ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ, ಹಣಕಾಸು ಸಚಿವಾಲಯ ಹಾಗೂ ಪ್ರಧಾನಿ ಕಚೇರಿಗೆ ಈ ಹಿಂದೆಯೇ ಕಳುಹಿಸಲಾಗಿದೆ. ನ್ಯಾಯಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಬೇಕು. ಬಳಿಕ ಅಧಿಸೂಚನೆ ಪ್ರಕಟವಾಗಬೇಕು. ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದರು. ಬಳಿಕ ವಿಚಾರಣೆ ಮುಂದೂಡಲಾಯಿತು. 

ಈ ಜಲ ವಿವಾದಗಳನ್ನು ಬಗೆಹರಿಸಲು ‘ದಕ್ಷಿಣ ಪಿನಾಕಿನಿ ಜಲವಿವಾದ ನ್ಯಾಯಮಂಡಳಿ’ ರಚಿಸಲು ಕೇಂದ್ರ ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶವನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ನಲ್ಲಿ ನೀಡಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT