ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆಯನ್ನು ಮಂಗಳವಾರ ನಡೆಸಿತು. ಈ ವೇಳೆ, ಕೇಂದ್ರ ಜಲ ಆಯೋಗದ ವಕೀಲರು, ‘ಸಚಿವ ಸಂಪುಟವು ಸಿದ್ದಪಡಿಸಿದ ನ್ಯಾಯಮಂಡಳಿ ಸ್ಥಾಪನೆಯ ಟಿಪ್ಪಣಿಗೆ ಕೇಂದ್ರ ಜಲಶಕ್ತಿ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಟಿಪ್ಪಣಿಗಳನ್ನು ಗೃಹ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ, ಹಣಕಾಸು ಸಚಿವಾಲಯ ಹಾಗೂ ಪ್ರಧಾನಿ ಕಚೇರಿಗೆ ಈ ಹಿಂದೆಯೇ ಕಳುಹಿಸಲಾಗಿದೆ. ನ್ಯಾಯಮಂಡಳಿ ರಚನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಬೇಕು. ಬಳಿಕ ಅಧಿಸೂಚನೆ ಪ್ರಕಟವಾಗಬೇಕು. ಅದಕ್ಕಾಗಿ ಕಾಯುತ್ತಿದ್ದೇವೆ’ ಎಂದರು. ಬಳಿಕ ವಿಚಾರಣೆ ಮುಂದೂಡಲಾಯಿತು.