<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ರಾಜಮುಂಡ್ರಿ ಕ್ಷೇತ್ರದ ಸಂಸದೆ ದಗ್ಗುಬಾಟಿ ಪುರಂದೇಶ್ವರಿ ಅವರು 18ನೇ ಲೋಕಸಭೆಯ ಸ್ಫೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. </p><p>ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಬಿಜೆಪಿ ಕೇಂದ್ರ ನಾಯಕತ್ವವು ಇವರ ಹೆಸರು ಪರಿಗಣಿಸದಿರುವುದು ಈ ಮಾತಿಗೆ ಪುಷ್ಟಿ ನೀಡಿದೆ. ಪುರಂದೇಶ್ವರಿ ಅವರು ಪ್ರಸ್ತುತ ಆಂಧ್ರಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷೆಯೂ ಆಗಿದ್ದಾರೆ.</p><p>ಲೋಕಸಭೆಯ ಸ್ಪೀಕರ್ ಸ್ಥಾನ ನಿರ್ಣಾಯಕವಾದುದಾಗಿದೆ. ಪುರಂದೇಶ್ವರಿ ಅವರು ಎನ್ಡಿಎಯ ಪ್ರಮುಖ ಮೈತ್ರಿಪಕ್ಷ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬುನಾಯ್ಡು ಅವರ ಹತ್ತಿರದ ಬಂಧುವು ಆಗಿದ್ದಾರೆ.</p><p>ಆರಂಭದಲ್ಲಿ ನಾಯ್ಡು ಅವರು ಎರಡು ಸಚಿವ ಸ್ಥಾನದ ಜೊತೆಗೆ ಸ್ಪೀಕರ್ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಅವರು ಈಗ ಬಿಜೆಪಿ ಪುರಂದೇಶ್ವರಿ ಹೆಸರನ್ನು ಪರಿಗಣಿಸಿದರೆ ಆಗಬಹುದು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ. </p><p>ಆಂಧ್ರದಿಂದ ಆಯ್ಕೆಯಾಗಿರುವ ಸಂಸದರಲ್ಲಿ ಪುರಂದೇಶ್ವರಿ ಅವರ ಹಿರಿತನವನ್ನು ಪಕ್ಷ ಪರಿಗಣಿಸಿದೆ ಎನ್ನಲಾಗಿದೆ. ಇವರು ಮೂರನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದು, ಯುಪಿಎ ಆಡಳಿತಾವಧಿಯಲ್ಲಿ ಸಚಿವೆಯೂ ಆಗಿದ್ದರು.</p><p>‘ದಕ್ಷಿಣದತ್ತ ಚಿತ್ತ’ ಕಾರ್ಯತಂತ್ರದಡಿ ಆಂಧ್ರದಿಂದ ಆಯ್ಕೆಯಾದ ಪಕ್ಷದ ಸಂಸದರನ್ನು ಸಂಪುಟಕ್ಕೆ ಸೇರ್ಪಡೆಗೆ ಬಿಜೆಪಿ ಚಿಂತನೆ ಹೊಂದಿತ್ತು ಎನ್ನಲಾಗಿದೆ. ಆಂಧ್ರದಲ್ಲಿ ಬಿಜೆಪಿ–ತೆಲುಗುದೇಶಂ–ಜನಸೇನಾ ಮೈತ್ರಿ ಹೊಂದಿದ್ದವು. </p><p>ಇನ್ನೊಂದೆಡೆ, ಸಂಪುಟಕ್ಕೆ ಸೇರಲು ಬಿಜೆಪಿ ಕೇಂದ್ರ ನಾಯಕತ್ವವು ನರಸಾಪುರ ಕ್ಷೇತ್ರದ ಸಂಸದ ಭೂಪತಿರಾಜು ಶ್ರೀನಿವಾಸ ವರ್ಮಾರನ್ನು ಆಯ್ಕೆ ಮಾಡಿರುವುದು ಪಕ್ಷದ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ. ಭೂಪತಿರಾಜು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಸಿ.ಎಂ.ರಮೇಶ್ ರಾಜ್ಯದಿಂದ ಆಯ್ಕೆಯಾದ ಮತ್ತೊಬ್ಬ ಬಿಜೆಪಿ ಸಂಸದ.</p><p>ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿಯ ಆಂಧ್ರಪ್ರದೇಶ ಘಟಕ ಹಾಗೂ ಟಿಡಿಪಿ ಮೂಲಗಳು ಪುರಂದೇಶ್ವರಿ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗುವ ಸ್ಪಷ್ಟ ಸಾಧ್ಯತೆಗಳನ್ನು ದೃಢಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ರಾಜಮುಂಡ್ರಿ ಕ್ಷೇತ್ರದ ಸಂಸದೆ ದಗ್ಗುಬಾಟಿ ಪುರಂದೇಶ್ವರಿ ಅವರು 18ನೇ ಲೋಕಸಭೆಯ ಸ್ಫೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆಗಳು ನಿಚ್ಚಳವಾಗಿವೆ. </p><p>ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಬಿಜೆಪಿ ಕೇಂದ್ರ ನಾಯಕತ್ವವು ಇವರ ಹೆಸರು ಪರಿಗಣಿಸದಿರುವುದು ಈ ಮಾತಿಗೆ ಪುಷ್ಟಿ ನೀಡಿದೆ. ಪುರಂದೇಶ್ವರಿ ಅವರು ಪ್ರಸ್ತುತ ಆಂಧ್ರಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷೆಯೂ ಆಗಿದ್ದಾರೆ.</p><p>ಲೋಕಸಭೆಯ ಸ್ಪೀಕರ್ ಸ್ಥಾನ ನಿರ್ಣಾಯಕವಾದುದಾಗಿದೆ. ಪುರಂದೇಶ್ವರಿ ಅವರು ಎನ್ಡಿಎಯ ಪ್ರಮುಖ ಮೈತ್ರಿಪಕ್ಷ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬುನಾಯ್ಡು ಅವರ ಹತ್ತಿರದ ಬಂಧುವು ಆಗಿದ್ದಾರೆ.</p><p>ಆರಂಭದಲ್ಲಿ ನಾಯ್ಡು ಅವರು ಎರಡು ಸಚಿವ ಸ್ಥಾನದ ಜೊತೆಗೆ ಸ್ಪೀಕರ್ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಅವರು ಈಗ ಬಿಜೆಪಿ ಪುರಂದೇಶ್ವರಿ ಹೆಸರನ್ನು ಪರಿಗಣಿಸಿದರೆ ಆಗಬಹುದು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ. </p><p>ಆಂಧ್ರದಿಂದ ಆಯ್ಕೆಯಾಗಿರುವ ಸಂಸದರಲ್ಲಿ ಪುರಂದೇಶ್ವರಿ ಅವರ ಹಿರಿತನವನ್ನು ಪಕ್ಷ ಪರಿಗಣಿಸಿದೆ ಎನ್ನಲಾಗಿದೆ. ಇವರು ಮೂರನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದು, ಯುಪಿಎ ಆಡಳಿತಾವಧಿಯಲ್ಲಿ ಸಚಿವೆಯೂ ಆಗಿದ್ದರು.</p><p>‘ದಕ್ಷಿಣದತ್ತ ಚಿತ್ತ’ ಕಾರ್ಯತಂತ್ರದಡಿ ಆಂಧ್ರದಿಂದ ಆಯ್ಕೆಯಾದ ಪಕ್ಷದ ಸಂಸದರನ್ನು ಸಂಪುಟಕ್ಕೆ ಸೇರ್ಪಡೆಗೆ ಬಿಜೆಪಿ ಚಿಂತನೆ ಹೊಂದಿತ್ತು ಎನ್ನಲಾಗಿದೆ. ಆಂಧ್ರದಲ್ಲಿ ಬಿಜೆಪಿ–ತೆಲುಗುದೇಶಂ–ಜನಸೇನಾ ಮೈತ್ರಿ ಹೊಂದಿದ್ದವು. </p><p>ಇನ್ನೊಂದೆಡೆ, ಸಂಪುಟಕ್ಕೆ ಸೇರಲು ಬಿಜೆಪಿ ಕೇಂದ್ರ ನಾಯಕತ್ವವು ನರಸಾಪುರ ಕ್ಷೇತ್ರದ ಸಂಸದ ಭೂಪತಿರಾಜು ಶ್ರೀನಿವಾಸ ವರ್ಮಾರನ್ನು ಆಯ್ಕೆ ಮಾಡಿರುವುದು ಪಕ್ಷದ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ. ಭೂಪತಿರಾಜು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ. ಸಿ.ಎಂ.ರಮೇಶ್ ರಾಜ್ಯದಿಂದ ಆಯ್ಕೆಯಾದ ಮತ್ತೊಬ್ಬ ಬಿಜೆಪಿ ಸಂಸದ.</p><p>ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿಯ ಆಂಧ್ರಪ್ರದೇಶ ಘಟಕ ಹಾಗೂ ಟಿಡಿಪಿ ಮೂಲಗಳು ಪುರಂದೇಶ್ವರಿ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗುವ ಸ್ಪಷ್ಟ ಸಾಧ್ಯತೆಗಳನ್ನು ದೃಢಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>