<p><strong>ಅಮರಾವತಿ:</strong> ಆಂಧ್ರಪ್ರದೇಶ ರಾಜ್ಯದಾದ್ಯಂತ 1,036ಕ್ಕೂ ಬಸ್ಗಳನ್ನು ಪರಿಶೀಲಿಸಲಾಗಿದೆ. ಸರಿಯಾದ ದಾಖಲೆಗಳಿಲ್ಲದ 236 ಬಸ್ಗಳಿಗೆ ದಂಡ ವಿಧಿಸಲಾಗಿದೆ ಮತ್ತು ಹಲವು ಪ್ರಕರಣ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಎಂ. ರಾಮಪ್ರಸಾದ್ ಅವರು ಶನಿವಾರ ತಿಳಿಸಿದ್ದಾರೆ. </p>.<p>ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಆರು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಸಂಭವಿಸಿದ ನಾಲ್ಕು ಬಸ್ ದುರಂತ ಘಟನೆಗಳಲ್ಲಿ 45 ಮಂದಿ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ರಸ್ತೆ ಅಪಘಾತಗಳನ್ನು ತಪ್ಪಿಸಲು ತೀವ್ರ ಕ್ರಮ ಕೈಗೊಳ್ಳುತ್ತಿದ್ದೇವೆ’ ಎಂದಿದ್ದಾರೆ.</p>.<p>‘ಟೋಲ್ ಪ್ಲಾಜಾ ಮತ್ತು ಚೆಕ್ಪೋಸ್ಟ್ ಸೇರಿದಂತೆ 16 ಕಡೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಇನ್ನು ನಿಯಮಿತವಾಗಿ ತಪಾಸಣೆ ನಡೆಸಲಾಗುವುದು ಹಾಗೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. </p>.<p>ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಪ್ರಯಾಣಿಕರು ಸಜೀವ ದಹನವಾಗಿದ್ದರು. 22 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಆಂಧ್ರಪ್ರದೇಶ ರಾಜ್ಯದಾದ್ಯಂತ 1,036ಕ್ಕೂ ಬಸ್ಗಳನ್ನು ಪರಿಶೀಲಿಸಲಾಗಿದೆ. ಸರಿಯಾದ ದಾಖಲೆಗಳಿಲ್ಲದ 236 ಬಸ್ಗಳಿಗೆ ದಂಡ ವಿಧಿಸಲಾಗಿದೆ ಮತ್ತು ಹಲವು ಪ್ರಕರಣ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಎಂ. ರಾಮಪ್ರಸಾದ್ ಅವರು ಶನಿವಾರ ತಿಳಿಸಿದ್ದಾರೆ. </p>.<p>ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಆರು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಸಂಭವಿಸಿದ ನಾಲ್ಕು ಬಸ್ ದುರಂತ ಘಟನೆಗಳಲ್ಲಿ 45 ಮಂದಿ ಸಾವಿಗೀಡಾಗಿದ್ದು ಹಲವರು ಗಾಯಗೊಂಡಿದ್ದಾರೆ. ರಸ್ತೆ ಅಪಘಾತಗಳನ್ನು ತಪ್ಪಿಸಲು ತೀವ್ರ ಕ್ರಮ ಕೈಗೊಳ್ಳುತ್ತಿದ್ದೇವೆ’ ಎಂದಿದ್ದಾರೆ.</p>.<p>‘ಟೋಲ್ ಪ್ಲಾಜಾ ಮತ್ತು ಚೆಕ್ಪೋಸ್ಟ್ ಸೇರಿದಂತೆ 16 ಕಡೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಇನ್ನು ನಿಯಮಿತವಾಗಿ ತಪಾಸಣೆ ನಡೆಸಲಾಗುವುದು ಹಾಗೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ. </p>.<p>ಮಾರ್ಕಾಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಪ್ರಯಾಣಿಕರು ಸಜೀವ ದಹನವಾಗಿದ್ದರು. 22 ಮಂದಿ ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>