<p><strong>ತಿರುಪತಿ(ಆಂಧ್ರ ಪ್ರದೇಶ):</strong> ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿದ್ದ ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ನೀಡಿದ್ದಾರೆ.</p><p>ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಬುಧವಾರ ರಾತ್ರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ಗಾಗಿ ನೂರಾರು ಭಕ್ತರು ಮುಗಿಬಿದ್ದು ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಆರು ಭಕ್ತರು ಸಾವುಗೀಡಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಜನವರಿ 10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು.</p><p>ಮುಖ್ಯಮಂತ್ರಿ ಜೊತೆಗೆ ಹಲವು ಸಚಿವರು, ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧಿಕಾರಿಗಳು ಮತ್ತು ಇತರರು ಈ ಸಂದರ್ಭ ಹಾಜರಿದ್ದರು. ಯಾತ್ರೆಗೆ ಆಗಮಿಸುವ ಜನಸಂದಣಿಯನ್ನು ನಿಭಾಯಿಸಲು ಮಾಡಲಾಗಿರುವ ತಾತ್ಕಾಲಿಕ ವ್ಯವಸ್ಥೆಗಳನ್ನು ಸಿಎಂ ಪರಿಶೀಲಿಸಿದರು.</p><p>ಕಾಲ್ತುಳಿತದ ಸ್ಥಳದಲ್ಲೇ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಿಎಂ ನಾಯ್ಡು, ಟಿಟಿಡಿಯ ಜಂಟಿ ಕಾರ್ಯಕಾರಿ ಅಧಿಕಾರಿ ಎಂ ಗೌತಮಿ ಬಳಿ ದುರ್ಘಟನೆಗೆ ಉತ್ತರ ಕೊಡುವಂತೆ ಆಗ್ರಹಿಸಿದರು.</p><p>ಬಳಿಕ ಅವರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.</p> .ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಭಕ್ತರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ(ಆಂಧ್ರ ಪ್ರದೇಶ):</strong> ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿದ್ದ ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ನೀಡಿದ್ದಾರೆ.</p><p>ತಿರುಪತಿಯ ಎಂಜಿಎಂ ಶಾಲೆ ಬಳಿಯ ಬೈರಾಗಿ ಪಟ್ಟೇಡ ಬಳಿ ಬುಧವಾರ ರಾತ್ರಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ಗಾಗಿ ನೂರಾರು ಭಕ್ತರು ಮುಗಿಬಿದ್ದು ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಆರು ಭಕ್ತರು ಸಾವುಗೀಡಾಗಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p><p>ಜನವರಿ 10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು.</p><p>ಮುಖ್ಯಮಂತ್ರಿ ಜೊತೆಗೆ ಹಲವು ಸಚಿವರು, ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧಿಕಾರಿಗಳು ಮತ್ತು ಇತರರು ಈ ಸಂದರ್ಭ ಹಾಜರಿದ್ದರು. ಯಾತ್ರೆಗೆ ಆಗಮಿಸುವ ಜನಸಂದಣಿಯನ್ನು ನಿಭಾಯಿಸಲು ಮಾಡಲಾಗಿರುವ ತಾತ್ಕಾಲಿಕ ವ್ಯವಸ್ಥೆಗಳನ್ನು ಸಿಎಂ ಪರಿಶೀಲಿಸಿದರು.</p><p>ಕಾಲ್ತುಳಿತದ ಸ್ಥಳದಲ್ಲೇ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಸಿಎಂ ನಾಯ್ಡು, ಟಿಟಿಡಿಯ ಜಂಟಿ ಕಾರ್ಯಕಾರಿ ಅಧಿಕಾರಿ ಎಂ ಗೌತಮಿ ಬಳಿ ದುರ್ಘಟನೆಗೆ ಉತ್ತರ ಕೊಡುವಂತೆ ಆಗ್ರಹಿಸಿದರು.</p><p>ಬಳಿಕ ಅವರು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.</p> .ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಭಕ್ತರು ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>