ಮಾಜಿ ಶಾಸಕಿ ವಿಜಯಮ್ಮ ಅವರು ತಮ್ಮ ಪತಿ ದಿವಂಗತ ವೈ.ಎಸ್ ರಾಜಶೇಖರರೆಡ್ಡಿ ಅವರ ಸ್ನೇಹಿತನ ಕುಟುಂಬವನ್ನು ಭೇಟಿ ಮಾಡಲೆಂದು ಕರ್ನೂಲ್ಗೆ ಬಂದಿದ್ದರು. ಕರ್ನೂಲ್ನಿಂದ ಹೊರಟ ಅವರ ಕಾರಿನ ಚಕ್ರದ ಟೈರ್ ಒಡೆದು ಅಪಘಾತ ಸಂಭವಿಸಿದೆ. ಗುತ್ತಿ ರಸ್ತೆಯಲ್ಲಿ ಈ ಅವಘಡ ನಡೆದಿದ್ದು, ವಿಜಯಮ್ಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತರ ಅವರು ಮತ್ತೊಂದು ಕಾರಿನಲ್ಲಿ ಪ್ರಯಾಣ ಮುಂದುವರಿಸಿದರು.