<p><strong>ಹೈದರಾಬಾದ್:</strong> ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ ಅವರೊಂದಿಗೆ ದೆಹಲಿಯಲ್ಲಿ ಮಂಗಳವಾರ ಮಾತುಕತೆ ನಡೆಸಿದ ಅವರು, ‘ಕರ್ನಾಟಕದ ನಿರ್ಧಾರವು ಆಂಧ್ರಪ್ರದೇಶಕ್ಕೆ ಬರುವ ಹೊರಹರಿವಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದಾರೆ. </p>.<p>ಆಂಧ್ರಪ್ರದೇಶ–ಒಡಿಶಾ ನಡುವಿನ ವಂಸಧಾರ ನದಿ ವಿವಾದವನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮತ್ತು ಆಂಧ್ರಪ್ರದೇಶ–ತೆಲಂಗಾಣ ನಡುವಿನ ಗೋದಾವರಿ ನದಿ ನೀರಿನ ಹಂಚಿಕೆಗೆ ನ್ಯಾಯಮಂಡಳಿ ರಚಿಸುವಂತೆಯೂ ನಾಯ್ಡು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ ಅವರೊಂದಿಗೆ ದೆಹಲಿಯಲ್ಲಿ ಮಂಗಳವಾರ ಮಾತುಕತೆ ನಡೆಸಿದ ಅವರು, ‘ಕರ್ನಾಟಕದ ನಿರ್ಧಾರವು ಆಂಧ್ರಪ್ರದೇಶಕ್ಕೆ ಬರುವ ಹೊರಹರಿವಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದಾರೆ. </p>.<p>ಆಂಧ್ರಪ್ರದೇಶ–ಒಡಿಶಾ ನಡುವಿನ ವಂಸಧಾರ ನದಿ ವಿವಾದವನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮತ್ತು ಆಂಧ್ರಪ್ರದೇಶ–ತೆಲಂಗಾಣ ನಡುವಿನ ಗೋದಾವರಿ ನದಿ ನೀರಿನ ಹಂಚಿಕೆಗೆ ನ್ಯಾಯಮಂಡಳಿ ರಚಿಸುವಂತೆಯೂ ನಾಯ್ಡು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>