ಚಂದ್ರಬಾಬು ನಾಯ್ಡು ಅವರಿಗೆ ನ್ಯಾಯಮೂರ್ತಿ ರಮಣ ಅವರು ಆಪ್ತರಾಗಿದ್ದಾರೆ ಹಾಗೂ ಟಿಡಿಪಿಗೆ ಸಹಕಾರ ನೀಡಲು ಹಸ್ತಕ್ಷೇಪ ಮಾಡುತ್ತಿದ್ದಾರೆ, ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದಾಗ ನ್ಯಾಯಸ್ಥಾನದ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರಿಗೆ ಸಿಎಂ ಜಗನ್ಮೋಹನ್ ರೆಡ್ಡಿ ಪತ್ರ ಬರೆದಿದ್ದಾರೆ. ಆ ಕುರಿತು ಶನಿವಾರ ಸಿಎಂ ಪ್ರಧಾನ ಸಲಹೆಗಾರರಾಗಿರುವ ಅಜೇಯ ಕಲ್ಲಾಂ ಮಾಹಿತಿ ನೀಡಿದ್ದಾರೆ.