<p><strong>ಅಮರಾವತಿ:</strong> 2024ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದೇಶದಲ್ಲೇ ದೊಡ್ಡ ಅಕ್ರಮ ಆಂಧ್ರಪ್ರದೇಶದಲ್ಲಿ ನಡೆದಿದೆ ಎಂದು ವೈಎಸ್ಆರ್ಸಿಪಿ ಮುಖ್ಯಸ್ಥರೂ ಆಗಿರುವ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಆರೋಪಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ರಾಹುಲ್ ಗಾಂಧಿ ಮೌನವಾಗಿದ್ದಾರೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ಚುನಾವಣೆಯಲ್ಲಿ ಅಕ್ರಮ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ; ರಾಹುಲ್ ಗಾಂಧಿ.<p>ತಡಿಪಲ್ಲಿಯಲ್ಲಿರುವ ವೈಎಸ್ಆರ್ಸಿಪಿ ಕೇಂದ್ರ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ 48 ಲಕ್ಷ ಅಥವಾ ಶೇ 12.5ರಷ್ಟು ಪ್ರಮಾಣ ಅಕ್ರಮ ನಡೆದಿದೆ ಎಂದು ಆಪಾದಿಸಿದ್ದಾರೆ.</p><p>‘ದುರದೃಷ್ಟವಶಾತ್, ಆಂಧ್ರ ಪ್ರದೇಶದ ಚುನಾವಣಾ ಅಕ್ರಮ ಬಗ್ಗೆ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಜೊತೆ ಉತ್ತಮ ಸಂಬಂಧ ಇರುವುದರಿಂದ ಅವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.ಚುನಾವಣಾ ಅಕ್ರಮ ನಡೆಸಿ 9 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಸಿ.ಟಿ.ರವಿ.<p>ಆಂಧ್ರ ಪ್ರದೇಶದಲ್ಲಿ ನಡೆದ ಚುನಾವಣಾ ಅಕ್ರಮ ದೇಶದಲ್ಲೇ ದೊಡ್ಡದು. ಮತದಾನ ಮುಗಿದು ಎಣಿಕೆ ಆರಂಭವಾಗುವ ಹೊತ್ತಿಗೆ, ಮತಗಳಲ್ಲಿನ ಶೇಕಡಾವಾರು ವ್ಯತ್ಯಾಸವು ದೇಶದಲ್ಲೇ ಅತಿ ದೊಡ್ಡದಾಗಿತ್ತು ಎಂದು ಹೇಳಿದ್ದಾರೆ.</p><p>ಚಂದ್ರಬಾಬು ನಾಯ್ಡು ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಮಾಣಿಕಂ ಟಾಗೋರ್ ಅವರನ್ನು ಪ್ರಶ್ನಿಸಿದ ರೆಡ್ಡಿ, ನೀವು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದೀರಿ ಎಂದು ಹೇಳಿದ್ದಾರೆ.</p>.ಕರ್ನಾಟಕದ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಶೇ100ರಷ್ಟು ಪುರಾವೆ ಇದೆ;ರಾಹುಲ್.<p>ಕಣ್ಣಿಗೆ ಕಾಣುವಂತ ಹಲವು ಅಕ್ರಮಗಳಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದಾರೆ. ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡುವೆ ಉತ್ತಮ ಸಂಬಂಧ ಇರುವುದರಿಂದ ಟಾಗೋರ್ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.</p><p>ಇದಲ್ಲದೆ, ಅಕ್ರಮ ಮದ್ಯದ ಅಂಗಡಿಗಳು, ಪರ್ಮಿಟ್ ಕೊಠಡಿಗಳು ಮತ್ತು ಮರಳು, ಸಿಲಿಕಾ, ಸ್ಫಟಿಕ ಶಿಲೆ ಮತ್ತು ಲ್ಯಾಟರೈಟ್ಗಳಲ್ಲಿನ ಹಗರಣಗಳಂತಹ ಅಕ್ರಮಗಳ ಹೊರತಾಗಿಯೂ, ಟಾಗೋರ್ ಮೌನವಾಗಿದ್ದರು ಎಂದು ಅವರು ಹೇಳಿದ್ದಾರೆ.</p>.ಮಹಾರಾಷ್ಟ್ರದಲ್ಲಿ ಆದಂತೆ ಬಿಹಾರದಲ್ಲಿ ಚುನಾವಣಾ ಅಕ್ರಮ ನಡೆಯಲು ಬಿಡಲ್ಲ: ರಾಹುಲ್.<p>ಚುನಾವಣಾ ಅಕ್ರಮದ ಬಗ್ಗೆವೈಎಸ್ಆರ್ಸಿಪಿ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿತು. ಆಂಧ್ರಪ್ರದೇಶದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳುವುದಾಗಿ ಆಯೋಗ ಭರವಸೆ ನೀಡಿದೆ ಎಂದು ರೆಡ್ಡಿ ಹೇಳಿದ್ದಾರೆ,</p> .‘ಮಹಾ’ ಚುನಾವಣಾ ಅಕ್ರಮ: ಮಾಜಿ ಸಿಎಂ ಚವಾಣ್ ನೇತೃತ್ವದ ಸಮಿತಿ ರಚಿಸಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> 2024ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದೇಶದಲ್ಲೇ ದೊಡ್ಡ ಅಕ್ರಮ ಆಂಧ್ರಪ್ರದೇಶದಲ್ಲಿ ನಡೆದಿದೆ ಎಂದು ವೈಎಸ್ಆರ್ಸಿಪಿ ಮುಖ್ಯಸ್ಥರೂ ಆಗಿರುವ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಆರೋಪಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ರಾಹುಲ್ ಗಾಂಧಿ ಮೌನವಾಗಿದ್ದಾರೆ ಎಂದೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.ಚುನಾವಣೆಯಲ್ಲಿ ಅಕ್ರಮ: ದೇಶದ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತಿದೆ; ರಾಹುಲ್ ಗಾಂಧಿ.<p>ತಡಿಪಲ್ಲಿಯಲ್ಲಿರುವ ವೈಎಸ್ಆರ್ಸಿಪಿ ಕೇಂದ್ರ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ 48 ಲಕ್ಷ ಅಥವಾ ಶೇ 12.5ರಷ್ಟು ಪ್ರಮಾಣ ಅಕ್ರಮ ನಡೆದಿದೆ ಎಂದು ಆಪಾದಿಸಿದ್ದಾರೆ.</p><p>‘ದುರದೃಷ್ಟವಶಾತ್, ಆಂಧ್ರ ಪ್ರದೇಶದ ಚುನಾವಣಾ ಅಕ್ರಮ ಬಗ್ಗೆ ರಾಹುಲ್ ಗಾಂಧಿ ಏಕೆ ಮಾತನಾಡುತ್ತಿಲ್ಲ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಜೊತೆ ಉತ್ತಮ ಸಂಬಂಧ ಇರುವುದರಿಂದ ಅವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.ಚುನಾವಣಾ ಅಕ್ರಮ ನಡೆಸಿ 9 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಸಿ.ಟಿ.ರವಿ.<p>ಆಂಧ್ರ ಪ್ರದೇಶದಲ್ಲಿ ನಡೆದ ಚುನಾವಣಾ ಅಕ್ರಮ ದೇಶದಲ್ಲೇ ದೊಡ್ಡದು. ಮತದಾನ ಮುಗಿದು ಎಣಿಕೆ ಆರಂಭವಾಗುವ ಹೊತ್ತಿಗೆ, ಮತಗಳಲ್ಲಿನ ಶೇಕಡಾವಾರು ವ್ಯತ್ಯಾಸವು ದೇಶದಲ್ಲೇ ಅತಿ ದೊಡ್ಡದಾಗಿತ್ತು ಎಂದು ಹೇಳಿದ್ದಾರೆ.</p><p>ಚಂದ್ರಬಾಬು ನಾಯ್ಡು ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ನ ರಾಷ್ಟ್ರೀಯ ವಕ್ತಾರ ಮಾಣಿಕಂ ಟಾಗೋರ್ ಅವರನ್ನು ಪ್ರಶ್ನಿಸಿದ ರೆಡ್ಡಿ, ನೀವು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದೀರಿ ಎಂದು ಹೇಳಿದ್ದಾರೆ.</p>.ಕರ್ನಾಟಕದ ಒಂದು ಕ್ಷೇತ್ರದಲ್ಲಿ ಚುನಾವಣಾ ಅಕ್ರಮ: ಶೇ100ರಷ್ಟು ಪುರಾವೆ ಇದೆ;ರಾಹುಲ್.<p>ಕಣ್ಣಿಗೆ ಕಾಣುವಂತ ಹಲವು ಅಕ್ರಮಗಳಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದಾರೆ. ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡುವೆ ಉತ್ತಮ ಸಂಬಂಧ ಇರುವುದರಿಂದ ಟಾಗೋರ್ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.</p><p>ಇದಲ್ಲದೆ, ಅಕ್ರಮ ಮದ್ಯದ ಅಂಗಡಿಗಳು, ಪರ್ಮಿಟ್ ಕೊಠಡಿಗಳು ಮತ್ತು ಮರಳು, ಸಿಲಿಕಾ, ಸ್ಫಟಿಕ ಶಿಲೆ ಮತ್ತು ಲ್ಯಾಟರೈಟ್ಗಳಲ್ಲಿನ ಹಗರಣಗಳಂತಹ ಅಕ್ರಮಗಳ ಹೊರತಾಗಿಯೂ, ಟಾಗೋರ್ ಮೌನವಾಗಿದ್ದರು ಎಂದು ಅವರು ಹೇಳಿದ್ದಾರೆ.</p>.ಮಹಾರಾಷ್ಟ್ರದಲ್ಲಿ ಆದಂತೆ ಬಿಹಾರದಲ್ಲಿ ಚುನಾವಣಾ ಅಕ್ರಮ ನಡೆಯಲು ಬಿಡಲ್ಲ: ರಾಹುಲ್.<p>ಚುನಾವಣಾ ಅಕ್ರಮದ ಬಗ್ಗೆವೈಎಸ್ಆರ್ಸಿಪಿ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿತು. ಆಂಧ್ರಪ್ರದೇಶದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳುವುದಾಗಿ ಆಯೋಗ ಭರವಸೆ ನೀಡಿದೆ ಎಂದು ರೆಡ್ಡಿ ಹೇಳಿದ್ದಾರೆ,</p> .‘ಮಹಾ’ ಚುನಾವಣಾ ಅಕ್ರಮ: ಮಾಜಿ ಸಿಎಂ ಚವಾಣ್ ನೇತೃತ್ವದ ಸಮಿತಿ ರಚಿಸಿದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>