ಪ್ರತಿಪಕ್ಷಗಳಾದ ತೆಲುಗು ದೇಶಂ (ಟಿಡಿಪಿ), ಬಿಜೆಪಿ ಹಾಗೂ ಜನಸೇನಾ ಪಕ್ಷಗಳು ರಾಜಕೀಯ ಸಮಾವೇಶಗಳನ್ನು ಆಯೋಜಿಸುತ್ತಿದ್ದವು. ಕಳೆದ ಕೆಲವು ದಿನಗಳ ಹಿಂದೆ ಟಿಡಿಪಿ ರ್ಯಾಲಿಗಳಲ್ಲಿ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದರಿಂದ ಆಂಧ್ರ ಸರ್ಕಾರ ರಾಜಕೀಯ ಪಕ್ಷಗಳು ನಡೆಸುವ ಬೃಹತ್ ಸಮಾವೇಶ, ರ್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.