<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಗ್ರಾಮವೊಂದರಲ್ಲಿ ಜುಲೈನಿಂದ ಸಪ್ಟೆಂಬರ್ 3ರವರೆಗೆ ನಿಗೂಢ ಆರೋಗ್ಯ ಸಮಸ್ಯೆಗಳಿಂದಾಗಿ 23 ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>1200 ಜನರು ವಾಸಿಸುತ್ತಿರುವ ಪುಟ್ಟ ಗ್ರಾಮ ತುರಕಪಲೆಂನಲ್ಲಿನ ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.</p>.<p class="title">ಮೃತರಲ್ಲಿ ಬಹುತೇಕರು 55 ವಯಸ್ಸಿನವರಾಗಿದ್ದರು. ಆರಂಭದಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಅಂಗಾಂಗ ವೈಫಲ್ಯಗೊಂಡು ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಬ್ಯಾಕ್ಟೀರಿಯ ಸೋಂಕಿನಿಂದಾಗಿ ಕೆಲವರು ಮೃತಪಟ್ಟಿರಬಹುದು ಎಂದು ಆರೋಗ್ಯಾಧಿಕಾರಿಗಳು ಶಂಕಿಸಿದ್ದಾರೆ.</p>.<p>ಮೃತರಲ್ಲಿ ಶೇ 80ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆಯನ್ನು ಹೊಂದಿದ್ದರು ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದೆ. ‘ಶನಿವಾರ ರಕ್ತಪರೀಕ್ಷೆಯ ವರದಿಯು ಬರಲಿದ್ದು, ಆ ಬಳಿಕ ಸಾವಿನ ಕಾರಣಗಳು ತಿಳಿದುಬರಲಿದೆ’ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ರಘುನಂದನ್ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಗ್ರಾಮವೊಂದರಲ್ಲಿ ಜುಲೈನಿಂದ ಸಪ್ಟೆಂಬರ್ 3ರವರೆಗೆ ನಿಗೂಢ ಆರೋಗ್ಯ ಸಮಸ್ಯೆಗಳಿಂದಾಗಿ 23 ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>1200 ಜನರು ವಾಸಿಸುತ್ತಿರುವ ಪುಟ್ಟ ಗ್ರಾಮ ತುರಕಪಲೆಂನಲ್ಲಿನ ಪರಿಸ್ಥಿತಿ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.</p>.<p class="title">ಮೃತರಲ್ಲಿ ಬಹುತೇಕರು 55 ವಯಸ್ಸಿನವರಾಗಿದ್ದರು. ಆರಂಭದಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಬಳಿಕ ಅಂಗಾಂಗ ವೈಫಲ್ಯಗೊಂಡು ಕೆಲವೇ ದಿನಗಳಲ್ಲಿ ಮೃತಪಟ್ಟಿದ್ದಾರೆ. ಬ್ಯಾಕ್ಟೀರಿಯ ಸೋಂಕಿನಿಂದಾಗಿ ಕೆಲವರು ಮೃತಪಟ್ಟಿರಬಹುದು ಎಂದು ಆರೋಗ್ಯಾಧಿಕಾರಿಗಳು ಶಂಕಿಸಿದ್ದಾರೆ.</p>.<p>ಮೃತರಲ್ಲಿ ಶೇ 80ರಷ್ಟು ಜನ ಮಧುಮೇಹ, ಅಧಿಕ ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆಯನ್ನು ಹೊಂದಿದ್ದರು ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ತಿಳಿದುಬಂದಿದೆ. ‘ಶನಿವಾರ ರಕ್ತಪರೀಕ್ಷೆಯ ವರದಿಯು ಬರಲಿದ್ದು, ಆ ಬಳಿಕ ಸಾವಿನ ಕಾರಣಗಳು ತಿಳಿದುಬರಲಿದೆ’ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ರಘುನಂದನ್ ಅವರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>