<p>ಅಮರಾವತಿ: ತೆಲುಗುದೇಶಂ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಕೌಶಲ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.</p>.<p>ಕಣ್ಣು ಶಸ್ತ್ರಚಿಕಿತ್ಸೆಗಾಗಿ ಕೋರ್ಟ್ ಅವರಿಗೆ ಈ ಹಿಂದೆ ನಾಲ್ಕು ವಾರಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಇದನ್ನು ಪರಿವರ್ತಿಸಿ ಈಗ ಪೂರ್ಣ ಪ್ರಮಾಣದ ಜಾಮೀನು ಮಂಜೂರು ಮಾಡಿದೆ. ಮಾಜಿ ಮುಖ್ಯಮಂತ್ರಿ ಅವರ ವಯಸ್ಸು, ವಯೋಸಂಬಂಧ ಅನಾರೋಗ್ಯಗಳ ಕಾರಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.</p>.<p>ಆದರೆ, ಕೌಶಲ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಬಾರದು, ಸಾರ್ವಜನಿಕ ರ್ಯಾಲಿ ಆಯೋಜಿಸಬಾರದು, ಸಭೆಗಳಲ್ಲಿ ಭಾಗವಹಿಸಬಾರದು ಎಂದು ಮಧ್ಯಂತರ ಜಾಮೀನಿನಲ್ಲಿ ವಿಧಿಸಿದ್ದ ಷರತ್ತು ನವೆಂಬರ್ 28ರವರೆಗೆ ಚಾಲ್ತಿಯಲ್ಲಿರುತ್ತದೆ. ನ. 29ರಿಂದ ಅನ್ವಯವಾಗುವಂತೆ ಸಡಿಲಗೊಳಿಸಲಾಗುತ್ತದೆ ಎಂದು ಕೋರ್ಟ್ ಆದೇಶಿಸಿದೆ.</p>.<p>ಅಲ್ಲದೆ, ವೈದ್ಯಕೀಯ ತಪಾಸಣಾ ವರದಿಗಳನ್ನು, ರಾಜಮಹೇಂದ್ರವರಂ ಕಾರಾಗೃಹದ ಸೂಪರಿಂಟೆಂಡೆಂಟ್ ಅವರಿಗೆ ಬದಲಾಗಿ, ವಿಜಯವಾಡದಲ್ಲಿ ವಿಶೇಷ ಕೋರ್ಟ್ಗೆ ಹಾಜರುಪಡಿಸಬಹುದು ಎಂದು ನಾಯ್ಡು ಅವರಿಗೆ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಮರಾವತಿ: ತೆಲುಗುದೇಶಂ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಕೌಶಲ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.</p>.<p>ಕಣ್ಣು ಶಸ್ತ್ರಚಿಕಿತ್ಸೆಗಾಗಿ ಕೋರ್ಟ್ ಅವರಿಗೆ ಈ ಹಿಂದೆ ನಾಲ್ಕು ವಾರಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು. ಇದನ್ನು ಪರಿವರ್ತಿಸಿ ಈಗ ಪೂರ್ಣ ಪ್ರಮಾಣದ ಜಾಮೀನು ಮಂಜೂರು ಮಾಡಿದೆ. ಮಾಜಿ ಮುಖ್ಯಮಂತ್ರಿ ಅವರ ವಯಸ್ಸು, ವಯೋಸಂಬಂಧ ಅನಾರೋಗ್ಯಗಳ ಕಾರಣ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.</p>.<p>ಆದರೆ, ಕೌಶಲ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಬಾರದು, ಸಾರ್ವಜನಿಕ ರ್ಯಾಲಿ ಆಯೋಜಿಸಬಾರದು, ಸಭೆಗಳಲ್ಲಿ ಭಾಗವಹಿಸಬಾರದು ಎಂದು ಮಧ್ಯಂತರ ಜಾಮೀನಿನಲ್ಲಿ ವಿಧಿಸಿದ್ದ ಷರತ್ತು ನವೆಂಬರ್ 28ರವರೆಗೆ ಚಾಲ್ತಿಯಲ್ಲಿರುತ್ತದೆ. ನ. 29ರಿಂದ ಅನ್ವಯವಾಗುವಂತೆ ಸಡಿಲಗೊಳಿಸಲಾಗುತ್ತದೆ ಎಂದು ಕೋರ್ಟ್ ಆದೇಶಿಸಿದೆ.</p>.<p>ಅಲ್ಲದೆ, ವೈದ್ಯಕೀಯ ತಪಾಸಣಾ ವರದಿಗಳನ್ನು, ರಾಜಮಹೇಂದ್ರವರಂ ಕಾರಾಗೃಹದ ಸೂಪರಿಂಟೆಂಡೆಂಟ್ ಅವರಿಗೆ ಬದಲಾಗಿ, ವಿಜಯವಾಡದಲ್ಲಿ ವಿಶೇಷ ಕೋರ್ಟ್ಗೆ ಹಾಜರುಪಡಿಸಬಹುದು ಎಂದು ನಾಯ್ಡು ಅವರಿಗೆ ನಿರ್ದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>