ಈ ಮಧ್ಯೆ, ವಿಜಯವಾಡದ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ನ್ಯಾಯಾಲಯವು, ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ನವೆಂಬರ್ 1ರವರೆಗೆ ವಿಸ್ತರಿಸಿದೆ. ಮಾಜಿ ಮುಖ್ಯಮಂತ್ರಿ ನಾಯ್ಡು ಅವರನ್ನು ಆನ್ಲೈನ್ ಮೂಲಕ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶೆ ಬಿ.ಎಸ್.ವಿ. ಬಿಂದು ನಾಯ್ಡು ಅವರ ಆರೋಗ್ಯವನ್ನು ವಿಚಾರಿಸಿದರು.