ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ನರ್ ರಿಂಗ್ ರೋಡ್ ಹಗರಣ: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

Published 11 ಅಕ್ಟೋಬರ್ 2023, 10:38 IST
Last Updated 11 ಅಕ್ಟೋಬರ್ 2023, 10:38 IST
ಅಕ್ಷರ ಗಾತ್ರ

ವಿಜಯವಾಡ: ಅಮರಾವತಿಯ ಇನ್ನರ್ ರಿಂಗ್ ರೋಡ್ ಹಗರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಚಂದ್ರಬಾಬು ನಾಯ್ಡು ಪರ ವಕೀಲರ ವಾದವನ್ನು ಆಲಿಸಿದ ನ್ಯಾಯಾಲಯ ಅಕ್ಟೋಬರ್‌ 16ರವರೆಗೆ ಅವರನ್ನು ಬಂಧಿಸದಂತೆ ನ್ಯಾಯಾಲಯ ಸೂಚಿಸಿದೆ.

ಕೌಶಲ ಅಭಿವೃದ್ಧಿ ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗ ಪ್ರಕರಣದಲ್ಲಿ ಸೆ.9ರಂದು ಬಂಧನವಾಗಿರುವ ಚಂದ್ರಬಾಬು ನಾಯ್ಡು ಅವರನ್ನು ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿ ಇರಿಸಲಾಗಿದೆ.

ಕೌಶಲ ಅಭಿವೃದ್ಧಿ ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ನಷ್ಟವಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT