<p><strong>ಮದನಪಲ್ಲಿ:</strong> ಆಂಧ್ರಪ್ರದೇಶದಲ್ಲಿ ಪ್ರೇಮಿಗಳ ದಿನವೇ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಮುಖಕ್ಕೆ ಆ್ಯಸಿಡ್ ಎರಚಿರುವ ಘಟನೆ ಶುಕ್ರವಾರ ನಡೆದಿದೆ.</p><p>ಆ್ಯಸಿಡ್ ಎರಚಿರುವ ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಈ ಘಟನೆ ಬಳಿಕ ಗಣೇಶ್ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ.</p><p>ಗಣೇಶ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಯುವತಿಗೆ ಬರುವ ಏಪ್ರಿಲ್ ತಿಂಗಳಲ್ಲಿ ವಿವಾಹ ನಿಶ್ಚಯವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಅನ್ನಮಯ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವತಿ ವಾಸವಿದ್ದು, ಅಲ್ಲಿಗೆ ತೆರಳಿದ ಗಣೇಶ್ ಯುವತಿ ಮೇಲೆ ಹಲ್ಲೆ ಮಾಡಿ, ಆ್ಯಸಿಡ್ ಎರಚಿದ್ದಾನೆ. ತಕ್ಷಣಕ್ಕೆ ಸ್ಥಳೀಯರು ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಈ ಘಟನೆ ಸಂಬಂಧ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. </p><p>ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದನಪಲ್ಲಿ:</strong> ಆಂಧ್ರಪ್ರದೇಶದಲ್ಲಿ ಪ್ರೇಮಿಗಳ ದಿನವೇ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಮುಖಕ್ಕೆ ಆ್ಯಸಿಡ್ ಎರಚಿರುವ ಘಟನೆ ಶುಕ್ರವಾರ ನಡೆದಿದೆ.</p><p>ಆ್ಯಸಿಡ್ ಎರಚಿರುವ ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಈ ಘಟನೆ ಬಳಿಕ ಗಣೇಶ್ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ.</p><p>ಗಣೇಶ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಯುವತಿಗೆ ಬರುವ ಏಪ್ರಿಲ್ ತಿಂಗಳಲ್ಲಿ ವಿವಾಹ ನಿಶ್ಚಯವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.</p><p>ಅನ್ನಮಯ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವತಿ ವಾಸವಿದ್ದು, ಅಲ್ಲಿಗೆ ತೆರಳಿದ ಗಣೇಶ್ ಯುವತಿ ಮೇಲೆ ಹಲ್ಲೆ ಮಾಡಿ, ಆ್ಯಸಿಡ್ ಎರಚಿದ್ದಾನೆ. ತಕ್ಷಣಕ್ಕೆ ಸ್ಥಳೀಯರು ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ಈ ಘಟನೆ ಸಂಬಂಧ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. </p><p>ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>