<p><strong>ವೆಟ್ಲಪಾಲೆಂ (ಆಂಧ್ರಪ್ರದೇಶ):</strong> ಕಾಕಿನಾಡ ಜಿಲ್ಲೆಯಲ್ಲಿನ ಪಟಾಕಿ ತಯಾರಿಕಾ ಘಟಕವೊಂದ ರಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು, ಒಂಬತ್ತು ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದಾರೆ.</p><p>‘ಒಂಬತ್ತು ಮಂದಿ ಗಂಭೀರವಾಗಿ ಗಾಯ ಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗಬಹುದು’ ಎಂದು ಆಂಧ್ರ ಪ್ರದೇಶದ ಗೃಹ ಸಚಿವೆ ವಂಗಲಪೂಡಿ ಅನಿತಾ ಅವರು ತಿಳಿಸಿದ್ದಾರೆ.</p><p>‘ಸ್ಫೋಟ ಸಂಭವಿಸಿದ ವೇಳೆ 30ಕ್ಕೂ ಹೆಚ್ಚು ಕಾರ್ಮಿಕರು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಯಾರೂ ಬದುಕುಳಿಯುವ ಸಾಧ್ಯತೆಗಳಿಲ್ಲ’ ಎಂದು ಸಚಿವ ಕಂಡುಲಾ ದುರ್ಗೇಶ್ ಅವರು ತಿಳಿಸಿದ್ದಾರೆ.</p><p>‘ಸ್ಫೋಟದ ತೀವ್ರತೆಯು ಅಧಿಕ ವಾಗಿತ್ತು. ಕೆಲ ಮೃತದೇಹಗಳು ಸಮೀಪದ ಭತ್ತದ ಗದ್ದೆಯಲ್ಲಿ ಪತ್ತೆ ಯಾಗಿವೆ. ಉಳಿದ ಮೃತದೇಹಗಳ ಅವಶೇಷಗಳ ಪತ್ತೆಗಾಗಿ ಡ್ರೋನ್ ಅನ್ನು ಬಳಕೆ ಮಾಡಲಾಗಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆ<br>ಯುತ್ತಿರುವವರ ದೇಹಗಳು ಬಹುತೇಕ ಸುಟ್ಟುಹೋಗಿವೆ’ ಎಂದು ತಿಳಿಸಿದರು.</p><p>‘ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಗೊಂಡವರಿಗೆ ತಕ್ಷಣ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವೆಟ್ಲಪಾಲೆಂ (ಆಂಧ್ರಪ್ರದೇಶ):</strong> ಕಾಕಿನಾಡ ಜಿಲ್ಲೆಯಲ್ಲಿನ ಪಟಾಕಿ ತಯಾರಿಕಾ ಘಟಕವೊಂದ ರಲ್ಲಿ ಶನಿವಾರ ಸ್ಫೋಟ ಸಂಭವಿಸಿದ್ದು, ಒಂಬತ್ತು ಮಹಿಳೆಯರು ಸೇರಿ 20 ಮಂದಿ ಮೃತಪಟ್ಟಿದ್ದಾರೆ.</p><p>‘ಒಂಬತ್ತು ಮಂದಿ ಗಂಭೀರವಾಗಿ ಗಾಯ ಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗಬಹುದು’ ಎಂದು ಆಂಧ್ರ ಪ್ರದೇಶದ ಗೃಹ ಸಚಿವೆ ವಂಗಲಪೂಡಿ ಅನಿತಾ ಅವರು ತಿಳಿಸಿದ್ದಾರೆ.</p><p>‘ಸ್ಫೋಟ ಸಂಭವಿಸಿದ ವೇಳೆ 30ಕ್ಕೂ ಹೆಚ್ಚು ಕಾರ್ಮಿಕರು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಯಾರೂ ಬದುಕುಳಿಯುವ ಸಾಧ್ಯತೆಗಳಿಲ್ಲ’ ಎಂದು ಸಚಿವ ಕಂಡುಲಾ ದುರ್ಗೇಶ್ ಅವರು ತಿಳಿಸಿದ್ದಾರೆ.</p><p>‘ಸ್ಫೋಟದ ತೀವ್ರತೆಯು ಅಧಿಕ ವಾಗಿತ್ತು. ಕೆಲ ಮೃತದೇಹಗಳು ಸಮೀಪದ ಭತ್ತದ ಗದ್ದೆಯಲ್ಲಿ ಪತ್ತೆ ಯಾಗಿವೆ. ಉಳಿದ ಮೃತದೇಹಗಳ ಅವಶೇಷಗಳ ಪತ್ತೆಗಾಗಿ ಡ್ರೋನ್ ಅನ್ನು ಬಳಕೆ ಮಾಡಲಾಗಿತ್ತು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆ<br>ಯುತ್ತಿರುವವರ ದೇಹಗಳು ಬಹುತೇಕ ಸುಟ್ಟುಹೋಗಿವೆ’ ಎಂದು ತಿಳಿಸಿದರು.</p><p>‘ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಗೊಂಡವರಿಗೆ ತಕ್ಷಣ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>