<p><strong>ಅಮರಾವತಿ</strong>: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ಈರುಳ್ಳಿ ಬೆಳೆಯ ಬೆಳೆಗಾರರಿಗೆ ಆಂಧ್ರಪ್ರದೇಶ ಸರ್ಕಾರ ಭರ್ಜರಿ ಪರಿಹಾರ ಘೋಷಿಸಿದೆ.</p><p>ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶನಿವಾರ ಈರುಳ್ಳಿ ಬೆಳೆಗಾರರಿಗೆ ಬೆಳೆಹಾನಿ ಪರಿಹಾರ ಘೋಷಿಸಿದ್ದಾರೆ.</p><p>ಹಾನಿಗೊಳಗಾದ ಪ್ರತಿ ಹೆಕ್ಟೇರ್ಗೆ ₹50,000 ಪರಿಹಾರ ನೀಡುವುದಾಗಿ ನಾಯ್ಡು ಟ್ವೀಟ್ ಮೂಲಕ ಘೋಷಿಸಿದ್ದಾರೆ. ಆಂಧ್ರದಲ್ಲಿ ಈ ಸಾರಿಯ ಮಳೆಗೆ ಸುಮಾರು 45,000 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.</p><p>ಈರುಳ್ಳಿ ಬೆಳೆ ಚೆನ್ನಾಗಿ ಬಂದಿದ್ದ ಸಮಯದಲ್ಲಿಯೇ ನಷ್ಟ ಅನುಭವಿಸಿದ ರೈತರನ್ನು ಬೆಂಬಲಿಸಲು ನಮ್ಮ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p>ಈ ಕ್ರಮವು ರಾಜ್ಯದ ಹಣಕಾಸಿನ ಪರಿಸ್ಥಿತಿ ಮೇಲೆ ಆರ್ಥಿಕ ಹೊರೆಯನ್ನುಂಟು ಮಾಡುತ್ತದೆ ಎಂದು ಹೇಳಿರುವ ಅವರು, ರೈತರ ಕಲ್ಯಾಣದ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಹಾನಿಗೊಳಗಾದ ಈರುಳ್ಳಿ ಬೆಳೆಯ ಬೆಳೆಗಾರರಿಗೆ ಆಂಧ್ರಪ್ರದೇಶ ಸರ್ಕಾರ ಭರ್ಜರಿ ಪರಿಹಾರ ಘೋಷಿಸಿದೆ.</p><p>ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಶನಿವಾರ ಈರುಳ್ಳಿ ಬೆಳೆಗಾರರಿಗೆ ಬೆಳೆಹಾನಿ ಪರಿಹಾರ ಘೋಷಿಸಿದ್ದಾರೆ.</p><p>ಹಾನಿಗೊಳಗಾದ ಪ್ರತಿ ಹೆಕ್ಟೇರ್ಗೆ ₹50,000 ಪರಿಹಾರ ನೀಡುವುದಾಗಿ ನಾಯ್ಡು ಟ್ವೀಟ್ ಮೂಲಕ ಘೋಷಿಸಿದ್ದಾರೆ. ಆಂಧ್ರದಲ್ಲಿ ಈ ಸಾರಿಯ ಮಳೆಗೆ ಸುಮಾರು 45,000 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.</p><p>ಈರುಳ್ಳಿ ಬೆಳೆ ಚೆನ್ನಾಗಿ ಬಂದಿದ್ದ ಸಮಯದಲ್ಲಿಯೇ ನಷ್ಟ ಅನುಭವಿಸಿದ ರೈತರನ್ನು ಬೆಂಬಲಿಸಲು ನಮ್ಮ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p><p>ಈ ಕ್ರಮವು ರಾಜ್ಯದ ಹಣಕಾಸಿನ ಪರಿಸ್ಥಿತಿ ಮೇಲೆ ಆರ್ಥಿಕ ಹೊರೆಯನ್ನುಂಟು ಮಾಡುತ್ತದೆ ಎಂದು ಹೇಳಿರುವ ಅವರು, ರೈತರ ಕಲ್ಯಾಣದ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>