<p><strong>ಅಮರಾವತಿ:</strong> ಸಮರ್ಪಕ ತರಬೇತಿ ಪಡೆದ ಸ್ನಾತಕೋತ್ತರ ಪದವಿ ಪೂರೈಸಿದ ಆಯುರ್ವೇದ ವೈದ್ಯರಿಗೆ ಸ್ವತಂತ್ರವಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಆಂಧ್ರಪ್ರದೇಶ ಸರ್ಕಾರ ಅನುಮತಿ ನೀಡಿದೆ.</p>.<p>‘ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯನ್ನು ಆಧುನಿಕ ವೈದ್ಯಕೀಯ ಪದ್ಧತಿಯೊಂದಿಗೆ ಸಂಯೋಜಿಸುವುದಕ್ಕಾಗಿ ಆಂಧ್ರಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ’ ಎಂದು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.</p>.<p>‘ಭಾರತೀಯ ವೈದ್ಯಕೀಯ ಕೇಂದ್ರ ಮಂಡಳಿ–2020 ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ರಾಷ್ಟ್ರೀಯ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಆಯುರ್ವೇದ ವೈದ್ಯರು ಆಯ್ದ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಸರ್ಕಾರದ ಈ ನಿರ್ಧಾರದಿಂದ ಅರ್ಹ ಆಯುರ್ವೇದ ವೈದ್ಯರು, ಶೇ 39ರಷ್ಟು ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಶೇ 19ರಷ್ಟು ಕಿವಿ, ಮೂಗು ಮತ್ತು ಗಂಟಲು ಮತ್ತು ಕಣ್ಣಿಗೆ ಸಂಬಂಧಿಸಿದ ಚಿಕಿತ್ಸೆಗಳನ್ನು ನೀಡಬಹುದಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಸಮರ್ಪಕ ತರಬೇತಿ ಪಡೆದ ಸ್ನಾತಕೋತ್ತರ ಪದವಿ ಪೂರೈಸಿದ ಆಯುರ್ವೇದ ವೈದ್ಯರಿಗೆ ಸ್ವತಂತ್ರವಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಆಂಧ್ರಪ್ರದೇಶ ಸರ್ಕಾರ ಅನುಮತಿ ನೀಡಿದೆ.</p>.<p>‘ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯನ್ನು ಆಧುನಿಕ ವೈದ್ಯಕೀಯ ಪದ್ಧತಿಯೊಂದಿಗೆ ಸಂಯೋಜಿಸುವುದಕ್ಕಾಗಿ ಆಂಧ್ರಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ’ ಎಂದು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.</p>.<p>‘ಭಾರತೀಯ ವೈದ್ಯಕೀಯ ಕೇಂದ್ರ ಮಂಡಳಿ–2020 ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ರಾಷ್ಟ್ರೀಯ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಆಯುರ್ವೇದ ವೈದ್ಯರು ಆಯ್ದ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಲಾಗಿದೆ.</p>.<p>ಸರ್ಕಾರದ ಈ ನಿರ್ಧಾರದಿಂದ ಅರ್ಹ ಆಯುರ್ವೇದ ವೈದ್ಯರು, ಶೇ 39ರಷ್ಟು ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಶೇ 19ರಷ್ಟು ಕಿವಿ, ಮೂಗು ಮತ್ತು ಗಂಟಲು ಮತ್ತು ಕಣ್ಣಿಗೆ ಸಂಬಂಧಿಸಿದ ಚಿಕಿತ್ಸೆಗಳನ್ನು ನೀಡಬಹುದಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>