<p><strong>ಅಮರಾವತಿ:</strong> ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. </p><p>ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತಿತರರು ಈಚೆಗೆ ಆಂಧ್ರ ಪ್ರದೇಶದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ, ಚರ್ಚಿಸಿದ್ದರು. </p><p>ಈ ಸಂದರ್ಭದಲ್ಲಿ, ಶರ್ಮಿಳಾ ಅವರ ಸೇರ್ಪಡೆಯು ಪಕ್ಷದ ಪುನಶ್ಚೇತನಕ್ಕೆ ನೆರವಾಗಲಿದೆ ಎಂದು ಆಂಧ್ರಪ್ರದೇಶದ ನಾಯಕರು ಹೈಕಮಾಂಡ್ಗೆ ತಿಳಿಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಶೇ 90ರಷ್ಟು ನಾಯಕರು ಶರ್ಮಿಳಾ ಸೇರ್ಪಡೆ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿದ್ದವು.</p><p>ತೆಲಂಗಾಣದಲ್ಲಿ ತಮ್ಮದೇ ಪ್ರತ್ಯೇಕ ಪಕ್ಷ ಸ್ಥಾಪಿಸಿರುವ ಶರ್ಮಿಳಾ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. </p><p>ಈ ಎಲ್ಲಾ ಬೆಳವಣಿಗೆಗಳು ಮಧ್ಯೆ ಶರ್ಮಿಳಾ ಅವರು ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು. </p><p>ಇದೇ ವರ್ಷ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಶರ್ಮಿಳಾ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. </p>.ವೈ.ಎಸ್ ಶರ್ಮಿಳಾ ಸೇರ್ಪಡೆಗೆ ಆಂಧ್ರ ಕಾಂಗ್ರೆಸ್ ಇಂಗಿತ.Telangana Election: ಸೋನಿಯಾ ಗಾಂಧಿ –ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ.ಡಿ.ಕೆ ಶಿವಕುಮಾರ್ರನ್ನು ಭೇಟಿಯಾದ ವೈಎಸ್ಎರ್ ಪುತ್ರಿ ಶರ್ಮಿಳಾ.ತೆಲಂಗಾಣ ಅಫ್ಗಾನಿಸ್ತಾನ, ಕೆಸಿಆರ್ ತಾಲಿಬಾನ್: ವೈಎಸ್ ಶರ್ಮಿಳಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಈ ವಾರಾಂತ್ಯಕ್ಕೆ ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. </p><p>ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತಿತರರು ಈಚೆಗೆ ಆಂಧ್ರ ಪ್ರದೇಶದ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ, ಚರ್ಚಿಸಿದ್ದರು. </p><p>ಈ ಸಂದರ್ಭದಲ್ಲಿ, ಶರ್ಮಿಳಾ ಅವರ ಸೇರ್ಪಡೆಯು ಪಕ್ಷದ ಪುನಶ್ಚೇತನಕ್ಕೆ ನೆರವಾಗಲಿದೆ ಎಂದು ಆಂಧ್ರಪ್ರದೇಶದ ನಾಯಕರು ಹೈಕಮಾಂಡ್ಗೆ ತಿಳಿಸಿದ್ದರು. ಸಭೆಯಲ್ಲಿ ಭಾಗಿಯಾಗಿದ್ದ ಶೇ 90ರಷ್ಟು ನಾಯಕರು ಶರ್ಮಿಳಾ ಸೇರ್ಪಡೆ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿದ್ದವು.</p><p>ತೆಲಂಗಾಣದಲ್ಲಿ ತಮ್ಮದೇ ಪ್ರತ್ಯೇಕ ಪಕ್ಷ ಸ್ಥಾಪಿಸಿರುವ ಶರ್ಮಿಳಾ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. </p><p>ಈ ಎಲ್ಲಾ ಬೆಳವಣಿಗೆಗಳು ಮಧ್ಯೆ ಶರ್ಮಿಳಾ ಅವರು ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು. </p><p>ಇದೇ ವರ್ಷ ಲೋಕಸಭೆ ಮತ್ತು ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಶರ್ಮಿಳಾ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. </p>.ವೈ.ಎಸ್ ಶರ್ಮಿಳಾ ಸೇರ್ಪಡೆಗೆ ಆಂಧ್ರ ಕಾಂಗ್ರೆಸ್ ಇಂಗಿತ.Telangana Election: ಸೋನಿಯಾ ಗಾಂಧಿ –ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ.ಡಿ.ಕೆ ಶಿವಕುಮಾರ್ರನ್ನು ಭೇಟಿಯಾದ ವೈಎಸ್ಎರ್ ಪುತ್ರಿ ಶರ್ಮಿಳಾ.ತೆಲಂಗಾಣ ಅಫ್ಗಾನಿಸ್ತಾನ, ಕೆಸಿಆರ್ ತಾಲಿಬಾನ್: ವೈಎಸ್ ಶರ್ಮಿಳಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>