ಘಟನೆಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಖಂಡಿಸಿದ್ದು, ‘ಪೊಲೀಸರಿಂದ ಘಟನೆಯ ಕುರಿತು ಸಮಗ್ರ ಮಾಹಿತಿ ಪಡೆದಿದ್ದು, ಅಮಾನವೀಯ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ಸಂತ್ರಸ್ತರ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಲು ಸಿದ್ದರಿದ್ದೇವೆ’ ಎಂದು ತಿಳಿಸಿದ್ದಾರೆ.