<p><strong>ಅಮರಾವತಿ</strong>: ಬಾಲಕ ಸೇರಿದಂತೆ ಮೂವರು ಆರೋಪಿಗಳು ವ್ಯಕ್ತಿಯೊಬ್ಬರನ್ನು ಥಳಿಸಿ, ಅವರ ಗರ್ಭಿಣಿ ಪತ್ನಿಯ ಮೇಲೆ ಶನಿವಾರ ರಾತ್ರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಇಲ್ಲಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ರೇಪೆಲ್ಲೆ ಪಟ್ಟಣ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧಮೂವರನ್ನು ಬಂಧಿಸಲಾಗಿದೆ ಎಂದು ಬಪಟ್ಲಾ ಜಿಲ್ಲೆಯ ಎಸ್ಪಿ ವಕುಲ್ ಜಿಂದಾಲ್ ಭಾನುವಾರ ಹೇಳಿದ್ದಾರೆ.</p>.<p>ಪ್ರಕಾಸಂ ಜಿಲ್ಲೆಯ ವಲಸೆ ಕೃಷಿ ಕಾರ್ಮಿಕರಾಗಿರುವ ದಂಪತಿ, ಕೃಷ್ಣ ಜಿಲ್ಲೆಯ ನಾಗಯಲಂಕಕ್ಕೆ ತಲುಪುವ ಸಲುವಾಗಿಗುಂಟೂರಿನಿಂದ ಶನಿವಾರ ರಾತ್ರಿ 11.30ಕ್ಕೆ ರೇಪೆಲ್ಲೆ ಪಟ್ಟಣಕ್ಕೆ ಆಗಮಿಸಿದ್ದರು.</p>.<p>ಅವರು ಫ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಬಂದ ಮೂವರು, ವ್ಯಕ್ತಿಯನ್ನು ಎಬ್ಬಿಸಿ ಸಮಯ ಎಷ್ಟು ಎಂದು ಕೇಳಿದ್ದಾರೆ. ವಾಚ್ ಇಲ್ಲದ ಕಾರಣ ಆತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 'ಅದಾಗಲೇ ಅಮಲಿನಲ್ಲಿದ್ದ ಆರೋಪಿಗಳು, ವ್ಯಕ್ತಿಯನ್ನು ಥಳಿಸಿ ₹ 750 ಹಣವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಗರ್ಭಿಣಿಯ ಮೇಲೂ ಹಲ್ಲೆ ನಡೆಸಿದ ಆರೋಪಿಗಳು, ಲೈಂಗಿಕ ದೌರ್ಜನ್ಯವೆಸಗಿದ್ದಾರೆ' ಎಂದುಜಿಂದಾಲ್ ಅವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಆ ವೇಳೆ ರೈಲು ನಿಲ್ದಾಣದಿಂದ ಓಡಿಹೋದ ಮಹಿಳೆಯ ಪತಿ, ಸ್ಥಳೀಯ ಪೊಲೀಸರ ನೆರವು ಕೋರಿದ್ದಾರೆ. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಿಡಿಗೇಡಿಗಳು ಪರಾರಿಯಾಗಿದ್ದರು.ಸಂತ್ರಸ್ತೆಯನ್ನು ತಕ್ಷಣವೇ ಸಮಯದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/farmer-cm-jds-leader-hd-kumaraswamy-slams-maha-dcm-ajit-pawar-over-karnataka-maharashtra-border-933162.html" itemprop="url" target="_blank">ಕನ್ನಡಿಗರೇ ಹೆಚ್ಚಾಗಿರುವ ಪ್ರದೇಶಗಳು ಮಹಾರಾಷ್ಟ್ರದಲ್ಲೂ ಇವೆ: ಎಚ್ಡಿಕೆ ತಿರುಗೇಟು</a></p>.<p>'ಪೊಲೀಸ್ಶ್ವಾನಗಳ ಸಹಾಯದಿಂದ ಆರೋಪಿಗಳನ್ನು ಬೆನ್ನತ್ತಲಾಯಿತು. ಕಿಡಿಗೇಡಿಯೊಬ್ಬ ಶರ್ಟ್ ಬಿಸಾಡಿದ್ದದ್ದು ಪತ್ತೆಯಾಯಿತು. ಈ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ಮುಂದುವರಿಸಲಾಯಿತು. ಇಂದು (ಭಾನುವಾರ) ಮಧ್ಯಾಹ್ನ ಮೂವರನ್ನೂ ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾಗಿರುವ ಬಾಲಕ ಈಗಾಗಲೇ ಕಳ್ಳತನಕ್ಕೆ ಸಂಬಂಧಿಸಿದಮೂರು ಪ್ರಕರಣಗಳಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದ್ದಾನೆ' ಎಂದು ವಿವರಿಸಿದ್ದಾರೆ.</p>.<p>ಮೂಲಗಳ ಪ್ರಕಾರ ಸಂತ್ರಸ್ತೆಯ ಪತಿ ಮೊದಲು ನೆರವಿಗಾಗಿ ಮನವಿ ಮಾಡಿದಾಗ ರೇಪೆಲ್ಲೆ ರೈಲ್ವೆ ಪೊಲೀಸ್ ಠಾಣೆಯವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅವರು, ನೆರವು ಕೋರಿ ಪಟ್ಟಣ ಪೊಲೀಸ್ ಠಾಣೆಗೆ ಹೋಗುವಂತಾಗಿದೆ ಎನ್ನಲಾಗಿದೆ.</p>.<p>ಏತನ್ಮಧ್ಯೆ ಘಟನೆ ಕುರಿತು ಕಿಡಿಕಾರಿರುವ ಆಂಧ್ರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ವಿ. ಪದ್ಮಾ, ವಿಸ್ತೃತ ವರದಿ ನೀಡುವಂತೆ ಆಗ್ರಹಿಸಿದ್ದಾರೆ. ವಿರೋಧ ಪಕ್ಷಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವುದನ್ನು ಈ ಪ್ರಕರಣ ಬಹಿರಂಗ ಪಡಿಸಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಬಾಲಕ ಸೇರಿದಂತೆ ಮೂವರು ಆರೋಪಿಗಳು ವ್ಯಕ್ತಿಯೊಬ್ಬರನ್ನು ಥಳಿಸಿ, ಅವರ ಗರ್ಭಿಣಿ ಪತ್ನಿಯ ಮೇಲೆ ಶನಿವಾರ ರಾತ್ರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.ಇಲ್ಲಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ರೇಪೆಲ್ಲೆ ಪಟ್ಟಣ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣ ಸಂಬಂಧಮೂವರನ್ನು ಬಂಧಿಸಲಾಗಿದೆ ಎಂದು ಬಪಟ್ಲಾ ಜಿಲ್ಲೆಯ ಎಸ್ಪಿ ವಕುಲ್ ಜಿಂದಾಲ್ ಭಾನುವಾರ ಹೇಳಿದ್ದಾರೆ.</p>.<p>ಪ್ರಕಾಸಂ ಜಿಲ್ಲೆಯ ವಲಸೆ ಕೃಷಿ ಕಾರ್ಮಿಕರಾಗಿರುವ ದಂಪತಿ, ಕೃಷ್ಣ ಜಿಲ್ಲೆಯ ನಾಗಯಲಂಕಕ್ಕೆ ತಲುಪುವ ಸಲುವಾಗಿಗುಂಟೂರಿನಿಂದ ಶನಿವಾರ ರಾತ್ರಿ 11.30ಕ್ಕೆ ರೇಪೆಲ್ಲೆ ಪಟ್ಟಣಕ್ಕೆ ಆಗಮಿಸಿದ್ದರು.</p>.<p>ಅವರು ಫ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಸಂದರ್ಭದಲ್ಲಿ ಬಂದ ಮೂವರು, ವ್ಯಕ್ತಿಯನ್ನು ಎಬ್ಬಿಸಿ ಸಮಯ ಎಷ್ಟು ಎಂದು ಕೇಳಿದ್ದಾರೆ. ವಾಚ್ ಇಲ್ಲದ ಕಾರಣ ಆತ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. 'ಅದಾಗಲೇ ಅಮಲಿನಲ್ಲಿದ್ದ ಆರೋಪಿಗಳು, ವ್ಯಕ್ತಿಯನ್ನು ಥಳಿಸಿ ₹ 750 ಹಣವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಗರ್ಭಿಣಿಯ ಮೇಲೂ ಹಲ್ಲೆ ನಡೆಸಿದ ಆರೋಪಿಗಳು, ಲೈಂಗಿಕ ದೌರ್ಜನ್ಯವೆಸಗಿದ್ದಾರೆ' ಎಂದುಜಿಂದಾಲ್ ಅವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಆ ವೇಳೆ ರೈಲು ನಿಲ್ದಾಣದಿಂದ ಓಡಿಹೋದ ಮಹಿಳೆಯ ಪತಿ, ಸ್ಥಳೀಯ ಪೊಲೀಸರ ನೆರವು ಕೋರಿದ್ದಾರೆ. ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಕಿಡಿಗೇಡಿಗಳು ಪರಾರಿಯಾಗಿದ್ದರು.ಸಂತ್ರಸ್ತೆಯನ್ನು ತಕ್ಷಣವೇ ಸಮಯದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/farmer-cm-jds-leader-hd-kumaraswamy-slams-maha-dcm-ajit-pawar-over-karnataka-maharashtra-border-933162.html" itemprop="url" target="_blank">ಕನ್ನಡಿಗರೇ ಹೆಚ್ಚಾಗಿರುವ ಪ್ರದೇಶಗಳು ಮಹಾರಾಷ್ಟ್ರದಲ್ಲೂ ಇವೆ: ಎಚ್ಡಿಕೆ ತಿರುಗೇಟು</a></p>.<p>'ಪೊಲೀಸ್ಶ್ವಾನಗಳ ಸಹಾಯದಿಂದ ಆರೋಪಿಗಳನ್ನು ಬೆನ್ನತ್ತಲಾಯಿತು. ಕಿಡಿಗೇಡಿಯೊಬ್ಬ ಶರ್ಟ್ ಬಿಸಾಡಿದ್ದದ್ದು ಪತ್ತೆಯಾಯಿತು. ಈ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ಮುಂದುವರಿಸಲಾಯಿತು. ಇಂದು (ಭಾನುವಾರ) ಮಧ್ಯಾಹ್ನ ಮೂವರನ್ನೂ ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನಾಗಿರುವ ಬಾಲಕ ಈಗಾಗಲೇ ಕಳ್ಳತನಕ್ಕೆ ಸಂಬಂಧಿಸಿದಮೂರು ಪ್ರಕರಣಗಳಲ್ಲಿ ಕಾನೂನು ಸಂಘರ್ಷ ಎದುರಿಸುತ್ತಿದ್ದಾನೆ' ಎಂದು ವಿವರಿಸಿದ್ದಾರೆ.</p>.<p>ಮೂಲಗಳ ಪ್ರಕಾರ ಸಂತ್ರಸ್ತೆಯ ಪತಿ ಮೊದಲು ನೆರವಿಗಾಗಿ ಮನವಿ ಮಾಡಿದಾಗ ರೇಪೆಲ್ಲೆ ರೈಲ್ವೆ ಪೊಲೀಸ್ ಠಾಣೆಯವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಅವರು, ನೆರವು ಕೋರಿ ಪಟ್ಟಣ ಪೊಲೀಸ್ ಠಾಣೆಗೆ ಹೋಗುವಂತಾಗಿದೆ ಎನ್ನಲಾಗಿದೆ.</p>.<p>ಏತನ್ಮಧ್ಯೆ ಘಟನೆ ಕುರಿತು ಕಿಡಿಕಾರಿರುವ ಆಂಧ್ರ ಪ್ರದೇಶ ಮಹಿಳಾ ಆಯೋಗದ ಅಧ್ಯಕ್ಷೆ ವಿ. ಪದ್ಮಾ, ವಿಸ್ತೃತ ವರದಿ ನೀಡುವಂತೆ ಆಗ್ರಹಿಸಿದ್ದಾರೆ. ವಿರೋಧ ಪಕ್ಷಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯುತ್ತಿರುವುದನ್ನು ಈ ಪ್ರಕರಣ ಬಹಿರಂಗ ಪಡಿಸಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>