<p><strong>ಅಮರಾವತಿ</strong>: ನೆರೆಯ ತೆಲಂಗಾಣದಲ್ಲಿ ಜಾತಿಗಣತಿ ನಡೆಸಿದಂತೆ ರಾಜ್ಯದಲ್ಲಿಯೂ ಟಿಡಿಪಿ ನೇತೃತ್ವದ ಎನ್ಡಿಎ ಸರ್ಕಾರ ಜಾತಿ ಗಣತಿ ನಡೆಸಬೇಕು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಆಗ್ರಹಿಸಿದ್ದಾರೆ.</p><p>ತೆಲಂಗಾಣದ ಜಾತಿ ಗಣತಿ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಇದೊಂದು ಐತಿಹಾಸಿಕ ಬೆಳವಣಿಗೆ ಮತ್ತು ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ದೂರದೃಷ್ಟಿಯ ಉದಾಹರಣೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಮ್ಮ ರಾಜ್ಯದಲ್ಲೂ (ಆಂಧ್ರಪ್ರದೇಶ) ಜಾತಿ ಗಣತಿ ನಡೆಯಬೇಕು. ರಾಜ್ಯದ 5.5 ಕೋಟಿ ಜನಸಂಖ್ಯೆಯಲ್ಲಿ ಹಿಂದುಳಿದವರ ಸಂಖ್ಯೆ ಕಂಡುಹಿಡಿಯಬೇಕು. ಜಾತಿ ತಾರತಮ್ಯಕ್ಕೆ ಒಳಗಾಗಿರುವ ದುರ್ಬಲ ವರ್ಗದವರ ಸಂಖ್ಯೆಯನ್ನೂ ಲೆಕ್ಕ ಹಾಕಬೇಕು’ ಎಂದು ಹೇಳಿದ್ದಾರೆ.</p>.ಛತ್ತೀಸಗಢ | ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಗಾಯ.ಬಡತನ, ನಿರುದ್ಯೋಗದಿಂದ ಬೇಸತ್ತು ಜನರು ಮಹಾನಗರಗಳಿಗೆ ವಲಸೆ ಹೋಗ್ತಿದ್ದಾರೆ: ಗಡ್ಕರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ನೆರೆಯ ತೆಲಂಗಾಣದಲ್ಲಿ ಜಾತಿಗಣತಿ ನಡೆಸಿದಂತೆ ರಾಜ್ಯದಲ್ಲಿಯೂ ಟಿಡಿಪಿ ನೇತೃತ್ವದ ಎನ್ಡಿಎ ಸರ್ಕಾರ ಜಾತಿ ಗಣತಿ ನಡೆಸಬೇಕು ಎಂದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಆಗ್ರಹಿಸಿದ್ದಾರೆ.</p><p>ತೆಲಂಗಾಣದ ಜಾತಿ ಗಣತಿ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ಇದೊಂದು ಐತಿಹಾಸಿಕ ಬೆಳವಣಿಗೆ ಮತ್ತು ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ದೂರದೃಷ್ಟಿಯ ಉದಾಹರಣೆಯಾಗಿದೆ ಎಂದು ಅವರು ಬಣ್ಣಿಸಿದ್ದಾರೆ.</p><p>ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನಮ್ಮ ರಾಜ್ಯದಲ್ಲೂ (ಆಂಧ್ರಪ್ರದೇಶ) ಜಾತಿ ಗಣತಿ ನಡೆಯಬೇಕು. ರಾಜ್ಯದ 5.5 ಕೋಟಿ ಜನಸಂಖ್ಯೆಯಲ್ಲಿ ಹಿಂದುಳಿದವರ ಸಂಖ್ಯೆ ಕಂಡುಹಿಡಿಯಬೇಕು. ಜಾತಿ ತಾರತಮ್ಯಕ್ಕೆ ಒಳಗಾಗಿರುವ ದುರ್ಬಲ ವರ್ಗದವರ ಸಂಖ್ಯೆಯನ್ನೂ ಲೆಕ್ಕ ಹಾಕಬೇಕು’ ಎಂದು ಹೇಳಿದ್ದಾರೆ.</p>.ಛತ್ತೀಸಗಢ | ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೆ ಗಾಯ.ಬಡತನ, ನಿರುದ್ಯೋಗದಿಂದ ಬೇಸತ್ತು ಜನರು ಮಹಾನಗರಗಳಿಗೆ ವಲಸೆ ಹೋಗ್ತಿದ್ದಾರೆ: ಗಡ್ಕರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>