<p><strong>ಅಮರಾವತಿ</strong>: ಈ ವರ್ಷ ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳಲ್ಲಿ ಸಂಭವಿಸಿದ ದುರ್ಘಟನೆಗಳಲ್ಲಿ 22 ಮಂದಿ ಮೃತಪಟ್ಟು, 100ರಷ್ಟು ಜನರು ಗಾಯಗೊಂಡಿದ್ದಾರೆ.</p>.<p>ಶನಿವಾರವಷ್ಟೆ, ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ.</p>.<p>ಏಪ್ರಿಲ್ನಲ್ಲಿ ವಿಶಾಖಪಟ್ಟಣ ಸಮೀಪದ ಸಿಂಹಾಚಲದಲ್ಲಿರುವ ಶ್ರೀ ವರಾಹ ಲಕ್ಷ್ಮಿ ದೇವಸ್ಥಾನದಲ್ಲಿ ಸಂಭವಿಸಿದ ಅವಘಡದಲ್ಲಿ 7 ಜನರು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಅವಘಡ ಸಂಭವಿಸಿತ್ತು.</p>.<p>ಜನವರಿಯಲ್ಲಿ ತಿರುಪತಿಯ ಬೈರಾಗಿ ಪಟ್ಟೇದದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 6 ಜನ ಭಕ್ತರು ಮೃತಪಟ್ಟು, ಇತರ 40 ಮಂದಿ ಗಾಯಗೊಂಡಿದ್ದರು. ವೈಕುಂಠ ದ್ವಾರ ದರ್ಶನದ ಟಿಕೆಟ್ ಖರೀದಿಗಾಗಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಈ ವರ್ಷ ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳಲ್ಲಿ ಸಂಭವಿಸಿದ ದುರ್ಘಟನೆಗಳಲ್ಲಿ 22 ಮಂದಿ ಮೃತಪಟ್ಟು, 100ರಷ್ಟು ಜನರು ಗಾಯಗೊಂಡಿದ್ದಾರೆ.</p>.<p>ಶನಿವಾರವಷ್ಟೆ, ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ.</p>.<p>ಏಪ್ರಿಲ್ನಲ್ಲಿ ವಿಶಾಖಪಟ್ಟಣ ಸಮೀಪದ ಸಿಂಹಾಚಲದಲ್ಲಿರುವ ಶ್ರೀ ವರಾಹ ಲಕ್ಷ್ಮಿ ದೇವಸ್ಥಾನದಲ್ಲಿ ಸಂಭವಿಸಿದ ಅವಘಡದಲ್ಲಿ 7 ಜನರು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಅವಘಡ ಸಂಭವಿಸಿತ್ತು.</p>.<p>ಜನವರಿಯಲ್ಲಿ ತಿರುಪತಿಯ ಬೈರಾಗಿ ಪಟ್ಟೇದದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 6 ಜನ ಭಕ್ತರು ಮೃತಪಟ್ಟು, ಇತರ 40 ಮಂದಿ ಗಾಯಗೊಂಡಿದ್ದರು. ವೈಕುಂಠ ದ್ವಾರ ದರ್ಶನದ ಟಿಕೆಟ್ ಖರೀದಿಗಾಗಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>