<p><strong>ಕುಂಬುಂ:</strong> ಚಿಕ್ಕಮ್ಮನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನ ಅಸಭ್ಯ ವರ್ತನೆಯಿಂದ ಬೇಸತ್ತ ತಾಯಿ ಆತನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. </p>.<p>ಆರೋಪಿ ಕೆ. ಲಕ್ಷ್ಮೀದೇವಿ (57) ಅವರು ತಮ್ಮ ಮಗ ಕೆ. ಶ್ಯಾಮ್ ಪ್ರಸಾದ್ ಅವರನ್ನು ಫೆ.13ರಂದು ಕೊಲೆ ಮಾಡಿದ್ದಾರೆ. ಲಕ್ಷ್ಮೀ ಅವರ ಸಂಬಂಧಿಕರು ಈ ಕೊಲೆ ಮಾಡಲು ಸಹಾಯ ಮಾಡಿದ್ದಾರೆ ಎಂದು ಪ್ರಕಾಶಂ ಎಸ್ಪಿ ಎ.ಆರ್ ದಾಮೋದರ್ ತಿಳಿಸಿದರು. </p>.<p>ಅವಿವಾಹಿತನಾಗಿದ್ದ ಶ್ಯಾಮ್, ಬೆಂಗಳೂರು, ಖಮ್ಮಂ ಮತ್ತು ಹೈದರಾಬಾದ್ನಲ್ಲಿರುವ ತನ್ನ ಸಂಬಂಧಿಗಳು ಹಾಗೂ ಚಿಕ್ಕಮ್ಮನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಅವರ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ. ಇದನ್ನು ಸಹಿಸಲಾರದೆ ಲಕ್ಷ್ಮೀ ಆತನನ್ನು ಹತ್ಯೆ ಮಾಡಿದ್ದಾರೆ ಎಂದರು. </p>.<p>ಹರಿತವಾದ ವಸ್ತುವಿನಿಂದ ಶ್ಯಾಮ್ನನ್ನು ಹತ್ಯೆ ಮಾಡಿ, ಬಳಿಕ ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಚೀಲಗಳಲ್ಲಿ ತುಂಬಲಾಗಿದೆ. ನಂತರ ಆ ಚೀಲಗಳನ್ನು ನಾಕಲಗಂಡಿಯ ಕುಂಬುಂ ಗ್ರಾಮದ ಕಾಲುವೆಯಲ್ಲಿ ಎಸೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂಬುಂ:</strong> ಚಿಕ್ಕಮ್ಮನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನ ಅಸಭ್ಯ ವರ್ತನೆಯಿಂದ ಬೇಸತ್ತ ತಾಯಿ ಆತನನ್ನು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. </p>.<p>ಆರೋಪಿ ಕೆ. ಲಕ್ಷ್ಮೀದೇವಿ (57) ಅವರು ತಮ್ಮ ಮಗ ಕೆ. ಶ್ಯಾಮ್ ಪ್ರಸಾದ್ ಅವರನ್ನು ಫೆ.13ರಂದು ಕೊಲೆ ಮಾಡಿದ್ದಾರೆ. ಲಕ್ಷ್ಮೀ ಅವರ ಸಂಬಂಧಿಕರು ಈ ಕೊಲೆ ಮಾಡಲು ಸಹಾಯ ಮಾಡಿದ್ದಾರೆ ಎಂದು ಪ್ರಕಾಶಂ ಎಸ್ಪಿ ಎ.ಆರ್ ದಾಮೋದರ್ ತಿಳಿಸಿದರು. </p>.<p>ಅವಿವಾಹಿತನಾಗಿದ್ದ ಶ್ಯಾಮ್, ಬೆಂಗಳೂರು, ಖಮ್ಮಂ ಮತ್ತು ಹೈದರಾಬಾದ್ನಲ್ಲಿರುವ ತನ್ನ ಸಂಬಂಧಿಗಳು ಹಾಗೂ ಚಿಕ್ಕಮ್ಮನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಅವರ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ್ದ. ಇದನ್ನು ಸಹಿಸಲಾರದೆ ಲಕ್ಷ್ಮೀ ಆತನನ್ನು ಹತ್ಯೆ ಮಾಡಿದ್ದಾರೆ ಎಂದರು. </p>.<p>ಹರಿತವಾದ ವಸ್ತುವಿನಿಂದ ಶ್ಯಾಮ್ನನ್ನು ಹತ್ಯೆ ಮಾಡಿ, ಬಳಿಕ ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ, ಚೀಲಗಳಲ್ಲಿ ತುಂಬಲಾಗಿದೆ. ನಂತರ ಆ ಚೀಲಗಳನ್ನು ನಾಕಲಗಂಡಿಯ ಕುಂಬುಂ ಗ್ರಾಮದ ಕಾಲುವೆಯಲ್ಲಿ ಎಸೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>