<p><strong>ಅಮರಾವತಿ: </strong>ಆಂಧ್ರಪ್ರದೇಶದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಕಡಪಾ, ಅನಂತಪುರ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿ ಈವರೆಗೆ 25 ಜನರು ಮೃತಪಟ್ಟಿದ್ದು, ಇನ್ನೂ 17 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.</p>.<p>ಕಡಪಾ ಜಿಲ್ಲೆಯ ಚೆಯ್ಯೇರು ನದಿಯಲ್ಲಿ ಶುಕ್ರವಾರ ದಿಢೀರ್ ಉಂಟಾದ ಪ್ರವಾಹದಲ್ಲಿ 30ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದರು. ಅನಂತಪುರದ ಕದಿರಿ ಪಟ್ಟಣದಲ್ಲಿ ಮಳೆಯ ಹೊಡೆತಕ್ಕೆ ನಿರ್ಮಾಣ ಹಂತದ ಕಟ್ಟಡವೊಂದು ಪಕ್ಕದ ಕಟ್ಟಡದ ಮೇಲೆ ಕುಸಿದಿದ್ದು, ಇಬ್ಬರು ಮಕ್ಕಳು ಸೇರಿ ಆರು ಜನರುಮೃತಪಟ್ಟಿದ್ದಾರೆ.</p>.<p class="Subhead"><strong>ವೈಮಾನಿಕ ಸಮೀಕ್ಷೆ:</strong> ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<p>ನೆಲ್ಲೂರು ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗುತ್ತಿದ್ದು, ಪೆನ್ನಾರ್ ನದಿಯು ಹಲವು ಗ್ರಾಮಗಳನ್ನು ಜಲಾವೃತ ಮಾಡಿದೆ. ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.</p>.<p class="Subhead"><strong>ತಮಿಳುನಾಡಿನಲ್ಲಿ ಶೇ 68ರಷ್ಟು ಅಧಿಕ ಮಳೆ: </strong>ತಮಿಳುನಾಡಿನಲ್ಲಿ ಅಬ್ಬರದ ಹಿಂಗಾರು ಮಳೆಯಾಗಿದ್ದು, ವಾಡಿಕೆಗಿಂತ ಶೇ 68ರಷ್ಟು ಹೆಚ್ಚು ಮಳೆ ಸುರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜಾನುವಾರುಗಳು ಸಾವಿಗೀಡಾಗಿವೆ.</p>.<p class="Subhead"><strong>ಸಹಜಸ್ಥಿತಿಗೆ ಶಬರಿಮಲೆ ಯಾತ್ರೆ: </strong>ಕೇರಳದಪತ್ತಣಂತಿಟ್ಟಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಶಬರಿಮಲೆ ಯಾತ್ರೆ ಸಹಜಸ್ಥಿತಿಗೆ ಮರಳಿದೆ. ಭಕ್ತರಿಗೆ ಶಬರಿಮಲೆಗೆ ಪಾದಯಾತ್ರೆ ತೆರಳಲು ಶನಿವಾರ ಮಧ್ಯಾಹ್ನದ ಬಳಿಕ ಅನುಮತಿ ನೀಡಲಾಗಿದೆ.ಸತತ ಮಳೆಯಿಂದ ಪಂಬಾ ನದಿಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಹೀಗಾಗಿ ಶನಿವಾರದ ಶಬರಿಮಲೆ ಪಾದಯಾತ್ರೆಯನ್ನು ನಿರ್ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ: </strong>ಆಂಧ್ರಪ್ರದೇಶದಲ್ಲಿ ಶುಕ್ರವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಕಡಪಾ, ಅನಂತಪುರ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿ ಈವರೆಗೆ 25 ಜನರು ಮೃತಪಟ್ಟಿದ್ದು, ಇನ್ನೂ 17 ಜನರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.</p>.<p>ಕಡಪಾ ಜಿಲ್ಲೆಯ ಚೆಯ್ಯೇರು ನದಿಯಲ್ಲಿ ಶುಕ್ರವಾರ ದಿಢೀರ್ ಉಂಟಾದ ಪ್ರವಾಹದಲ್ಲಿ 30ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದರು. ಅನಂತಪುರದ ಕದಿರಿ ಪಟ್ಟಣದಲ್ಲಿ ಮಳೆಯ ಹೊಡೆತಕ್ಕೆ ನಿರ್ಮಾಣ ಹಂತದ ಕಟ್ಟಡವೊಂದು ಪಕ್ಕದ ಕಟ್ಟಡದ ಮೇಲೆ ಕುಸಿದಿದ್ದು, ಇಬ್ಬರು ಮಕ್ಕಳು ಸೇರಿ ಆರು ಜನರುಮೃತಪಟ್ಟಿದ್ದಾರೆ.</p>.<p class="Subhead"><strong>ವೈಮಾನಿಕ ಸಮೀಕ್ಷೆ:</strong> ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಪ್ರವಾಹಪೀಡಿತ ಪ್ರದೇಶಗಳಲ್ಲಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಮೃತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಘೋಷಿಸಲಾಗಿದೆ.</p>.<p>ನೆಲ್ಲೂರು ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗುತ್ತಿದ್ದು, ಪೆನ್ನಾರ್ ನದಿಯು ಹಲವು ಗ್ರಾಮಗಳನ್ನು ಜಲಾವೃತ ಮಾಡಿದೆ. ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ.</p>.<p class="Subhead"><strong>ತಮಿಳುನಾಡಿನಲ್ಲಿ ಶೇ 68ರಷ್ಟು ಅಧಿಕ ಮಳೆ: </strong>ತಮಿಳುನಾಡಿನಲ್ಲಿ ಅಬ್ಬರದ ಹಿಂಗಾರು ಮಳೆಯಾಗಿದ್ದು, ವಾಡಿಕೆಗಿಂತ ಶೇ 68ರಷ್ಟು ಹೆಚ್ಚು ಮಳೆ ಸುರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಜಾನುವಾರುಗಳು ಸಾವಿಗೀಡಾಗಿವೆ.</p>.<p class="Subhead"><strong>ಸಹಜಸ್ಥಿತಿಗೆ ಶಬರಿಮಲೆ ಯಾತ್ರೆ: </strong>ಕೇರಳದಪತ್ತಣಂತಿಟ್ಟಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು ಶಬರಿಮಲೆ ಯಾತ್ರೆ ಸಹಜಸ್ಥಿತಿಗೆ ಮರಳಿದೆ. ಭಕ್ತರಿಗೆ ಶಬರಿಮಲೆಗೆ ಪಾದಯಾತ್ರೆ ತೆರಳಲು ಶನಿವಾರ ಮಧ್ಯಾಹ್ನದ ಬಳಿಕ ಅನುಮತಿ ನೀಡಲಾಗಿದೆ.ಸತತ ಮಳೆಯಿಂದ ಪಂಬಾ ನದಿಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಹೀಗಾಗಿ ಶನಿವಾರದ ಶಬರಿಮಲೆ ಪಾದಯಾತ್ರೆಯನ್ನು ನಿರ್ಬಂಧಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>