ನವದೆಹಲಿ: ಗರ್ಭಿಣಿಯರು ಹಾಗೂ ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ಸ್ಥಾಪನೆ ಮಾಡುವ ಅಧಿಕಾರವನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಗರ್ಭಿಣಿಯರು ಹಾಗೂ ಮಕ್ಕಳು ಸುಲಭವಾಗಿ ಅಂಗನವಾಡಿ ಕೇಂದ್ರಗಳನ್ನು ತಲುಪಬೇಕು. ಆ ಮೂಲಕ ಅಲ್ಲಿನ ಸೌಲಭ್ಯಗಳೂ ಸುಲಭವಾಗಿ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ನಗರ ಪ್ರದೇಶಗಳಲ್ಲಿ ಫಲಾನುಭವಿಗಳು ವಾಸಿಸುವ ಪ್ರದೇಶದಿಂದ ಅಂಗನವಾಡಿ ಕೇಂದ್ರ 5 ಕಿ.ಮೀ.ಗಿಂತ ಹೆಚ್ಚು ದೂರ ಇರಬಾರದು. ಪಟ್ಟಣ ಪ್ರದೇಶದಲ್ಲಿ 3 ಕಿ.ಮೀ. ಹಾಗೂ ಬುಡಕಟ್ಟು ಜನರು ವಾಸಿಸುವ ಸ್ಥಳಗಳಲ್ಲಿ 1.5 ಕಿ.ಮೀ.ಗಿಂತ ಹೆಚ್ಚು ದೂರ ಇರಬಾರದು ಎಂದು ಇವೇ ಮೂಲಗಳು ತಿಳಿಸಿವೆ.
ಮುಖ್ಯಾಂಶಗಳು
* 10 ಕೋಟಿಅಂಗನವಾಡಿಯಲ್ಲಿನ ಸೌಲಭ್ಯ ಪಡೆಯುವ ಫಲಾನುಭವಿಗಳ ಸಂಖ್ಯೆ