<p><strong>ಮುಂಬೈ:</strong> ತನ್ನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಕೇಕ್ ತರುಲು ತಡ ಮಾಡಿದರು ಎಂದು ಕೋಪಗೊಂಡ ವ್ಯಕ್ತಿಯೊಬ್ಬ, ಪತ್ನಿ ಹಾಗೂ ಪುತ್ರನಿಗೆ ಚಾಕುವಿನಿಂದ ಇರಿದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ.</p>.<p>‘ಕಳೆದ ಶನಿವಾರ ಆರೋಪಿ ರಾಜೇಂದ್ರ ಶಿಂದೆಯ ಹುಟ್ಟುಹಬ್ಬವಿತ್ತು. ಮನೆಗೆಲಸ ಮಾಡುತ್ತಿದ್ದ ಆತನ ಪತ್ನಿ, ಕೆಲಸದ ಸ್ಥಳದಲ್ಲಿ ವಿಳಂಬವಾಗಿದ್ದರಿಂದ ಮರುದಿನ ಕೇಕ್ ತಂದು ಹುಟ್ಟುಹಬ್ಬ ಆಚರಣೆಗೆ ಮುಂದಾಗಿದ್ದರು. ಈ ವೇಳೆ ಕೋಪಗೊಂಡ ಶಿಂದೆ, ಪತ್ನಿಯೊಂದಿಗೆ ಜಗಳ ಶುರು ಮಾಡಿದ್ದಾನೆ. ಜಗಳ ಬಿಡಿಸಲು ಬಂದ ಪುತ್ರನಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಪುತ್ರನ ರಕ್ಷಣೆಗೆ ಮುಂದಾದ ಪತ್ನಿಯ ಮುಂಗೈಗೆ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆರೋಪಿ ರಾಜೇಂದ್ರ ತನ್ನ ಪುತ್ರನ ಪಕ್ಕೆಲುಬು ಮತ್ತು ಎದೆಯ ಭಾಗಕ್ಕೆ ಬಲವಾಗಿ ಇರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಂದ್ರ ಪತ್ನಿ ರಂಜನಾ ಶಿಂದೆ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಸಂಬಂಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ತನ್ನ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಕೇಕ್ ತರುಲು ತಡ ಮಾಡಿದರು ಎಂದು ಕೋಪಗೊಂಡ ವ್ಯಕ್ತಿಯೊಬ್ಬ, ಪತ್ನಿ ಹಾಗೂ ಪುತ್ರನಿಗೆ ಚಾಕುವಿನಿಂದ ಇರಿದಿರುವ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ.</p>.<p>‘ಕಳೆದ ಶನಿವಾರ ಆರೋಪಿ ರಾಜೇಂದ್ರ ಶಿಂದೆಯ ಹುಟ್ಟುಹಬ್ಬವಿತ್ತು. ಮನೆಗೆಲಸ ಮಾಡುತ್ತಿದ್ದ ಆತನ ಪತ್ನಿ, ಕೆಲಸದ ಸ್ಥಳದಲ್ಲಿ ವಿಳಂಬವಾಗಿದ್ದರಿಂದ ಮರುದಿನ ಕೇಕ್ ತಂದು ಹುಟ್ಟುಹಬ್ಬ ಆಚರಣೆಗೆ ಮುಂದಾಗಿದ್ದರು. ಈ ವೇಳೆ ಕೋಪಗೊಂಡ ಶಿಂದೆ, ಪತ್ನಿಯೊಂದಿಗೆ ಜಗಳ ಶುರು ಮಾಡಿದ್ದಾನೆ. ಜಗಳ ಬಿಡಿಸಲು ಬಂದ ಪುತ್ರನಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಪುತ್ರನ ರಕ್ಷಣೆಗೆ ಮುಂದಾದ ಪತ್ನಿಯ ಮುಂಗೈಗೆ ಚುಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆರೋಪಿ ರಾಜೇಂದ್ರ ತನ್ನ ಪುತ್ರನ ಪಕ್ಕೆಲುಬು ಮತ್ತು ಎದೆಯ ಭಾಗಕ್ಕೆ ಬಲವಾಗಿ ಇರಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಂದ್ರ ಪತ್ನಿ ರಂಜನಾ ಶಿಂದೆ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಸಂಬಂಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>