<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ನಡೆಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು (ಇ.ಡಿ) ರಿಲಯನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಹೊಸತಾಗಿ ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ನವೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕಳೆದ ಆಗಸ್ಟ್ ತಿಂಗಳಲ್ಲಿಯೂ ತನಿಖಾ ಸಂಸ್ಥೆಯು 66 ವರ್ಷದ ಅನಿಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತ್ತು.</p>.<p class="title">ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ(ಎಸ್ಬಿಐ) ₹2,929 ಕೋಟಿ ವಂಚನೆ ಮಾಡಿದ ಆರೋಪ ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ (ಆರ್ಕಾಮ್) ಕಂಪನಿ ಮೇಲಿದೆ. ಈ ಸಂಬಂಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ ಬಾರಿಯಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿಯೇ ಹೇಳಿಕೆ ದಾಖಲಿಸಿಕೊಳ್ಳಲಿದೆ ಎಂದು ಮೂಲವು ತಿಳಿಸಿದೆ.</p>.<p class="title">ಕೇಂದ್ರ ತನಿಖಾ ದಳ (ಸಿಬಿಐ) ಸಂಸ್ಥೆಯು ಆಗಸ್ಟ್ 21ರಂದು ದಾಖಲಿಸಿದ ಎಫ್ಐಆರ್ ಆಧರಿಸಿ ಇ.ಡಿ ತನಿಖೆ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರಿಗೆ ಸೇರಿದ ಮುಂಬೈನ ಹಲವು ಸ್ಥಳಗಳ ಮೇಲೂ ಸಿಬಿಐ ಶೋಧ ನಡೆಸಿತ್ತು.</p>.<p class="title">ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಆರ್ಕಾಮ್ ₹ 40,000 ಕೋಟಿ ಸಾಲ ಬಾಕಿ ಇರಿಸಿಕೊಂಡಿದೆ. ಎಸ್ಬಿಐ ಒಂದಕ್ಕೇ ₹ 2,929 ಕೋಟಿ ನಷ್ಟ ಉಂಟು ಮಾಡಿದೆ ಎಂಬ ಆರೋಪ ಎಸ್ಬಿಐ ಸಲ್ಲಿಸಿರುವ ದೂರು ಆಧರಿಸಿ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿದೆ.</p>.<p class="title">ಆರ್ಕಾಮ್ ಮತ್ತು ಅದರ ಸಹವರ್ತಿ ಕಂಪನಿಗಳಿಗೆ ಸೇರಿದ ನ₹ 7,500 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಮುಟ್ಟುಗೋಲು ಹಾಕಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ನಡೆಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು (ಇ.ಡಿ) ರಿಲಯನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಹೊಸತಾಗಿ ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>ನವೆಂಬರ್ 14ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಕಳೆದ ಆಗಸ್ಟ್ ತಿಂಗಳಲ್ಲಿಯೂ ತನಿಖಾ ಸಂಸ್ಥೆಯು 66 ವರ್ಷದ ಅನಿಲ್ ಅವರನ್ನು 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತ್ತು.</p>.<p class="title">ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ(ಎಸ್ಬಿಐ) ₹2,929 ಕೋಟಿ ವಂಚನೆ ಮಾಡಿದ ಆರೋಪ ರಿಲಯನ್ಸ್ ಕಮ್ಯೂನಿಕೇಷನ್ ಲಿಮಿಟೆಡ್ (ಆರ್ಕಾಮ್) ಕಂಪನಿ ಮೇಲಿದೆ. ಈ ಸಂಬಂಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಕಳೆದ ಬಾರಿಯಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿಯೇ ಹೇಳಿಕೆ ದಾಖಲಿಸಿಕೊಳ್ಳಲಿದೆ ಎಂದು ಮೂಲವು ತಿಳಿಸಿದೆ.</p>.<p class="title">ಕೇಂದ್ರ ತನಿಖಾ ದಳ (ಸಿಬಿಐ) ಸಂಸ್ಥೆಯು ಆಗಸ್ಟ್ 21ರಂದು ದಾಖಲಿಸಿದ ಎಫ್ಐಆರ್ ಆಧರಿಸಿ ಇ.ಡಿ ತನಿಖೆ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರಿಗೆ ಸೇರಿದ ಮುಂಬೈನ ಹಲವು ಸ್ಥಳಗಳ ಮೇಲೂ ಸಿಬಿಐ ಶೋಧ ನಡೆಸಿತ್ತು.</p>.<p class="title">ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಆರ್ಕಾಮ್ ₹ 40,000 ಕೋಟಿ ಸಾಲ ಬಾಕಿ ಇರಿಸಿಕೊಂಡಿದೆ. ಎಸ್ಬಿಐ ಒಂದಕ್ಕೇ ₹ 2,929 ಕೋಟಿ ನಷ್ಟ ಉಂಟು ಮಾಡಿದೆ ಎಂಬ ಆರೋಪ ಎಸ್ಬಿಐ ಸಲ್ಲಿಸಿರುವ ದೂರು ಆಧರಿಸಿ ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿದೆ.</p>.<p class="title">ಆರ್ಕಾಮ್ ಮತ್ತು ಅದರ ಸಹವರ್ತಿ ಕಂಪನಿಗಳಿಗೆ ಸೇರಿದ ನ₹ 7,500 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಮುಟ್ಟುಗೋಲು ಹಾಕಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>